ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಬಲೆಗೆ ಮೀನುಗಾರಿಕೆ ಸಚಿವರು!
ಮುಂಬೈ, ಜುಲೈ.20: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪ್ರಮಾಣವು ದಿನದಿಂದ ದಿನಕ್ಕೆ ಗಣನೀಯ ಏರಿಕೆ ಕಂಡು ಬಂದಿದೆ. ರಾಜ್ಯದಲ್ಲಿ ಜನಸಾಮಾನ್ಯರಷ್ಟೇ ಅಲ್ಲದೇ ಜನಪ್ರತಿನಿಧಿಗಳ ಎದೆಯಲ್ಲೂ ನಡುಕ ಹುಟ್ಟಿಸುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.
Recommended Video
ಮಹಾರಾಷ್ಟ್ರದ ಜವಳಿ, ಬಂದರು, ಮೀನುಗಾರಿಕೆ ಮತ್ತು ರಕ್ಷಕರ ಸಚಿವ ಅಸ್ಲಂ ಶೇಖ್ ಅವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿರುವ ಬಗ್ಗೆ ಸ್ವತಃ ಸಚಿವರೇ ಸ್ಪಷ್ಟಪಡಿಸಿದ್ದಾರೆ.
ಕೊವಿಡ್-19 ತಪಾಸಣೆ ನಡೆಸಿದ ಸಂದರ್ಭದಲ್ಲಿ ನನಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, ಸದ್ಯದ ಮಟ್ಟಿಗೆ ನಾನು ಸೆಲ್ಫ್ ಹೋಮ್ ಕ್ವಾರೆಂಟೈನ್ ನಲ್ಲಿ ಇದ್ದೇನೆ ಎಂದು ಸಚಿವ ಅಸ್ಲಂ ಶೇಖ್ ಟ್ವೀಟ್ ಮಾಡಿದ್ದಾರೆ.

ಸ್ನೇಹಿತರು ಮತ್ತು ಬೆಂಬಲಿಗರಿಗೆ ಸಂದೇಶ:
ಕೊರೊನಾವೈರಸ್ ಸೋಂಕು ತಗಲಿರುವುದು ಖಾತ್ರಿಯಾಗುತ್ತಿದ್ದಂತೆ ಜವಳಿ, ಬಂದರು, ಮೀನುಗಾರಿಕೆ ಮತ್ತು ರಕ್ಷಕರ ಸಚಿವ ಅಸ್ಲಂ ಶೇಖ್ ತಮ್ಮ ಬೆಂಬಲಿಗರು ಮತ್ತು ಸ್ನೇಹಿತರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ನನ್ನ ಜೊತೆಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕವನ್ನು ಹೊಂದಿರುವ ಪ್ರತಿಯೊಬ್ಬರು ಕೂಡಾ ಕೊವಿಡ್-19 ಟೆಸ್ಟ್ ಮಾಡಿಸಿಕೊಳ್ಳುವಂತೆ ಟ್ವಿಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ವಿರುದ್ಧ ಯುದ್ಧದ ರೀತಿಯಲ್ಲಿ ಹೋರಾಡಬೇಕಾದಂತಹ ಪರಿಸ್ಥಿತಿಯಿದೆ. ಈ ಹಿನ್ನೆಲೆಯ ನಾನು ಮನೆಯಲ್ಲಿದ್ದುಕೊಂಡೇ ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.












Click it and Unblock the Notifications