ಕುಡಿಯಲು ಬಾರ್ಗೆ ಹೋಗ್ಬೇಕಿಲ್ಲ; ಆರ್ಡರ್ ಮಾಡಿದರೆ ಮನೆ ಬಾಗಿಲಿಗೇ ಬರುತ್ತದೆ 'ಎಣ್ಣೆ'
Recommended Video

ನಾಗ್ಪುರ, ಅಕ್ಟೋಬರ್ 14: ಕುಡಿತ ಮಿತಿಮೀರಿ ಮನೆಗೆ ಬರುವ ದಾರಿಯೇ ತಪ್ಪುವುದು, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಮಾಡುವುದು, ಹೆಂಡತಿ ಬಾಗಿಲು ತೆರೆದಿಲ್ಲವೆಂದರೆ ಗಲಾಟೆ ಮಾಡುವುದು... ಈ ಎಲ್ಲ ಸಂಕಷ್ಟಗಳ ಉಸಾಬರಿ ಗಂಡಸರಿಗೆ ಬೇಡ ಎಂದು ಮಹಾರಾಷ್ಟ್ರ ಸರ್ಕಾರ ಹೊಸ ಐಡಿಯಾ ಮಾಡಿದೆ.
ಮನೆ ಬಾಗಿಲಿಗೇ ಮದ್ಯ ಪೂರೈಕೆ ಮಾಡುವ ಹೊಸ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆಸಿರುವುದಾಗಿ ಅಲ್ಲಿನ ಅಬಕಾರಿ ಸಚಿವ ಚಂದ್ರಶೇಖರ ಬವಂಕುಲೆ ಹೇಳಿದ್ದಾರೆ.
ಈ ಮೂಲಕ ಮಹಾರಾಷ್ಟ್ರ ಇಂತಹ ನೀತಿಯನ್ನು ಅಳವಡಿಸಿಕೊಳ್ಳುವ ದೇಶದ ಮೊದಲ ರಾಜ್ಯ ಎಂದೆನಿಸಿದೆ.

ಆದರೆ, ಅವರ ಹೇಳಿಕೆಗೆ ಸಾಮಾಜಿಕ ಕಾರ್ಯಕರ್ತರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವ ಬವಂಕುಲೆ ಯೂಟರ್ನ್ ತೆಗೆದುಕೊಂಡಿದ್ದಾರೆ. ಹೀಗಾಗಿ ಅಲ್ಲಿನ ಮದ್ಯಪ್ರಿಯರಲ್ಲಿ ಮೂಡಿದ್ದ ಉತ್ಸಾಹದ ನಶೆ ಜರ್ರನೆ ಇಳಿದುಹೋಗಿದೆ.
ಮದ್ಯದ ಆನ್ಲೈನ್ ಮಾರಾಟ ಮತ್ತು ಮನೆಗೆ ಪೂರೈಕೆ ಸೇವೆಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಹಲವು ಅರ್ಜಿಗಳು ಬಂದಿದ್ದವು. ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಸಲುವಾಗಿಯೇ ವಾಟ್ಸ್ಆಪ್ ಗ್ರೂಪ್ ರಚಿಸಿಕೊಂಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಕ್ರಮ ತೆಗೆದುಕೊಂಡ ಬಳಿಕ ಈ ರೀತಿಯ ಅರ್ಜಿಗಳು ಬಂದಿದ್ದವು. ಆದರೆ, ಇದುವರೆಗೂ ಈ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮದ್ಯ ಸೇವಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತವೆ. ಇದರಿಂದ ಭಾರಿ ಪ್ರಮಾಣದ ಸಾವು ನೋವು ಸಂಭವಿಸುತ್ತವೆ. ಇಂತಹ ಪ್ರಕರಣಗಳನ್ನು ತಗ್ಗಿಸುವುದೇ ಮನೆಗೆ ಮದ್ಯಪೂರೈಕೆ ಯೋಜನೆಯ ಮುಖ್ಯ ಉದ್ದೇಶ ಎಂದು ಸಚಿವರು ಹೇಳಿದ್ದರು.
ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಇ-ಕಾಮರ್ಸ್ ವೆಬ್ಸೈಟ್ಗಳ ಮಾದರಿಯಲ್ಲಿ ಜನರು ದಿನಸಿ ಮತ್ತು ತರಕಾರಿಗಳನ್ನು ತರಿಸಿಕೊಳ್ಳುವಂತೆ ಮನೆಗಳಿಗೆ ಆಲ್ಕೊಹಾಲ್ಅನ್ನು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications