ಮಾಲೆಂಗಾವ್ ಸ್ಫೋಟ ಕೇಸ್ : ಲೆ.ಕ. ಪುರೋಹಿತ್ ಅರ್ಜಿ ತಿರಸ್ಕೃತ, ಹಿನ್ನಡೆ
ಮುಂಬೈ, ಅಕ್ಟೋಬರ್ 30: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರು ಸಲ್ಲಿಸಿದ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಇಂದು(ಅಕ್ಟೋಬರ್ 30) ತಿರಸ್ಕರಿಸಿದೆ. ದೋಷಾರೋಪಣ ಸಲ್ಲಿಕೆ ವಿರುದ್ಧ ಪುರೋಹಿತ್ ಅವರು ಮೇಲ್ಮನವಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಗೆ ಸುಪ್ರಿಂ ಕೋರ್ಟ್ ನಿಂದ 2017ರ ಅಗಸ್ಟ್ ತಿಂಗಳಿನಲ್ಲಿ ಜಾಮೀನು ಸಿಕ್ಕಿದೆ. ಆದರೆ, ತಮ್ಮ ವಿರುದ್ಧ ಎನ್ಐಎ ಹಾಕಿರುವ 'ಭಯೋತ್ಪಾದನಾ ಸಂಚು ' ಎಂಬ ದೋಷಾರೋಪಣ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಆದರೆ, ಪುರೋಹಿತ್ ಸೇರಿದಂತೆ 7 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿ, ತನಿಖೆ ಕೈಗೊಳ್ಳುವಂತೆ ಎನ್ಐಎ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆ ನವೆಂಬರ್ 02ರಂದು ನಡೆಯಲಿದೆ.

2008ರ ಸೆಪ್ಟಂಬರ್ 29ರಂದು ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ ಸುಮಾರು 270 ಕಿ.ಮೀ. ದೂರದಲ್ಲಿರುವ ಮಾಲೆಗಾಂವ್ ನಲ್ಲಿ ಅವಳಿ ಬಾಂಬ್ ಗಳು ಸ್ಫೋಟಗೊಂಡಿತ್ತು. ಸ್ಫೋಟಕಗಳನ್ನು ಪೂರೈಸಿ, ಸಂಚು ರೂಪಿಸಿದ ಆರೋಪ ಕರ್ನಲ್ ಪುರೋಹಿತ್ ಸೇರಿದಂತೆ ಹಲವರ ಮೇಲೆ ಕೇಳಿ ಬಂದಿತ್ತು.
2008ರ ಸೆಪ್ಟಂಬರ್ 29ರಂದು ಮಹಾರಾಷ್ಟ್ರದ ರಾಜಧಾನಿ ಈ ಪ್ರಕರಣದ ಆರೋಪಿಗಳಾಗಿ ಸಾಧ್ವಿ ಪ್ರಗ್ಯಾ ಸಿಂಗ್, ಪುಣೆಯ ಅಭಿನವ್ ಭರತ್, ಸೇನಾಧಿಕಾರಿ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರನ್ನು ಮೋಕಾ ಕಾಯ್ದೆಯಡಿ ಪೊಲೀಸರು ಬಂಧಿಸಿ, ಜೈಲಿಗೆ ಕಳಿಸಿದ್ದರು. ಆದರೆ, Maharashtra Control of Organised Crimes Act (ಮೋಕಾ) ಕಾಯ್ದೆ ಅಡಿಯಲ್ಲಿ ಸಾಧ್ವಿ ವಿರುದ್ಧ ಹಾಕಲಾದ ಆರೊಪಗಳೆಲ್ಲವೂ ತಿರಸ್ಕರಿಸಲ್ಪಟ್ಟಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications