ಮಾಲೆಂಗಾವ್ ಸ್ಫೋಟ ಕೇಸ್ : ಲೆ.ಕ. ಪುರೋಹಿತ್ ಅರ್ಜಿ ತಿರಸ್ಕೃತ, ಹಿನ್ನಡೆ
ಮುಂಬೈ, ಅಕ್ಟೋಬರ್ 30: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರು ಸಲ್ಲಿಸಿದ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಇಂದು(ಅಕ್ಟೋಬರ್ 30) ತಿರಸ್ಕರಿಸಿದೆ. ದೋಷಾರೋಪಣ ಸಲ್ಲಿಕೆ ವಿರುದ್ಧ ಪುರೋಹಿತ್ ಅವರು ಮೇಲ್ಮನವಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಗೆ ಸುಪ್ರಿಂ ಕೋರ್ಟ್ ನಿಂದ 2017ರ ಅಗಸ್ಟ್ ತಿಂಗಳಿನಲ್ಲಿ ಜಾಮೀನು ಸಿಕ್ಕಿದೆ. ಆದರೆ, ತಮ್ಮ ವಿರುದ್ಧ ಎನ್ಐಎ ಹಾಕಿರುವ 'ಭಯೋತ್ಪಾದನಾ ಸಂಚು ' ಎಂಬ ದೋಷಾರೋಪಣ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಆದರೆ, ಪುರೋಹಿತ್ ಸೇರಿದಂತೆ 7 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿ, ತನಿಖೆ ಕೈಗೊಳ್ಳುವಂತೆ ಎನ್ಐಎ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆ ನವೆಂಬರ್ 02ರಂದು ನಡೆಯಲಿದೆ.

2008ರ ಸೆಪ್ಟಂಬರ್ 29ರಂದು ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ ಸುಮಾರು 270 ಕಿ.ಮೀ. ದೂರದಲ್ಲಿರುವ ಮಾಲೆಗಾಂವ್ ನಲ್ಲಿ ಅವಳಿ ಬಾಂಬ್ ಗಳು ಸ್ಫೋಟಗೊಂಡಿತ್ತು. ಸ್ಫೋಟಕಗಳನ್ನು ಪೂರೈಸಿ, ಸಂಚು ರೂಪಿಸಿದ ಆರೋಪ ಕರ್ನಲ್ ಪುರೋಹಿತ್ ಸೇರಿದಂತೆ ಹಲವರ ಮೇಲೆ ಕೇಳಿ ಬಂದಿತ್ತು.
2008ರ ಸೆಪ್ಟಂಬರ್ 29ರಂದು ಮಹಾರಾಷ್ಟ್ರದ ರಾಜಧಾನಿ ಈ ಪ್ರಕರಣದ ಆರೋಪಿಗಳಾಗಿ ಸಾಧ್ವಿ ಪ್ರಗ್ಯಾ ಸಿಂಗ್, ಪುಣೆಯ ಅಭಿನವ್ ಭರತ್, ಸೇನಾಧಿಕಾರಿ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರನ್ನು ಮೋಕಾ ಕಾಯ್ದೆಯಡಿ ಪೊಲೀಸರು ಬಂಧಿಸಿ, ಜೈಲಿಗೆ ಕಳಿಸಿದ್ದರು. ಆದರೆ, Maharashtra Control of Organised Crimes Act (ಮೋಕಾ) ಕಾಯ್ದೆ ಅಡಿಯಲ್ಲಿ ಸಾಧ್ವಿ ವಿರುದ್ಧ ಹಾಕಲಾದ ಆರೊಪಗಳೆಲ್ಲವೂ ತಿರಸ್ಕರಿಸಲ್ಪಟ್ಟಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications