ಅನೈತಿಕ ಸಂಬಂಧ, ಐಸಿಯುನಲ್ಲಿ ಮದುವೆ, ಪ್ರಿಯಕರ ಮಾತ್ರ ಪರಾರಿ!
ಮುಂಬೈ, ಡಿಸೆಂಬರ್.09: ಪ್ರೀತಿ, ಪ್ರೇಮ, ಪ್ರಣಯ. ಈ ಪದಗಳು ಕೇಳುವುದಕ್ಕೆ ಎಷ್ಟು ಚೆಂದವೋ ಅಷ್ಟೇ ಅಪಾಯ. ಏಕೆಂದರೆ ಹೀಗೆ ಪ್ರೀತಿಸು, ಪ್ರೀತಿಸು ಎಂದು ಪೀಡಿಸುತ್ತಿದ್ದ ಪ್ರಿಯಕರ ಮದುವೆ ಅಂದಾಕ್ಷಣ ಬೆಚ್ಚಿ ಬಿದ್ದಿದ್ದಾನೆ. ಪ್ರಿಯಕರ ನಡೆಯಿಂದ ನೊಂದ ಪ್ರೇಯಸಿ ಮಾತ್ರ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಅಚ್ಚರಿ ಎನಿಸಿದರೂ ಇದು ಸತ್ಯ. ಮಹಾರಾಷ್ಟ್ರ ಪುಣೆಯಲ್ಲಿ ಇಂಥದೊಂದು ವಿಚಿತ್ರ ಘಟನೆ ನಡೆದಿದೆ. ಪ್ರೀತಿ ಹೆಸರಿನಲ್ಲಿ ಮೋಜು-ಮಸ್ತಿ ಮಾಡಿದ ಸೂರಜ್ ನಾಲ್ವಾಡ್ ಎಂಬಾತ ನಂತರ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.
ಯುವಕನ ವರ್ತನೆಯಿಂದ ನೊಂದ ಯುವತಿ ಕಳೆದ ನವೆಂಬರ್.27ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು. ಈ ವೇಳೆ ಆಸ್ಪತ್ರೆಗೆ ತೆರಳಿದ್ದ ಪ್ರಿಯಕರ ಸೂರಜ್ ನಾಲ್ವಾಡ್, ಪುಣೆ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಯುವತಿ ಕೊರಳಿಗೆ ಮಾಂಗಲ್ಯಧಾರಣೆ ಮಾಡುವ ಮೂಲಕ ಮದುವೆಯಾಗಿದ್ದನು. ಆದರೆ, ಈಗ ಪತ್ನಿಗೂ ಹೇಳದೇ, ಕೇಳದೇ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಾತಿ ನೆಪದಲ್ಲಿ ಮದುವೆಗೆ ನಿರಾಕರಣೆ
ನಿನ್ನ ನಾನು ಪ್ರೀತಿಸುತ್ತೇನ, ನೀನೇ ಲೈಲಾ, ನಾನೇ ಮಜನು ಎಂದೆಲ್ಲ ಡೈಲಾಗ್ ಹೊಡೆಯುತ್ತಿದ್ದ ಸೂರಜ್ ನಾಲ್ವಾಡ್ ಈಗ ತನ್ನ ಲೈಲಾಗೆ ಕೈ ಕೊಟ್ಟು ಪರಾರಿ ಆಗಿದ್ದಾನೆ. ಈ ಮೊದಲು ಪ್ರಿಯತಮೆ ಜೊತೆ ಲೈಂಗಿಕ ಸಂಪರ್ಕ ಬೆಳೆಸಲು ಸೂರಜ್ ಪೀಡಿಸಿದ್ದಾನೆ. ಎಲ್ಲವೂ ಮುಗಿದ ಮೇಲೆ ನೀನು ಕೀಳು ಜಾತಿಯವಳಾಗಿದ್ದು, ನಿನ್ನ ಜೊತೆ ವಿವಾಹ ಅಸಾಧ್ಯ ಎಂದು ರಾಗ ಹಾಡಿದ್ದಾನೆ. ಇದರಿಂದ ನೊಂದು ಯುವತಿ ವಿಷ ಸೇವಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.

ಇದರ ಮಧ್ಯೆ ಪೊಲೀಸರಿಗೆ ಸೂರಜ್ ನಾಲ್ವಾಡ್ ವಿರುದ್ಧ ಯುವತಿಯೇ ದೂರು ದಾಖಲಿಸಿದ್ದಾಳೆ. ಐಸಿಯುನಲ್ಲಿ ತಾಳಿ ಕಟ್ಟಿದ ಗಂಡನನ್ನು ಹುಡುಕಿ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾಳೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications