ಮಹೇಶ್ ಭಟ್ ಕುಟುಂಬಕ್ಕೆ ಕೊಲೆ ಬೆದರಿಕೆ, ಆರೋಪಿ ಬಂಧನ
ಮುಂಬೈ, ಮಾರ್ಚ್ 2 : 'ಹಿಲ್ ಹೈ ಕೆ ಮಾನತಾ ನಹಿ' ಚಿತ್ರದ ಖ್ಯಾತಿಯ ಬಾಲಿವುಡ್ ನಿರ್ದೇಶಕ ಮಹೇಶ್ ಭಟ್ ಅವರಿಗೆ ಕರೆ ಮಾಡಿ ಆಲಿಯಾ ಭಟ್ ಮತ್ತು ಪತ್ನಿ ಸೋನಿ ರಾಜ್ದಾನ್ ರನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದ ಸಂದೀಪ್ ಸಹು ಎಂಬ ೨೭ ವರ್ಷದ ವ್ಯಕ್ತಿಯನ್ನು ಬಂಧಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ.
ಫೆಬ್ರವರಿ 26ರಂದು ಬಾಲಿವುಡ್ ನಿರ್ದೇಶಕ ಮಹೇಶ್ ಭಟ್ ಅವರಿಗೆ ಕರೆ ಮಾಡಿದ ಅನಾಮಿಕ ವ್ಯಕ್ತಿಯೊಬ್ಬ ತಾನು ಗ್ಯಾಂಗ್ ಲೀಡರ್ ಎಂದೂ, ತನಗೆ 50 ಲಕ್ಷ ರೂಪಾಯಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದ. ಈ ಹಣವನ್ನು ನೀಡದೇ ಇದ್ದಲ್ಲಿ ಅವರ ಪುತ್ರಿ, 'ಉಡ್ತಾ ಪಂಜಾಬ್' ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ಪತ್ನಿ ಸೋನಿ ರಾಜ್ದಾನ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದ.[ಮಂಗಳೂರಿನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರರ ಬಂಧನ]

ಈ ವಿಷಯವನ್ನು ಹೆಚ್ಚು ಗಂಭೀರವಾಗಿ ಪರಿಗಣಿಸದ ಮಹೇಶ್ ಭಟ್ ಅವರ ವಾಟ್ಸ್ ಆಪ್ ನಂಬರ್ ಗೆ ಈ ವ್ಯಕ್ತಿ ಮತ್ತೊಮ್ಮೆ ಮೆಸೇಜ್ ಮಾಡಿದ್ದ. ನನ್ನ ಕರೆಯನ್ನು ಹಗುರವಾಗಿ ಪರಿಗಣಿಸಬೇಡಿ. ಹಣ ನೀಡದೇ ಇದ್ದಲ್ಲಿ ನಿಮ್ಮ ಮಗಳು, ಮತ್ತು ಪತ್ನಿಯ ಮೇಲೆ ಗುಂಡಿನ ಸುರಿಮಳೆಯಾಗುವುದು ಖಂಡಿತ ಎಂಬ ಎಚ್ಚರಿಕೆ ನೀಡಿದ್ದ.
ಇದರಿಂದ ಕೊಂಚ ಭಯಗೊಂಡ ಭಟ್ ಫ್ಯಾಮಿಲಿ ಇಲ್ಲಿನ ಜುಹು ಠಾಣೆಯಲ್ಲಿ ದೂರು ನೀಡಿತ್ತು. ಕರೆ ಮಾಡಿದ ನಂಬರ್ ಮತ್ತು ವಾಟ್ಸ್ ಆಪ್ ಸಂದೇಶದ ಆಧಾರದ ಮೇಲೆ ಅಪರಾಧಿಯನ್ನು ಪತ್ತೆ ಮಾಡಿದ ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 387ರ ಅಡಿಯಲ್ಲಿ ಸುಲಿಗೆ ಪ್ರಕರಣದಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.[ಭಾರತದಲ್ಲೇ ಮಣ್ಣಾಗಲು ಬಯಸುತ್ತಿದ್ದಾನಾ ದಾವೂದ್ ಇಬ್ರಾಹಿಂ?]
ಸುಲಿಗೆಗಾಗಿ ನನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಒಡ್ಡಿದ ಪ್ರಕರಣವನ್ನು ಇನ್ನೂ ಮೊಗ್ಗಿರುವಾಗಲೇ ಪರಿಹರಿಸಲಾಗಿದೆ. ಈ ಕಾರಣಕ್ಕಾಗಿ ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದ ಪೊಲೀಸರಿಗೆ ನಾನು ಋಣಿಯಾಗಿರುತ್ತೇನೆ ಎಂದು ಮಹೇಶ್ ಭಟ್ ಟ್ವೀಟ್ ಸಹ ಮಾಡಿದ್ದಾರೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್












Click it and Unblock the Notifications