ತಾಯಿಯನ್ನು ಕೊಂದು ರಕ್ತದಲ್ಲಿ ಸ್ಮೈಲಿ ಬರೆದಿದ್ದ ಪಾತಕಿ ಪುತ್ರನ ಬಂಧನ
ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿ ಧ್ಯಾನೇಶ್ವರ್ ಗನೋರೆ ಅವರ ಪತ್ನಿ ದೀಪಾಲಿ ಅವರನ್ನು ಹತ್ಯೆಗೈದು ಪರಾರಿಯಾಗಿದ್ದ ಅವರ ಮಗನನ್ನು ಗುರುವಾರದಂದು ಪೊಲೀಸರು ಬಂಧಿಸಿದ್ದಾರೆ.
ಮುಂಬೈ, ಮೇ 25: ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿ ಧ್ಯಾನೇಶ್ವರ್ ಗನೋರೆ ಅವರ ಪತ್ನಿ ದೀಪಾಲಿ ಅವರನ್ನು ಹತ್ಯೆಗೈದು ಪರಾರಿಯಾಗಿದ್ದ ಅವರ ಮಗ ಸಿದ್ದಾಂತ್ ನನ್ನು ಗುರುವಾರದಂದು ಜೋಧ್ ಪುರದಲ್ಲಿ ಬಂಧಿಸಲಾಗಿದೆ. ತನ್ನ ತಾಯಿಯನ್ನು ಕೊಂದು ಆಕೆಯ ರಕ್ತದಲ್ಲೇ ಸ್ಮೈಲಿ ಚಿತ್ರ ಬಿಡಿಸಿ, ಪರಾರಿಯಾಗಿದ್ದ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ದೀಪಾಲಿ ಅವರ್ ಶವದ ಪಕ್ಕ ಸಿಕ್ಕ ಚಾಕು ಮತ್ತು ರಕ್ತದಿಂದಲೇ ಬರೆದ ಒಂದು ವಾಕ್ಯ ' 'ನಂಗೆ ಇವರ ಸಹವಾಸ ಸಾಕಾಗಿದೆ, ನನ್ನನ್ನು ಹಿಡಿಯಿರಿ, ನೇಣಿಗೆ ಹಾಕಿ...'ಕೊಲೆಗಾರನ ಪತ್ತೆಗೆ ಮಹತ್ವದ ಸುಳಿವು ನೀಡಿತ್ತು.ತಾಯಿ ಪಾಕೆಟ್ ಮನಿ ನೀಡಿಲ್ಲ ಎಂಬ ಕಾರಣಕ್ಕೇ ಆಕೆಯನ್ನು ಕೊಲೆಮಾಡಲಾಗಿದೆ ಎಂದು ಪೊಲೀಸರು ಮೊದಲ ಹಂತದ ತನಿಖೆಯಲ್ಲಿ ಶಂಕಿಸಿದ್ದರು. ಈಗ ವಿಚಾರಣೆ ಬಳಿಕ ಸ್ಪಷ್ಟತೆ ಸಿಗಲಿದೆ.[ಶೀನಾ ಬೋರಾ ಕೊಲೆ ಕೇಸ್: ಇಂದ್ರಾಣಿ, ಪೀಟರ್ ವಿರುದ್ಧ ಸಿಬಿಐ ಆರೋಪ ಪಟ್ಟಿ]

ಧ್ಯಾನೇಶ್ವರ್ ಗನೋರೆ ಅವರ ಪತ್ನಿ 42 ವರ್ಷ ವಯಸ್ಸಿನ ದೀಪಾಲಿ ಗನೋರಿ ಅವರು ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಹತ್ಯೆಗೀಡಾಗಿದ್ದಾರೆ. ಸಾಂತಾಕ್ರೂಜ್ ನಲ್ಲಿರುವ ತಮ್ಮ ನಿವಾಸಕ್ಕೆ ಬಂದ ಧ್ಯಾನೇಶ್ವರ್ ಅವರಿಗೆ ಪತ್ನಿ ಶವ ಕಂಡು ಹೌಹಾರಿದ್ದರು.[ಶೀನಾ ಬೋರಾ ಹತ್ಯೆ ಕೇಸ್ ತನಿಖಾಧಿಕಾರಿ ಪತ್ನಿ ಕೊಲೆ]
ಜತೆಗೆ ಮಗ ಕೂಡಾ ನಾಪತ್ತೆಯಾಗಿದ್ದ. 2012ರ ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಶೀನಾ ಬೋರಾ ಅವರ ತಾಯಿ ಇಂದ್ರಾಣಿ ಮುಖರ್ಜಿ ಮತ್ತು ಇಂದ್ರಾಣಿ ಮುಖರ್ಜಿಯ ಪತಿ ಪೀಟರ್ ಮುಖರ್ಜಿ ಪ್ರಮುಖ ಆರೋಪಿಗಳಾಗಿದ್ದಾರೆ.[ಶೀನಾ ಬೊರಾ ಹತ್ಯೆ: ಸಂಚು ರೂಪಿಸಿದ್ದು ಪೀಟರ್ ಮುಖರ್ಜಿಯೇ!]
ಈ ಪ್ರಕರಣದ ತನಿಖೆಯನ್ನು ಮೊದಲಿಗೆ ಮುಂಬೈ ಪೊಲೀಸರು ಕೈಗೆತ್ತಿಕೊಂಡಿದ್ದರು. ಈ ತನಿಖಾ ತಂಡದಲ್ಲಿ ಧ್ಯಾನೇಶ್ವರ್ ಅವರು ಕೂಡಾ ಇದ್ದರು. ನಂತರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications