ಮುಂಬೈನಲ್ಲಿ ಅಗ್ನಿ ಆಕಸ್ಮಿಕ, ಬಚಾವಾದ ಬಚ್ಚನ್, ಅಮೀರ್
ಮುಂಬೈ, ಫೆ.14: ಮೇಕ್ ಇನ್ ಇಂಡಿಯಾ ವೀಕ್ ಕಾರ್ಯಕ್ರಮದಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಗಿರ್ ಗಮ್ ಚೌಪಟ್ಟಿಯಲ್ಲಿ ಭಾನುವಾರ ಸಂಜೆ ಮುಖ್ಯ ವೇದಿಕೆಯ ಹಿಂಬದಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕಾರ್ಯಕ್ರಮದಲ್ಲಿ ಮುಖ್ಯಮತ್ರಿ ದೇವೇಂದ್ರ ಫಡ್ನವೀಸ್, ನಟ ಅಮಿತಾಬ್ ಬಚ್ಚನ್, ಅಮೀರ್ ಖಾನ್, ವಿವೇಕ್ ಒಬೆರಾಯ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಬೆಂಕಿ ಕಾಣಿಸಿಕೊಂಡಾಗ ವೇದಿಕೆಯಲ್ಲಿ ನೃತ್ಯ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದ ಆಯೋಜಕರ ಸಮಯಪ್ರಜ್ಞೆಯಿಂದ ವೇದಿಕೆ ಮೇಲಿದ್ದ ಕಲಾವಿದರು ಸೇರಿದಂತೆ ಹಲವಾರು ಜೀವಗಳು ಉಳಿದಿವೆ. ಬೆಂಕಿ ಕಾಣಿಸಿದ ಕೂಡಲೇ ಮ್ಯೂಸಿಕ್ ಸ್ವಿಚ್ ಆಫ್ ಮಾಡಿ ಕಲಾವಿದರನ್ನು ಕೆಳಗಿಳಿಸಲಾಗಿದೆ. ನಂತರ ಕೆಳಗೆ ಕುಳಿತ್ತಿದ್ದ ಗಣ್ಯರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.

ತಕ್ಷಣವೇ ನಾಲ್ಕಾರು ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯದಲ್ಲಿ ಮಗ್ನರಾಗಿದ್ದು, ಇತ್ತೀಚಿನ ವರದಿಯಂತೆ ಬೆಂಕಿ ಸಂಪೂರ್ಣವಾಗಿ ನಂದಿದೆ. ಘಟನೆ ಬಗ್ಗೆ ಖೇದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಫಡ್ನವೀಸ್ ಅವರು ಟ್ವೀಟ್ ಮಾಡುವ ಮೂಲಕ ಅಪ್ಡೇಟ್ ಗಳನ್ನು ನೀಡುತ್ತಿದ್ದಾರೆ.
ಅಮಿತಾಬ್, ಅಮೀರ್ ಖಾನ್ ಅಲ್ಲದೆ ಸಂಸದೆ ಹೇಮಾಮಾಲಿನಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸೇರಿದಂತೆ 2,000 ಕ್ಕೂ ಅಧಿಕ ಸಾರ್ವಜನಿಕರ ಜೀವ ರಕ್ಷಣೆಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
14 Fire engines,10 Water Tankers, and all Sr. Fire Officers are on site. Fire now totally under control. Program called off.
— Devendra Fadnavis (@Dev_Fadnavis) February 14, 2016
ದುರ್ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಗ್ನಿ ಅನಾಹುತದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಆದೇಶಿಸಿದ್ದಾರೆ.
ಅಗ್ನಿ ಆಕಸ್ಮಿಕದ ಸಂದರ್ಭದಲ್ಲಿ ಎಚ್ಚರಿಕೆ ನೀಡಿ ಎಲ್ಲರ ರಕ್ಷಣೆಗೆ ಕಾರಣರಾದ ಮಾಧ್ಯಮ ಪ್ರತಿನಿಧಿಗಳು, ಅಗ್ನಿ ಶಾಮಕ ದಳ ಸಿಬ್ಬಂದಿ, ಪೊಲೀಸರಿಗೆ ನಟ ವಿವೇಕ್ ಒಬೆರಾಯ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಒಂದು ವಾರಗಳ ಮೇಕ್ ಇನ್ ಇಂಡಿಯಾ ಸಪ್ತಾಹ್ ಕಾರ್ಯಕ್ರಮಕ್ಕೆ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications