ಹಳಸಿದ ಸಂಬಂಧ, ಕಿನ್ನರಿ ನಟನ ವಿರುದ್ಧ ಕಿರುಕುಳದ ದೂರು
Recommended Video

ಮುಂಬೈ, ಏಪ್ರಿಲ್ 03: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಕಿನ್ನರಿ' ಧಾರವಾಹಿಯ ಪ್ರಮುಖ ಪಾತ್ರಧಾರಿ ನಟ ಕಿರಣ್ ರಾಜ್ ವಿರುದ್ಧ ಹಲ್ಲೆ, ಕಿರುಕುಳದ ಪ್ರಕರಣ ದಾಖಲಾಗಿದೆ.
ನಕುಲ್ ಪಾತ್ರಧಾರಿ ಕಿರಣ್ ರಾಜ್ ವಿರುದ್ಧ ಆತನ ಗೆಳತಿ ಯಾಸ್ಮಿನ್ ಪಠಾಣ್ ಅವರು ಮುಂಬೈಯ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಮಾತ್ರವಲ್ಲದೆ ಹಿಂದಿ ಧಾರಾವಾಹಿಗಳಲ್ಲೂ ಕಿರಣ್ ರಾಜ್ ಗುರುತಿಸಿಕೊಂಡಿದ್ದಾರೆ.
ನಟಿ ಹಾಗೂ ಮಾಡೆಲ್ ಯಾಸ್ಮಿನ್ ಪಠಾಣ್ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಕಿರಣ್ ರಾಜ್ ಕೂಡಾ ಯಾಸ್ಮಿನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಳಸಿದ ಸಂಬಂಧ: ಯಾಸ್ಮಿನ್ ಪಠಾಣ್ ಹಾಗೂ ಕಿರಣ್ ರಾಜ್ ಐದಾರು ವರ್ಷಗಳಿಂದಲೂ ಪ್ರೇಮಿಗಳಾಗಿದ್ದು, ಲಿವ್ ಇನ್ ಟುಗೆದರ್ ನಲ್ಲಿದ್ದಾರೆ. ಆದರೆ, ಇಬ್ಬರ ನಡುವೆ ಮಾರ್ಚ್ 26 ರಂದು ಇಬ್ಬರ ಮಧ್ಯೆ ಜಗಳವಾಗಿದೆ. ಕಿರಣ್ ರಾಜ್ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮಾರ್ಚ್ 29ರಂದು ಮುಂಬೈನ ಓಶಿವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆದರೆ, ಕಿರಣ್ ಅವರು ಯಾಸ್ಮಿನ್ ಆರೋಪವನ್ನು ಅಲ್ಲಗೆಳೆದಿದ್ದು, ನಾನು ಹಲ್ಲೆ ಮಾಡಿಲ್ಲ, ಬದಲಿಗೆ ಆಕೆ ನನ್ನ ಮನೆಗೆ ಬಂದು ನನ್ನ ತಾಯಿ ಮೇಲೆ ಹಲ್ಲೆ ಮಾಡಿ, ನಿಂದಿಸಿದ್ದಾಳೆ. ಮಾರ್ಚ್ 31ರಂದು ರಾಜರಾಜೇಶ್ವರಿ ನಗರ ಪೊಲೀಸರ ಬಳಿ ದೂರು ನೀಡಿದೆ. ಆದರೆ ಎಫ್ ಐಆರ್ ದಾಖಲಿಸುವುದು ಬೇಡ ಎಂದು ಹೇಳಿದೆ. ಅವಳು ಒಂಥರಾ ಸೈಕೊ ಥರಾ ಆಡುತ್ತಾಳೆ. ಅವಳ ಮೇಲೆ 2-3 ವಂಚನೆ ಪ್ರಕರಣಗಳು ಇವೆ ಎಂದು ದೂರಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications