ಪ್ರಜಾಪ್ರಭುತ್ವವನ್ನು ಕೊಲ್ಲಲೂ ಮೋದಿ ಸರ್ಕಾರ ಹಿಂಜರಿಯುವುದಿಲ್ಲ; ಶಿವಸೇನೆ
ಮುಂಬೈ, ಮಾರ್ಚ್ 25: ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 2021ಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಶಿವಸೇನೆ, "ಬಿಜೆಪಿಯೇತರ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಕೇಸರಿ ಪಕ್ಷ ನಿಗ್ರಹಿಸುತ್ತಿದೆ" ಎಂದು ಆರೋಪಿಸಿದೆ.
ಪಕ್ಷದ ಪತ್ರಿಕೆ "ಸಾಮ್ನಾ"ದ ಸಂಪಾದಕೀಯದಲ್ಲಿ ಈ ಕುರಿತು ಟೀಕಿಸಿದ್ದು, ನರೇಂದ್ರ ಮೋದಿ ಅವರು ಈ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸ್ವಾತಂತ್ರ್ಯವನ್ನು ನಿಗ್ರಹಿಸಲು ನಿರ್ಧರಿಸಿದಂತಿದೆ ಎಂದು ದೂರಿದೆ. ಬಿಜೆಪಿ ಆಡಳಿತದಲ್ಲಿ ಇರದ ರಾಜ್ಯ ಸರ್ಕಾರಗಳನ್ನು ರಾಜ್ಯಪಾಲರ ಮೂಲಕ ನಿಗ್ರಹಿಸುವ ನೀತಿಯನ್ನು ಮೋದಿ ಸರ್ಕಾರ ಅನುಸರಿಸುತ್ತಿದೆ. ಈಗ ಕೇಂದ್ರ ಜಿಎನ್ ಸಿಟಿಡಿ ಮಸೂದೆ ತಂದಿದೆ ಹಾಗೂ ಅದನ್ನು ಬಲವಂತವಾಗಿ ಅಂಗೀಕರಿಸಿದೆ. ಇದು ದೆಹಲಿ ವಿಧಾನಸಭೆ, ದೆಹಲಿ ಮುಖ್ಯಮಂತ್ರಿ ಹಾಗೂ ಕ್ಯಾಬಿನೆಟ್ನ ಅಧಿಕಾರವನ್ನೇ ಮೊಟಕುಗೊಳಿಸಿದೆ ಎಂದಿದೆ.
ದೆಹಲಿ ಕೇಂದ್ರಾಡಳಿತ ಪ್ರದೇಶ. ಎಲ್ಲಾ ಅಧಿಕಾರ ಲೆಫ್ಟಿನೆಂಟ್ ಗರ್ವನರ್ ಅವರ ಬಳಿಯಿದೆ. ಹೀಗಾಗಿ ಜನರಿಂದ ಚುನಾಯಿತರಾದ ದೆಹಲಿ ಮುಖ್ಯಮಂತ್ರಿಯನ್ನು ಹಿಂಸಿಸುವ ಒಂದೇ ಒಂದು ಅವಕಾಶವನ್ನೂ ಅವರು ಬಿಡುವುದಿಲ್ಲ. ಇಲ್ಲಿ ವಿಧಾನಸಭೆ ಹಾಗೂ ಬಹುಮತಕ್ಕೆ ಬೆಲೆಯಿಲ್ಲ. ಈ ಹೊಸ ಶಾಸನದೊಂದಿಗೆ ಲೆಫ್ಟಿನೆಂಟ್ ಜನರಲ್ ಅವರನ್ನೇ ದೆಹಲಿ ಸರ್ಕಾರವನ್ನಾಗಿ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಈ ಕಾಯ್ದೆಯಿಂದಾಗಿ, ಬಹುಮತವಿದ್ದರೂ ದೆಹಲಿ ಸಿಎಂಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರತಿ ದಾಖಲೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ದೊರೆಯಬೇಕು. ಕೇಂದ್ರಕ್ಕೆ ಇವರು ನೇರ ಸಂಪರ್ಕಿತರಾದ್ದರಿಂದ, ಕೇಂದ್ರದ ಸೂಚನೆ ಮೇರೆಗೆ ಕೆಲಸ ಮಾಡಲು ದೆಹಲಿ ಸಿಎಂಗೆ ಸೂಚಿಸಲಾಗುತ್ತದೆ. ಇದು ಸ್ವಾತಂತ್ರ್ಯದ ನಿಗ್ರಹ ಎಂದು ಆರೋಪಿಸಿದರು.
ದೆಹಲಿಯಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಮೋದಿ ಸರ್ಕಾರ ಈ ಮಸೂದೆಯನ್ನು ಪರಿಚಯಿಸುತ್ತಿರಲಿಲ್ಲ. ಕೇಂದ್ರವು ರಾಜ್ಯಪಾಲರ ಮೂಲಕವೇ ದೆಹಲಿ ಹಾಗೂ ಮಹಾರಾಷ್ಟ್ರದಂಥ ರಾಜ್ಯಗಳಲ್ಲಿ ಅಧಿಕಾರ ಕಟ್ಟಿಹಾಕಲು ಯತ್ನಿಸುತ್ತಿದೆ. ಇದಕ್ಕೆ ಪ್ರಜಾಪ್ರಭುತ್ವವನ್ನೇ ಕೊಲ್ಲಲೂ ಹಿಂಜರಿಕೆ ತೋರುವುದಿಲ್ಲ ಎಂದು ಹೇಳಿದೆ.
ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ ( ತಿದ್ದುಪಡಿ) ಮಸೂದೆ 2021ರನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications