Breaking: ಇಡಿ ವಿಚಾರಣೆ ಬಳಿಕ ಸಂಸದ ಸಂಜಯ್ ರಾವತ್ ಹೇಳಿದ್ದೇನು?
ಮುಂಬೈ, ಜುಲೈ 01: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಿವಸೇನೆ ಸಂಸದ ಸಂಜಯ್ ರಾವತ್ರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ವಿಚಾರಣೆಗೆ ಒಳಪಡಿಸಲಾಯಿತು.
ಮುಂಬೈನಲ್ಲಿ ಶುಕ್ರವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಕಚೇರಿಗೆ ಹಾಜರಾದ ಸಂಜಯ್ ರಾವತ್ ಸತತ 10 ಗಂಟೆಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಇಡಿ ವಿಚಾರಣೆಯ ನಂತರದಲ್ಲಿ ಮಾಧ್ಯಮಗಳಿಗೆ ಸಂಜಯ್ ರಾವತ್ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಜನರಿಗೆ ನಮ್ಮ ಬಗ್ಗೆ ಯಾವುದೇ ರೀತಿಯಾದ ಅನುಮಾನಗಳಿಲ್ಲ. ಆದರೆ ಕೇಂದ್ರೀಯ ಸಂಸ್ಥೆಗಳಿಗೆ ನಮ್ಮ ಬಗ್ಗೆ ಅನುಮಾನಗಳು ಬಂದರೆ ಅವರ ಮುಂದೆ ಹಾಜರಾಗುವುದು ನಮ್ಮ ಕರ್ತವ್ಯವಾಗಿದೆ ಎಂದು ಸಂಜಯ್ ರಾವತ್ ಹೇಳಿದರು.

10 ಗಂಟೆಗಳ ಕಾಲ ರಾವತ್ ವಿಚಾರಣೆ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ನನ್ನನ್ನು 10 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ನಾನು ಕೂಡ ವಿಚಾರಣೆಗೆ ಸಂಪೂರ್ಣ ಸಹಕಾರವನ್ನು ನೀಡಿದ್ದೇನೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.
ರಾವತ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ: ಚಾವಲ್ ಭೂಹಗರಣದಲ್ಲಿ ಶಿವಸೇನೆಯ ಸಂಸದ ಸಂಜಯ್ ರಾವತ್ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಪತ್ರಾ ಚಾವಲ್ ಭೂ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಪ್ರವೀಣ್ ರಾವತ್ 55 ಕೋಟಿ ಹಣವನ್ನು ತಮ್ಮ ಪತ್ನಿಯ ಖಾತೆಯಿಂದ ಸಂಜಯ್ ರಾವತ್ ಪತ್ನಿ ವರ್ಷಾ ಖಾತೆಗೆ ವರ್ಗಾವಣೆಯಾಗಿದ್ದು ಎಂದು ಹೇಳಲಾಗಿದೆ.
ಅದೇ ಹಣದ ವರ್ಗಾವಣೆ ಮೂಲಕ ಅಲಿಬಾಗ್ನಲ್ಲಿ ಭೂಮಿ ಖರೀದಿ ಮಾಡಲಾಗಿದೆ. 2010 ಮತ್ತು 2012ರ ನಡುವೆ ಭಾರೀ ಪ್ರಮಾಣದಲ್ಲಿ ನಗದು ಪಾವತಿಗಳನ್ನು ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯವು ಹೇಳಿದ್ದು, ಸಂಜಯ್ ರಾವತ್ ಪತ್ನಿಗೆ ಪ್ರವೀಣ್ ರಾವತ್ ಪತ್ನಿ 55 ಲಕ್ಷ ರೂ ಸಾಲ ಕೂಡ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications