ಫೈವ್ ಸ್ಟಾರ್ ಹೋಟೆಲ್ನಲ್ಲಿ ಕುಳಿತು ವಸೂಲಿ ದಂಧೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿ
ನವದೆಹಲಿ, ಏಪ್ರಿಲ್ 2: ಬಂಧನಕ್ಕೊಳಗಾಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ನಾರಿಮನ್ ಪಾಯಿಂಟ್ ಎಂಬ ಪಂಚತಾರಾ ಹೋಟೆಲ್ನ ಕೊಠಡಿಯೊಂದರಲ್ಲಿ ಕುಳಿತು ಸುಲಿಗೆ ದಂಧೆ ನಡೆಸುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಿಸಿದೆ. ವಾಜೆ ಅವರಿಗಾಗಿ ಉದ್ಯಮಿಯೊಬ್ಬರು 12 ಲಕ್ಷ ರೂಪಾಯಿಗೆ 100 ದಿನಗಳ ಕಾಲ ಕೊಠಡಿ ಬುಕ್ ಮಾಡಿದ್ದರು ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.
ಸುಶಾಂತ್ ಸದಾಶಿವ್ ಖಮ್ಕಾರ್ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಗುರುತಿನ ಚೀಟಿ ಬಳಸಿ ಸಚಿನ್ ವಾಜೆ ಅಲ್ಲಿ ಉಳಿದುಕೊಂಡಿದ್ದರು. ನಾರಿಮನ್ ಪಾಯಿಂಟ್ ಪಂಚತಾರಾ ಹೋಟೆಲ್ನ ಕೊಠಡಿ ಸಂಖ್ಯೆ 1964ರಲ್ಲಿ ತಂಗಿದ್ದ ಅವರು, ಅಲ್ಲಿಂದ ಹಣ ವಸೂಲಿ ಚಟುವಟಿಕೆಗಳನ್ನು ನಡೆಸುತ್ತಿದ್ದರು.
'ಉದ್ಯಮಿಯೊಬ್ಬರು 100 ದಿನಗಳ ಕಾಲ 12 ಲಕ್ಷ ರೂಪಾಯಿಗೆ ಈ ಹೋಟೆಲ್ ಬುಕ್ ಮಾಡಿದ್ದರು. ಯಾವುದೋ ವಿವಾದದಲ್ಲಿ ಸಿಲುಕಿದ್ದ ಉದ್ಯಮಿಗೆ ವಾಜೆ ಸಹಾಯ ಮಾಡುತ್ತಿದ್ದರು. ಟ್ರಾವೆಲ್ ಏಜೆಂಟ್ ಮುಖಾಂತರ ಬುಕಿಂಗ್ ಮಾಡಲಾಗಿತ್ತು. ಫೆಬ್ರವರಿ ತಿಂಗಳಲ್ಲಿ ಕ್ರೈಂ ಬ್ರ್ಯಾಂಚ್ಗೆ ಕರ್ತವ್ಯ ವರದಿ ಮಾಡುತ್ತಿದ್ದಾಗಲು ವಾಜೆ ಈ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು' ಎಂದು ಎನ್ಐಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರವರಿ 16ರಂದು ಇನ್ನೋವಾ ಕಾರ್ನಲ್ಲಿ ಹೋಟೆಲ್ ಪ್ರವೇಶಿಸಿದ್ದ ವಾಜೆ, ಫೆ. 20ರಂದು ಕೊಠಡಿ ಖಾಲಿ ಮಾಡಿಕೊಂಡು ಲ್ಯಾಂಡ್ ಕ್ರೂಸರ್ನಲ್ಲಿ ತೆರಳಿದ್ದರು. ಮುಂಬೈನ ವಿವಿಧ ಸಂಸ್ಥೆಗಳ ಮೇಲೆ ಪರವಾನಗಿ ಉಲ್ಲಂಘನೆ ಆರೋಪದಡಿ ರಾತ್ರಿ ವೇಳೆ ವಾಜೆ ಮತ್ತು ಅವರ ತಂಡ ದಾಳಿಗಳನ್ನು ನಡೆಸಿದ್ದಕ್ಕೂ, ಈ ದಿನಾಂಕಗಳಿಗೂ ಹೊಂದಾಣಿಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮುಕೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆಯ ಒಂದು ಫ್ಲ್ಯಾಟ್ ಮತ್ತು ದಕ್ಷಿಣ ಮುಂಬೈನ ಹೋಟೆಲ್ ಹಾಗೂ ಕ್ಲಬ್ ಒಂದರಲ್ಲಿ ಕೂಡ ಎನ್ಐಎ ಗುರುವಾರ ಪರಿಶೀಲನೆ ನಡೆಸಿತ್ತು. ಅಲ್ಲದೆ, ವಾಜೆ ಅವರ ಸಹವರ್ತಿಯಾಗಿದ್ದ ಮಹಿಳೆಯೊಬ್ಬರನ್ನು ವಿಮಾನ ನಿಲ್ದಾಣದಲ್ಲಿ ಗುರುವಾರ ಬಂಧಿಸಲಾಗಿದೆ. ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ಪರಿಶೀಲನೆ ನಡೆಸಲಾದ ಫ್ಲ್ಯಾಟ್ ಈ ಮಹಿಳೆಗೆ ಸೇರಿದ್ದು ಎನ್ನಲಾಗಿದೆ.
ಅಂಬಾನಿಗೆ ಬಾಂಬ್ ಬೆದರಿಕೆ ಹಾಗೂ ಮನ್ಸುಖ್ ಹಿರೇನ್ ಕೊಲೆ ಪ್ರಕರಣದಲ್ಲಿ ಎನ್ಐಎ ಇದುವರೆಗೂ ಉಪ ಪೊಲೀಸ್ ಆಯುಕ್ತರವರೆಗಿನ ಹುದ್ದೆಗಳ ಸುಮಾರು 35 ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಸಚಿನ್ ವಾಜೆ ನಡೆಸುತ್ತಿದ್ದ ವ್ಯವಹಾರಗಳು ಹಿರಿಯ ಅಧಿಕಾರಿಗಳಿಗೆ ತಿಳಿದಿದ್ದವು. ಇದನ್ನು ಸಾಬೀತುಪಡಿಸಲು ನಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ. ಅವರನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications