Breaking: ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಹಾಕಿದವನ ಕಥೆ ಏನಾಯಿತು?
ಮುಂಬೈ, ಆಗಸ್ಟ್ 16: ರಿಲಾಯನ್ಸ್ ಗ್ರೂಪ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರೋಪಿಯನ್ನು ಆಗಸ್ಟ್ 30ರವರೆಗೂ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
56 ವರ್ಷದ ಬಂಧಿತ ಆರೋಪಿ ವಿಷ್ಣು ಭೌಮಿಕ್ ಅನ್ನು ಆಗಸ್ಟ್ 16ರ ಮಂಗಳವಾರ ಮುಂಬೈನ 37ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಅನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.
ಪ್ರಾಸಿಕ್ಯೂಷನ್ ಆರೋಪಿಯನ್ನು 10 ದಿನಗಳ ಕಸ್ಟಡಿಗೆ ಒಪ್ಪಿಸುವಂತೆ ಕೋರಿತ್ತು. "ಸ್ವಾತಂತ್ರ್ಯ ದಿನಾಚರಣೆಯ ದಿನವೇ ಈ ಕರೆಯನ್ನು ಮಾಡಿದ್ದು, ಉದ್ದೇಶಪೂರ್ವಕ ಎಂಬುದು ಗೊತ್ತಾಗುತ್ತದೆ. ಅವನು ಬೇರೆ ದಿನದಲ್ಲಿ ಏಕೆ ಹೀಗೆ ಕರೆ ಮಾಡಲಿಲ್ಲ?, ಮುಕೇಶ್ ಅಂಬಾನಿಗೆ ಬೆದರಿಕೆ ಇದೆ. ಆರೋಪಿಯು ಮುಕೇಶ್ ಅವರಿಗೇ ಏಕೆ ವಿಶೇಷವಾಗಿ ಕರೆ ಮಾಡಿದರು. ಆದ್ದರಿಂದ ಇದು ಸರಳವಾಗ ಪ್ರಕರಣವಲ್ಲದೇ ಗಂಭೀರ ಅಪರಾಧವಾಗಿದೆ," ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿತ್ತು.

ಪ್ರಾಸಿಕ್ಯೂಷನ್ ವಾದದಲ್ಲಿ ಏನಿದೆ?:
ಈ ಪ್ರಕರಣದಲ್ಲಿ ಆರೋಪಿಯು ಪುನರಾವರ್ತಿತ ಅಪರಾಧಿ ಆಗಿದ್ದಾನೆ ಎಂಬ ಅಂಶವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಬೇಕು. ಇದೇ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆ ಮಾಡುವುದಕ್ಕೆ ಹೆಚ್ಚಿನ ತನಿಖೆ ನಡೆಸಬೇಕಾದ ಅಗತ್ಯವಿದೆ. ವಿವರವಾಗಿ ತಾಂತ್ರಿಕ ತನಿಖೆ ಅನ್ನು ನಡೆಸಬೇಕಾಗಿದೆ," ಎಂದು ಪ್ರಾಸಿಕ್ಯೂಷನ್ ಹೇಳಿದೆ.
ಆರೋಪಿ ಪರ ವಕೀಲರ ವಾದವೇನು?:
ಈ ಪ್ರಕರಣದಲ್ಲಿ ಆರೋಪಿ ಪರ ವಕೀಲರು, ಆರೋಪಿಯು ನೇರವಾಗಿ ವ್ಯಕ್ತಿಯೇ ಕರೆ ಮಾಡಿದ್ದಲ್ಲ. ಆದರೆ ನೇರವಾಗಿ ವ್ಯಕ್ತಿಗೇ ಕರ ಮಾಡಿದ್ದನು ಎನ್ನುವಂತೆ ಬಿಂಬಿಸಲಾಗುತ್ತಿದೆ ಎಂದು ವಾದಿಸಿದ್ದಾರೆ. ಆರೋಪಿಯನ್ನು "ಮಾನಸಿಕ ಅಸ್ವಸ್ಥ" ಎಂದು ಕರೆದ ಆರೋಪಿಯ ಪರ ವಕೀಲರು, "ಆ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ. ಅವರು ಮನೋವೈದ್ಯರ ಚಿಕಿತ್ಸೆಯಲ್ಲಿದ್ದಾರೆ ಎಂದು ತೋರಿಸಲು ನನ್ನ ಬಳಿ ಪ್ರಮಾಣ ಪತ್ರಗಳಿವೆ," ಎಂದು ಹೇಳಿದರು.
ಆರೋಪಿಯು ಕೆಟ್ಟದ್ದನ್ನು ಮಾಡುವುದಕ್ಕೆ ಸಂಬಂದಿಸಿದಂತೆ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ. ಯಾವುದೇ ರೀತಿ ಅಪರಾಧಗಳ ಹಿನ್ನೆಲೆಯನ್ನು ಆರೋಪಿ ಹೊಂದಿಲ್ಲ ಎಂದು ಆರೋಪಿ ಪರ ವಕೀಲರು ಹೇಳಿದ್ದಾರೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್












Click it and Unblock the Notifications