ಮೇ 16ರಂದು ಬಿಜೆಪಿಯಿಂದ 2000 ಕೆಜಿ ಲಡ್ಡು ವಿತರಣೆ
ಮುಂಬೈ, ಮೇ 14: ಚುನಾವಣೋತ್ತರ ಸಮೀಕ್ಷೆ ಹೊರಬೀಳುತ್ತಿದ್ದಂತೇ, ಬಿಜೆಪಿ ಚುನಾವಣಾ ಫಲಿತಾಂಶದ ದಿನವಾದ ಮೇ ಹದಿನಾರರಂದು ಎರಡು ಸಾವಿರ ಕೆಜಿ ಲಡ್ಡು ವಿತರಿಸಲು ಬಿಜೆಪಿ ಪೂರ್ವ ತಯಾರಿ ಮಾಡಿಕೊಂಡಿದೆ.
ದೇಶದ ಹದಿನೈದನೇ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಳ್ಳುವುದು ನಿಶ್ಚಿತ ಎನ್ನುವ ಅಚಲ ನಂಬಿಕೆಯಲ್ಲಿರುವ ಮುಂಬೈ ಬಿಜೆಪಿ ಘಟಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಸಾರ್ವಜನಿಕರಿಗೆ ಸಿಹಿ ಹಂಚಲು ಮುಂದಾಗಿದೆ.

ಐತಿಹಾಸಿಕ ಸಿಪಿ ಟ್ಯಾಂಕ್ ಕ್ರಾಸಿಂಗ್ ನಲ್ಲಿ ಲಡ್ಡು ಮತ್ತು ಕೇಕನ್ನು ಸಾರ್ವಜನಿಕರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ನಾವು ವಿತರಿಸಲಿದ್ದೇವೆ. ನಗರದ ಹಲವು ಕಡೆ ಚುನಾವಣಾ ಫಲಿತಾಂಶ ನೇರವಾಗಿ ವೀಕ್ಷಿಸಲು ಅನುಕೂಲವಾಗುವಂತೆ LCD Screen ಅಳವಡಿಸಲಾಗುತ್ತದೆ ಎಂದು ಮುಂಬೈ ಬಿಜೆಪಿ ಘಟಕದ ವಕ್ತಾರ ಅತುಲ್ ಶಾ ಹೇಳಿದ್ದಾರೆ. (ತಿಮ್ಮಪ್ಪನ ಲಾಡುಗಿಂತ ಡಾ.ರಾಜ್ ಲಾಡು ರುಚಿ)
ಇನ್ನೊಬ್ಬರ ಜೊತೆ ಸಂತೋಷ ಹಂಚಿಕೊಳ್ಳುವಾಗ ಲಡ್ಡು ವಿತರಿಸುವುದು ಭಾರತೀಯ ಸಂಸ್ಕೃತಿ. ಅದರಂತೆ, RSS ಹಿನ್ನಲೆಯ ಸ್ವಯಂಸೇವಕರು ಲಡ್ಡು ತಯಾರಿಸುವ ಕೆಲಸವನ್ನು ಈಗಾಗಲೇ ಆರಂಭಿಸಿದ್ದಾರೆ ಎಂದು ಶಾ ಹೇಳಿದ್ದಾರೆ.
ಇದು ಅತಿಯಾದ ಆತ್ಮವಿಶ್ವಾಸವಲ್ಲ, ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ. ಹಾಗಾಗಿ ಫಲಿತಾಂಶದ ನಾಲ್ಕು ದಿನ ಮುನ್ನವೇ ಲಡ್ಡು ಮತ್ತು ಕೇಕ್ ತಯಾರಿಸಲು ಸೂಚಿಸಲಾಗಿದೆ ಎಂದು ಅತುಲ್ ಶಾ ವಿಶ್ವಾಸದ ಮಾತನ್ನಾಡಿದ್ದಾರೆ.
(ಮೂಲ: NDTV)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications