ಮಲಾಡ್ ಮಹಿಳೆ ಹಾಲುಣಿಸುವಾಗ ಕಾರು ಟೋಯಿಂಗ್, ಏನಿದರ ಅಸಲಿಯತ್ತು?
ಮುಂಬೈ, ನವೆಂಬರ್ 13: ಇಲ್ಲಿನ ಮಲಾಡ್ ಪ್ರದೇಶದ ಮಹಿಳೆಯೊಬ್ಬರು ಮಗು ಜತೆ ಇದ್ದಾಗ ಕಾರನ್ನು ಟೋಯಿಂಗ್ ಮಾಡಿ ಮುಂಬೈ ಟ್ರಾಫಿಕ್ ಪೊಲೀಸರು ಕರೆದೊಯ್ದಿದ್ದು ತಿಳಿದಿರಬಹುದು. ಈ ತಪ್ಪಿಗೆ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿದ ಸುದ್ದಿಯೂ ಬಂದಿದೆ. ಆದರೆ, ಹಾಲುಣಿಸುತ್ತಿದ್ದ ಮಹಿಳೆ ಕಾರನ್ನು ಟೋಯಿಂಗ್ ಮಾಡಿದ ಘಟನೆಗೆ ತಿರುವು ಸಿಕ್ಕಿದೆ.
ಮುಂಬೈನ ಮಲಾಡ್ ಪ್ರದೇಶದಲ್ಲಿ ಜ್ಯೋತಿ ಮಾಲ್ ಹೆಸರಿನ ಮಹಿಳೆ ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿದ್ದರು. ಪೊಲೀಸರು ಎಚ್ಚರಿಕೆ ನೀಡುವ ಸಂದರ್ಭದಲ್ಲಿ ಮಹಿಳೆಯೊಂದಿಗೆ ಮಗು ಇರಲಿಲ್ಲ.

ಕಾರು ಟೋಯಿಂಗ್ ಮಾಡಿ ಕರೆದೊಯ್ಯುವಾಗ ಮಗುವನ್ನು ಪಡೆದು ಕಾರು ಸೇರಿದ ಮಹಿಳೆ ಕೈಗೆ ಮಗುವನ್ನು ಕೊಡಲಾಗಿದೆ. ಇದರಿಂದ ಎಲ್ಲರ ಅನುಕಂಪದ ದೃಷ್ಟಿ ಬಿದ್ದಿದ್ದು, ಪೊಲೀಸರು ಅಮಾನವೀಯ ಕೃತ್ಯ ಎಸಗಿದ್ದಾರೆ ಎಂದು ಬಿಂಬಿಸಲಾಗಿದೆ ಎಂಬ ವಿಷಯ ಬಹಿರಂಗವಾಗಿದೆ. ಹೊಸ ವಿಡಿಯೊವೊಂದು ಬಂದಿದ್ದು ಇದರಲ್ಲಿ ಕಾರಿನಲ್ಲಿ ಮಹಿಳೆ ಒಬ್ಬರೇ ಇರುವುದು ಕಂಡು ಬಂದಿದೆ.
Truth behind viral video of @MumbaiPolice traffic cop towing car with women and child inside; driver of parked car obstructing traffic interfering with cop doing duty and lady with infant climbing into car after it was towed to defame policemen @CPMumbaiPolice @Dev_Fadnavis pic.twitter.com/waLvLzqH4Q
— dharmesh thakkar (@news_houndz) November 11, 2017
ಮಗುವಿಗೆ ಹಾಲುಣಿಸುವಾಗ ಸಂಚಾರ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಹಾಲುಣಿಸುತ್ತಿದ್ದ ಮಹಿಳೆ ಸಮೇತ ಕಾರು ಎಳೆದುಕೊಂಡು ಹೋಗಿದ್ದಾರೆ ಎಂದು ಎಲ್ಲೆಡೆ ಸುದ್ದಿ ಪ್ರಸಾರವಾಗಿತ್ತು. ಇದಾದ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರನ್ನು ಅಮಾನತು ಮಾಡಲಾಗಿತ್ತು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಘಟನೆಯನ್ನು ಖಂಡಿಸಿದ್ದರು. ಪೊಲೀಸರು ಎರಡೂ ವಿಡಿಯೋಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications