ಪಾತಕಿಗಳ ಸ್ಕೆಚ್ ಮಿಸ್, ಮಹೇಶ್ ಭಟ್ ಸುರಕ್ಷಿತ
ಮುಂಬೈ,ನ.18: ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಪಕ, ನಿರ್ದೇಶಕ ಮಹೇಶ್ ಭಟ್ ಹಾಗೂ ಅವರ ಇಡೀ ಕುಟುಂಬದ ನಾಶಕ್ಕೆ ಭೂಗತ ಪಾತಕಿಗಳು ಹಾಕಿದ್ದ ಸಂಚನ್ನು ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ವಿಫಲಗೊಳಿಸಿದ್ದಾರೆ. ಭಟ್ ಅವರ ಕೊಲೆ ಸಂಚು ರೂಪಿಸಿದ್ದ ಇಡೀ ತಂಡವನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮಹೇಶ್ ಭಟ್ ಅವರ ಕೊಲೆ ಸಂಚು ರೂಪಿಸಿದ್ದ 13 ಮಂದಿ ಗ್ಯಾಂಗ್ ಸ್ಟರ್ ಗಳನ್ನು ಮುಂಬೈ ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ಮತ್ತೊಬ್ಬ ಚಿತ್ರ ನಿರ್ಮಾಪಕ ಕರೀಮ್ ಮೊರಾನಿ ಅವರ ಬಂಗಲೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು.

ಬಾಲಿವುಡ್ ನ ಪ್ರಮುಖ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುವ ಸಂಚುಗಳನ್ನು ರೂಪಿಸಿದ್ದ 13 ಜನ ಗ್ಯಾಂಗ್ ಸ್ಟರ್ ಗಳನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಕ್ರೈಂ) ಸದಾನಂದ ದಾತೆ ಹೇಳಿದ್ದಾರೆ.[ಮೊರಾನಿ ಜೊತೆ ಬರೀ ಪರ್ಸನಲ್ ಕನೆಕ್ಷನ್: ಶಾರುಖ್]
ಈ ಪ್ರಕರಣ ಕುರಿತಂತೆ ಸಹಾಯಕ ಪೊಲೀಸ್ ಆಯುಕ್ತ ಸುನೀಲ್ ದೇಶ್ ಮುಖ್ ಅವರು ತನಿಖೆ ಕೈಗೊಂಡಿದ್ದಾರೆ. ಬಂಧಿತರ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಸದಾನಂದ ದಾತೆ ಹೇಳಿದ್ದಾರೆ.
ಎಸಿಪಿ ಸುನಿಲ್ ದೇಶ್ ಮುಖ್, ಪೊಲೀಸ್ ಇನ್ಸ್ ಪೆಕ್ಟರ್ ಜಗದೀಶ್ ಸಾಹಿಲ್ ಅವರಿದ್ದ ತಂಡ ಖಾರ್ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ರೌಂಡಪ್ ಮಾಡಿ ಬಂಧಿಸಿದೆ. ತಂಡದಲ್ಲಿ ಏಳು ಜನರ ಬಳಿ ಶಸ್ತ್ರಾಸ್ತ್ರಗಳಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಎಲ್ಲರೂ ಬಾಲಿವುಡ್ ನ ಗಣ್ಯಾತಿಗಣ್ಯರ ಹತ್ಯೆಗೆ ಸ್ಕೆಚ್ ಹಾಕಿದ್ದರು ಎಂದು ತಿಳಿದು ಬಂದಿದೆ.
ಈ ದುಷ್ಕರ್ಮಿಗಳ ತಂಡದ ಒಬ್ಬ ಸದಸ್ಯ ಮಹೇಶ್ ಭಟ್ ಅವರ ಮನೆಯಲ್ಲಿ ವಾಚ್ ಮನ್ ಕೆಲಸ ಗಿಟ್ಟಿಸಿಕೊಳ್ಳಲು ಯತ್ನಿಸಿ ವಿಫಲನಾಗಿದ್ದ. ಖಾರ್ ಪ್ರದೇಶದ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ನಾಲ್ಕು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ತಂಡದಲ್ಲಿ ಕೆಲವರು ದಂಧೆಗೆ ಹೊಸಬರಾಗಿದ್ದು, 11 ಲಕ್ಷ ರು ಸುಪಾರಿ ಪಡೆದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications