ಶೀನಾ ಬೋರಾ ಕೇಸ್ ತನಿಖಾಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ
ಮುಂಬೈ, ಸೆ. 08: ಮುಂಬೈನಗರಿಯಲ್ಲಿ 'ಮಾಂಸ ಬ್ಯಾನ್' ಬಗೆಗ್ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಶೀನಾ ಬೊರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ತಂಡದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹಾರಾಷ್ಟ್ರ ಸರ್ಕಾರ ಅಚ್ಚರಿಯ ಆದೇಶ ಹೊರಡಿಸಿದೆ. ಪೊಲೀಸ್ ಆಯುಕ್ತ ರಾಕೇಶ್ ಮಾರಿಯಾ ಅವರಿಗೆ ಬಡ್ತಿ ನೀಡಿ ಡಿಜಿಪಿ ಹುದ್ದೆಗೇರಿಸಲಾಗಿದೆ.
ಮುಂಬೈ ನಗರದ ಹೊಸ ಪೊಲೀಸ್ ಆಯುಕ್ತರಾಗಿ ಅಹ್ಮದ್ ಜಾವೇದ್ ರನ್ನು ನೇಮಿಸಲಾಗಿದೆ. ಹಾಲಿ ಆಯುಕ್ತ ರಾಕೇಶ್ ಮಾರಿಯಾ ಅವರನ್ನು ಹೋಂ ಗಾರ್ಡ್ ಡೈರೆಕ್ಟರ್ ಜನರಲ್ ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಂಗಳವಾರ ನೀಡಿರುವ ತನ್ನ ಆದೇಶದಲ್ಲಿ ಹೇಳಿದೆ.[ ಶೀನಾ ಬೋರಾ ಡಿಎನ್ಎ ಪರೀಕ್ಷೆ ವರದಿ ಬಹಿರಂಗ]

ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮಾಜಿ ಮುಖ್ಯಸ್ಥ, ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಮಾರಿಯಾ ಅವರು ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ, ವಿಚಾರಣೆ ನಡೆಸುತ್ತಿದ್ದರು.
ಸೋಮವಾರ ಈ ಪ್ರಕರಣದಲ್ಲಿ ಪ್ರಮುಖ ವಿಚಾರಗಳು ಬೆಳಕಿಗೆ ಬಂದಿತ್ತು. ನಿನ್ನೆ ದಿನಪೂರ್ತಿ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಪತಿ ಪೀಟರ್ ಮುಖರ್ಜಿ ಅವರ ವಿಚಾರಣೆ ನಡೆಸಲಾಗಿತ್ತು. ಜೊತೆಗೆ ಶೀನಾ ಅಸ್ಥಿಪಂಜರದ ಡಿಎನ್ ಎ ಹಾಗೂ ಇಂದ್ರಾಣಿಯ ಡಿಎನ್ ಎ ಮ್ಯಾಚ್ ಆಗಿರುವ ಅಂಶ ವರದಿಯಲ್ಲಿ ಹೇಳಲಾಗಿದೆ. ಅದರೆ, ಈಗ ರಾಕೇಶ್ ಮಾರಿಯಾ ಅವರನ್ನು ಸೇರಿದಂತೆ ತನಿಖಾ ತಂಡದಲ್ಲಿದ್ದ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಮಾರಿಯಾ vs ಜಾವೇದ್: ಕಳೆದ ವರ್ಷ ರಾಕೇಶ್ ಮಾರಿಯಾರನ್ನು ಪೊಲೀಸ್ ಆಯುಕ್ತ ಹುದ್ದೆಗೆ ಆಯ್ಕೆ ಮಾಡಿದಾಗ ಅಹ್ಮದ್ ಜಾವೇದ್ ಅವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಹೋಂ ಗಾರ್ಡ್ ವಿಭಾಗದ ಡಿಜಿ ಆಗಿದ್ದ ಜಾವೇದ್ ಈಗ ಮುಂಬೈನ ಟಾಪ್ ಕಾಪ್ ಹುದ್ದೆಗೇರಿದ್ದಾರೆ. ಸೆ. 30ಕ್ಕೆ ಪೊಲೀಸ್ ಆಯುಕ್ತರಾಗಿ ಮಾರಿಯಾ ಅವರ ಅಧಿಕಾರ ಅವಧಿ ಮುಗಿಯಲಿತ್ತು.
ಶೀನಾ ಬೋರಾ ಪ್ರಕರಣದಲ್ಲಿ ತನಿಖೆ ತೀವ್ರಗೊಳಿಸಿದ್ದ ರಾಕೇಶ್ ಮಾರಿಯಾ ಅವರು ಇತ್ತೀಚಿಗೆ ಈ ಪ್ರಕರಣ ಮತ್ತೊಂದು ಆರುಷಿ ಮರ್ಡರ್ ಕೇಸ್ ಆಗುವುದು ನನಗಿಷ್ಟವಿಲ್ಲ, ಶೀಘ್ರವೇ ಆರೋಪಿಗಳಿಗೆ ಶಿಕ್ಷೆ ಸಿಗಲಿದೆ ಎಂದಿದ್ದರು. ದಕ್ಷ ಅಧಿಕಾರಿ ಎನಿಸಿಕೊಂಡಿರುವ ರಾಕೇಶ್ ಮಾರಿಯಾರನ್ನು ಹೋಂಗಾರ್ಡ್ ವಿಭಾಗಕ್ಕೆ ವರ್ಗ ಮಾಡಿರುವುದು ಹಲವಾರು ಮಂದಿ ಹುಬ್ಬೇರಿಸಿದೆ. (ಒನ್ ಇಂಡಿಯಾ ಸುದ್ದಿ)
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications