ಶೀನಾ ಬೋರಾ ಕೇಸ್ ತನಿಖಾಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ
ಮುಂಬೈ, ಸೆ. 08: ಮುಂಬೈನಗರಿಯಲ್ಲಿ 'ಮಾಂಸ ಬ್ಯಾನ್' ಬಗೆಗ್ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಶೀನಾ ಬೊರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ತಂಡದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹಾರಾಷ್ಟ್ರ ಸರ್ಕಾರ ಅಚ್ಚರಿಯ ಆದೇಶ ಹೊರಡಿಸಿದೆ. ಪೊಲೀಸ್ ಆಯುಕ್ತ ರಾಕೇಶ್ ಮಾರಿಯಾ ಅವರಿಗೆ ಬಡ್ತಿ ನೀಡಿ ಡಿಜಿಪಿ ಹುದ್ದೆಗೇರಿಸಲಾಗಿದೆ.
ಮುಂಬೈ ನಗರದ ಹೊಸ ಪೊಲೀಸ್ ಆಯುಕ್ತರಾಗಿ ಅಹ್ಮದ್ ಜಾವೇದ್ ರನ್ನು ನೇಮಿಸಲಾಗಿದೆ. ಹಾಲಿ ಆಯುಕ್ತ ರಾಕೇಶ್ ಮಾರಿಯಾ ಅವರನ್ನು ಹೋಂ ಗಾರ್ಡ್ ಡೈರೆಕ್ಟರ್ ಜನರಲ್ ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಂಗಳವಾರ ನೀಡಿರುವ ತನ್ನ ಆದೇಶದಲ್ಲಿ ಹೇಳಿದೆ.[ ಶೀನಾ ಬೋರಾ ಡಿಎನ್ಎ ಪರೀಕ್ಷೆ ವರದಿ ಬಹಿರಂಗ]

ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮಾಜಿ ಮುಖ್ಯಸ್ಥ, ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಮಾರಿಯಾ ಅವರು ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ, ವಿಚಾರಣೆ ನಡೆಸುತ್ತಿದ್ದರು.
ಸೋಮವಾರ ಈ ಪ್ರಕರಣದಲ್ಲಿ ಪ್ರಮುಖ ವಿಚಾರಗಳು ಬೆಳಕಿಗೆ ಬಂದಿತ್ತು. ನಿನ್ನೆ ದಿನಪೂರ್ತಿ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಪತಿ ಪೀಟರ್ ಮುಖರ್ಜಿ ಅವರ ವಿಚಾರಣೆ ನಡೆಸಲಾಗಿತ್ತು. ಜೊತೆಗೆ ಶೀನಾ ಅಸ್ಥಿಪಂಜರದ ಡಿಎನ್ ಎ ಹಾಗೂ ಇಂದ್ರಾಣಿಯ ಡಿಎನ್ ಎ ಮ್ಯಾಚ್ ಆಗಿರುವ ಅಂಶ ವರದಿಯಲ್ಲಿ ಹೇಳಲಾಗಿದೆ. ಅದರೆ, ಈಗ ರಾಕೇಶ್ ಮಾರಿಯಾ ಅವರನ್ನು ಸೇರಿದಂತೆ ತನಿಖಾ ತಂಡದಲ್ಲಿದ್ದ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಮಾರಿಯಾ vs ಜಾವೇದ್: ಕಳೆದ ವರ್ಷ ರಾಕೇಶ್ ಮಾರಿಯಾರನ್ನು ಪೊಲೀಸ್ ಆಯುಕ್ತ ಹುದ್ದೆಗೆ ಆಯ್ಕೆ ಮಾಡಿದಾಗ ಅಹ್ಮದ್ ಜಾವೇದ್ ಅವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಹೋಂ ಗಾರ್ಡ್ ವಿಭಾಗದ ಡಿಜಿ ಆಗಿದ್ದ ಜಾವೇದ್ ಈಗ ಮುಂಬೈನ ಟಾಪ್ ಕಾಪ್ ಹುದ್ದೆಗೇರಿದ್ದಾರೆ. ಸೆ. 30ಕ್ಕೆ ಪೊಲೀಸ್ ಆಯುಕ್ತರಾಗಿ ಮಾರಿಯಾ ಅವರ ಅಧಿಕಾರ ಅವಧಿ ಮುಗಿಯಲಿತ್ತು.
ಶೀನಾ ಬೋರಾ ಪ್ರಕರಣದಲ್ಲಿ ತನಿಖೆ ತೀವ್ರಗೊಳಿಸಿದ್ದ ರಾಕೇಶ್ ಮಾರಿಯಾ ಅವರು ಇತ್ತೀಚಿಗೆ ಈ ಪ್ರಕರಣ ಮತ್ತೊಂದು ಆರುಷಿ ಮರ್ಡರ್ ಕೇಸ್ ಆಗುವುದು ನನಗಿಷ್ಟವಿಲ್ಲ, ಶೀಘ್ರವೇ ಆರೋಪಿಗಳಿಗೆ ಶಿಕ್ಷೆ ಸಿಗಲಿದೆ ಎಂದಿದ್ದರು. ದಕ್ಷ ಅಧಿಕಾರಿ ಎನಿಸಿಕೊಂಡಿರುವ ರಾಕೇಶ್ ಮಾರಿಯಾರನ್ನು ಹೋಂಗಾರ್ಡ್ ವಿಭಾಗಕ್ಕೆ ವರ್ಗ ಮಾಡಿರುವುದು ಹಲವಾರು ಮಂದಿ ಹುಬ್ಬೇರಿಸಿದೆ. (ಒನ್ ಇಂಡಿಯಾ ಸುದ್ದಿ)
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications