ಮುಂಬೈನಲ್ಲಿ ಹಸ್ತಮೈಥುನ ಸೀನ್ಸ್ ಕಾಮನ್ ಎಂದ ಟ್ವಿಂಕಲ್
ನವದೆಹಲಿ, ಆಗಸ್ಟ್ 20:ಮುಂಬೈನ ಹಸ್ತಮೈಥುನ ಪ್ರಕರಣದಲ್ಲಿ ಆರೋಪಿ ಯುವಕನಿಗೆ ಜಾಮೀನು ಸಿಕ್ಕಿ ಹೊರ ಬಂದಿದ್ದಾನೆ. ಅದರೆ, ಈ ಬಗ್ಗೆ ಚರ್ಚೆ ಮಾತ್ರ ಇನ್ನೂ ನಿಂತಿಲ್ಲ. ರಾಜೇಶ್ ಖನ್ನಾ ಮಗಳು ನಟಿ ಟ್ವಿಂಕಲ್ ಖನ್ನ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಮುಂಬೈನಲ್ಲಿ ಈ ರೀತಿ ಪ್ರಸಂಗಗಳನ್ನು ಸಾರ್ವಜನಿಕರು ಎದುರಿಸುತ್ತಿರುತ್ತಾರೆ. ಅದರೆ, ಯಾರೂ ವರದಿ ಮಾಡುವೆ ಗೋಜಿಗೆ ಹೋಗುವುದಿಲ್ಲ. ನಾನು ನನ್ನ ಬಾಲ್ಯದ ದಿನಗಳಲ್ಲಿ ಇಂಥ ಘಟನೆಯನ್ನು ಎದುರಿಸಿದ್ದೆ ಎಂದು ಜೀ ನ್ಯೂಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ. [ಹಸ್ತಮೈಥುನ ಪ್ರಸಂಗದ ಟ್ವೀಟ್ ಪ್ರತಿಕ್ರಿಯೆಗಳು]

ನಟ ಅಕ್ಷಯ್ ಕುಮಾರ್ ಅವರ ಪತ್ನಿ ಟ್ವಿಂಕಲ್ ಖನ್ನ ಅವರು ಮುಂಬೈ ಪ್ರಸಂಗದ ಬಗ್ಗೆ ಪ್ರತಿಕ್ರಿಯಿಸಿ, ನಾನು 12 ವರ್ಷ ವಯಸ್ಸಿನವಳಿದ್ದಾಗ ಹ್ಯಾಂಗಿಂಗ್ ಗಾರ್ಡನ್ಸ್ ಗೆ ಶಾಲಾ ಪ್ರವಾಸಕ್ಕೆಂದು ಹೋಗಿದ್ದೆ. ಒಬ್ಬಳೆ ಸುತ್ತಾಡುವಾಗ ನನ್ನ ಎದುರಿಗೆ ಒಬ್ಬ ವ್ಯಕ್ತಿ ಹಸ್ತಮೈಥುನ ಮಾಡಿಕೊಂಡಿದ್ದನ್ನು ನೋಡಿ, ಭಯಗೊಂಡು ಓಡಿ ಬಂದೆ. ಇಂಥ ವ್ಯಕ್ತಿಗಳು ಮಾನಸಿಕವಾಗಿ ಅಸ್ವಸ್ಥರಾಗಿರುತ್ತಾರೆ. ಇಂಥವರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದು ಅಗತ್ಯ ಎಂದಿದ್ದಾರೆ.
ದಕ್ಷಿಣ ಮುಂಬೈನಲ್ಲಿ ಅಮೆರಿಕನ್ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಮರಿಯಾನಾ ಅಬ್ ಡೋ ಅವರ ಎದುರು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡ ಯುವಕನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದರು. ಅದರೆ, 20 ವರ್ಷ ವಯಸ್ಸಿನ ಗೋಪಾಲ್ ವಾಲ್ಮಿಕಿ ಜಾಮೀನು ಪಡೆದು ಪೊಲೀಸ್ ವಶದಿಂದ ಹೊರಬಂದಿದ್ದಾನೆ. ಇದಕ್ಕೂ ಮುನ್ನ ಸಾಮಾಜಿಕ ಜಾಲ ತಾಣಗಳಲ್ಲಿ ಈ ಘಟನೆ ಬಗ್ಗೆ ಭಾರಿ ಪ್ರತಿಕ್ರಿಯೆ ಬಂದಿತ್ತು.
ನಾನು ಹಸ್ತಮೈಥುನ ಮಾಡಿಕೊಳ್ಳುತ್ತಿರುಲಿಲ್ಲ. ಸುಸು ಮಾಡುತ್ತಿದ್ದೆ ಎಂದು ಪೊಲೀಸ್ ವಿಚಾರಣೆ ವೇಳೆ ಯುವಕ ವಾಲ್ಮೀಕಿ ಹೇಳಿಕೆ ನೀಡಿದ್ದಾನೆ. ಈ ಸುದ್ದಿ ವಿಡಿಯೋ ಇಲ್ಲಿದೆ ನೋಡಿ:
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications