ಗುಪ್ತಚರ ಸ್ಪೋಟಕ ವರದಿ: ವಾಣಿಜ್ಯ ನಗರಿ ಮುಂಬೈ ಹೈಅಲರ್ಟ್
ಮುಂಬೈ, ಡಿ 31 (ಎಎನ್ಐ): ಓಮ್ರಿಕಾನ್ ವೈರಸ್ ನಿಂದ ತತ್ತರಿಸಿರುವ ವಾಣಿಜ್ಯ ನಗರಿಗೆ ಇನ್ನೊಂದು ತಲೆನೋವು ಎದುರಾಗಿದೆ. ಖಲಿಸ್ಥಾನಿ ಉಗ್ರರ ಕಣ್ಣು ನಗರದ ಮೇಲೆ ಬಿದ್ದಿದ್ದು ಕಟ್ಟೆಚ್ಚರದಲ್ಲಿ ಇರುವಂತೆ ಗುಪ್ತಚರ ಇಲಾಖೆ, ಮಹಾರಾಷ್ಟ್ರ ಗೃಹ ಇಲಾಖೆಗೆ ತುರ್ತು ಎಚ್ಚರಿಕೆಯನ್ನು ರವಾನಿಸಿದೆ.
ಇತ್ತೀಚೆಗೆ ಲುಧಿಯಾನ ಕೋರ್ಟ್ ಆವರಣದಲ್ಲಿ ಐಇಡಿ ಸ್ಪೋಟ ನಡೆಸಿದ ಖಲಿಸ್ಥಾನಿ ಉಗ್ರರು ಮುಂಬೈ ಮಹಾನಗರದ ಮೇಲೆ ಕಣ್ಣಿಟ್ಟಿದ್ದು, ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲೇ ದಾಳಿ ನಡೆಸುವ ಯೋಜನೆ ಹಾಕಿಕೊಂಡಿದ್ದಾರೆ ಎನ್ನುವ ಎಚ್ಚರಿಕೆಯನ್ನು ನೀಡಲಾಗಿದೆ.
ಗುಪ್ತಚರ ಇಲಾಖೆಯ ಎಚ್ಚರಿಕೆಯ ನಂತರ ಪೊಲೀಸ್ ಇಲಾಖೆ ಹೈಅಲರ್ಟ್ ಘೋಷಿಸಿದ್ದು, ಗಸ್ತು ತಿರುಗುವಿಕೆಯನ್ನು ತ್ವರಿತಗೊಳಿಸಿದ್ದಾರೆ. ಜೊತೆಗೆ, ರಜೆಯಲ್ಲಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಈ ಕೂಡಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಇಂದು (ಡಿ 31) ಇಡೀ ನಗರವನ್ನು ಹದ್ದಿನ ಕಣ್ಣಿನಲ್ಲಿ ಕಾಯಲು ಪೊಲೀಸ್ ಇಲಾಖೆ ಸರ್ವಸಿದ್ದತೆಯನ್ನು ಮಾಡಿಕೊಂಡಿದೆ. ಆಯಕಟ್ಟಿನ ಪ್ರದೇಶಗಳಾದ ಛತ್ರಪತಿ ಶಿವಾಜಿ ಟರ್ಮಿನಲ್, ಬಾಂದ್ರಾ ಗೇಟ್, ಚರ್ಚಗೇಟ್, ತಾಜ್ ಹೋಟೆಲ್, ಕುರ್ಲಾ ಮುಂತಾದ ಕಡೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
"ಖಲಿಸ್ಥಾನಿ ಪರ ಹೋರಾಟಗಾರ, ಸಿಖ್ ಫಾರ್ ಜಸ್ಟೀಸ್ ಸಂಘಟನೆಯ ಸದಸ್ಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಮುಂಬೈ ನಗರದ ಕೆಲವು ಪ್ರದೇಶಗಳ ಮೇಲೆ ದಾಳಿ ನಡೆಸುವ ಸಂಚಿನ ಬಗ್ಗೆ ಮಾಹಿತಿಯನ್ನು ನೀಡಿದ್ದಾನೆ. ಇವರಿಗೆ, ಪಾಕಿಸ್ತಾನದ ಇಂಟೆಲಿಜೆನ್ಸ್ ಬೆಂಬಲವಿದೆ" ಎಂದು ಮುಂಬೈ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
"ಪಾಕಿಸ್ತಾನದ ಐಎಸ್ಐ, ಖಲಿಸ್ಥಾನ ಪರವಿರುವ ಇತರ ಸಂಘಟನೆಗಳಿಗೂ ನೆರವನ್ನು ನೀಡುತ್ತಿದೆ. ಮುಂಬೈನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಹಾಯ ಮಾಡುತ್ತಿದೆ. ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ದಾಳಿ ನಡೆಸುವ ಹುನ್ನಾರ ನಡೆಸಿದೆ. ಹಾಗಾಗಿ, ಅಲರ್ಟ್ ಆಗಿರಲು ಗುಪ್ತಚರ ಇಲಾಖೆಯೂ ಸೂಚನೆಯನ್ನು ನೀಡಿದೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications