ಮುಂಬೈನಲ್ಲಿ ಡೆಲ್ಟಾ ಪ್ಲಸ್ಗೆ ಪ್ರಥಮ ಬಲಿ: ಮಹಾರಾಷ್ಟ್ರದಲ್ಲಿ ಎರಡನೇ ಸಾವು ದಾಖಲು
ಮುಂಬೈ, ಆ. 13: ಕೊರೊನಾ ವೈರಸ್ ಸೋಂಕಿನ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರದಿಂದ ಮುಂಬೈ ತನ್ನ ಮೊದಲ ಸಾವನ್ನು ವರದಿ ಮಾಡಿದೆ. 63 ವರ್ಷದ ಮಹಿಳೆಗೆ ಜುಲೈ 21 ರಂದು ಕೊರೊನಾ ವೈರಸ್ ಸೋಂಕು ದೃಡಪಟ್ಟಿದ್ದು, ಜುಲೈ 27 ರಂದು ನಿಧನರಾದರು. ಆ ರೋಗಿಯಲ್ಲಿ ಮಧುಮೇಹ ಸೇರಿದಂತೆ ಹಲವಾರು ಇತರೆ ರೋಗಗಳು ಇದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ತಿಂಗಳು ರತ್ನಗಿರಿಯ 80 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ ಇದು ಡೆಲ್ಟಾ ಪ್ಲಸ್ ನಿಂದ ಮಹಾರಾಷ್ಟ್ರದ ಎರಡನೇ ಸಾವಾಗಿದೆ ಎಂದು ವರದಿಯು ತಿಳಿಸಿದೆ. ಮುಂಬೈ ಮಹಿಳೆಗೆ ಸಂಪೂರ್ಣವಾಗಿ ಕೋವಿಡ್ ಲಸಿಕೆ ನೀಡಲಾಗಿತ್ತು. ಮತ್ತು ನಗರದ ಏಳು ಕೊರೊನಾ ವೈರಸ್ ರೋಗಿಗಳಲ್ಲಿ ಈ ಮುಂಬೈ ಮಹಿಳೆಯ ವರದಿಗಳು ಡೆಲ್ಟಾ ಪ್ಲಸ್ ರೂಪಾಂತರವು ಮಹಿಳೆಯಲ್ಲಿತ್ತು ಎಂಬುವುದನ್ನು ದೃಢಪಡಿಸಿದೆ ಎನ್ನಲಾಗಿದೆ.
ಮಹಿಳೆಯ ಮಾದರಿಗಳಿಂದ ಜೀನೋಮ್ ಸೀಕ್ವೆನ್ಸಿಂಗ್ ಫಲಿತಾಂಶಗಳು ಬುಧವಾರ ಬಂದಿವೆ. ಮುಂಬೈನ ನಾಗರಿಕ ಸಂಸ್ಥೆ ಬಿಎಂಸಿ (ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್) ರಾಜ್ಯ ಆರೋಗ್ಯ ಇಲಾಖೆಯಿಂದ ಡೆಲ್ಟಾ ಪ್ಲಸ್ ಪರೀಕ್ಷೆಯ ವರದಿಯನ್ನು ಪಡೆದ ನಂತರ ಏಳು ರೋಗಿಗಳನ್ನು ಸಂಪರ್ಕಿಸಲು ಆರಂಭಿಸಿದೆ.

ಇನ್ನು ಈ ಕೊರೊನಾ ವೈರಸ್ನ ಡೆಲ್ಟಾ ರೂಪಾಂತರ ವರದಿ ಮಾಡಿದ ಮಹಿಳೆಯ ಇಬ್ಬರು ನಿಕಟ ಸಂಪರ್ಕ ಹೊಂದಿದವಲ್ಲಿ ಕೋವಿಡ್ನ ರೂಪಾಂತರ ಡೆಲ್ಟಾ ಪ್ಲಸ್ ದೃಢಪಟ್ಟಿದೆ. ಆದರೆ ಈ ಮಹಿಳೆಯು ಯಾವುದೇ ಪ್ರಯಾಣದ ಇತಿಹಾಸವನ್ನು ಹೊಂದಿರಲಿಲ್ಲ ಎಂದು ಹೇಳಲಾಗಿದೆ.
ಡೆಲ್ಟಾ ಪ್ಲಸ್ ಸೋಂಕಿಗೆ ಬಲಿಯಾದ ಈ ಮಹಿಳೆಯು ಆಮ್ಲಜನಕದ ಬೆಂಬಲದಲ್ಲಿದ್ದಳು ಮತ್ತು ಸ್ಟೀರಾಯ್ಡ್ಗಳು ಮತ್ತು ರೆಮ್ಡೆಸಿವಿರ್ ಅನ್ನು ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಲ್ಟಾ ಪ್ಲಸ್ ಡೆಲ್ಟಾದ ರೂಪಾಂತರವಾಗಿದ್ದು, ಭಾರತದಲ್ಲಿ ಮೊದಲು ಪತ್ತೆಯಾದ ಅತ್ಯಂತ ಸಾಂಕ್ರಾಮಿಕ ಕೋವಿಡ್ ರೂಪಾಂತರವಾಗಿದೆ.
ಮಹಾರಾಷ್ಟ್ರ ರಾಜ್ಯ ಸರ್ಕಾರದ ಪ್ರಕಾರ, ಮುಂಬೈನ ಏಳು ಮಾದರಿಗಳ ಜೊತೆಗೆ, ಮಹಾರಾಷ್ಟ್ರದಾದ್ಯಂತ 13 ಹೆಚ್ಚಿನ ಕೋವಿಡ್ನ ಡೆಲ್ಟಾ ರೂಪಾಂತರದ ರೂಪಾಂತರ ಡೆಲ್ಟಾ ಪ್ಲಸ್ ದೃಢಪಟ್ಟಿದೆ. ಈ ಪೈಕಿ ಮೂರು ಪ್ರಕರಣಗಳು ಪುಣೆಯಲ್ಲಿ, ಎರಡು ಪ್ರಕರಣಗಳು ನಾಂದೇಡ್, ಗೊಂಡಿಯಾ, ರಾಯಗಢ ಮತ್ತು ಪಾಲ್ಘರ್, ಮತ್ತು ಚಂದ್ರಾಪುರ ಮತ್ತು ಅಕೋಲಾದಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ ಎಂದು ವರದಿಯು ತಿಳಿಸಿದೆ. ಮಹಾರಾಷ್ಟ್ರದಾದ್ಯಂತ ವರದಿಯಾದ 13 ಡೆಲ್ಟಾ ಪ್ಲಸ್ ಪ್ರಕರಣಗಳ ಬಳಿಕ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೋಗಿಗಳ ಸಂಖ್ಯೆ 65 ಕ್ಕೆ ಏರಿದೆ.

ಕೋವಿಡ್ನ ಈ ಡೆಲ್ಟಾ ಪ್ಲಸ್ ರೂಪಾಂತರ ಏಳು ಮಕ್ಕಳು ಮತ್ತು ಎಂಟು ಹಿರಿಯ ನಾಗರಿಕರಲ್ಲಿ ಕಂಡುಬಂದಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಕೊರೊನಾ ವೈರಸ್ ಸೋಂಕಿತ ರೋಗಿಗಳ ಸಂಪರ್ಕಕ್ಕೆ ಬಂದ ಜನರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಬುಧವಾರ, ಕೇಂದ್ರ ಸರ್ಕಾರವು ದೇಶಾದ್ಯಂತ 86 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದೆ. ಆದರೆ ಇಲ್ಲಿಯವರೆಗೆ "ಘಾತೀಯ ಏರಿಕೆ" ಇಲ್ಲ ಎಂದು ಹೇಳಿದೆ.
ಇನ್ನು ಈ ಕೋವಿಡ್ನ ಈ ಡೆಲ್ಟಾ ಪ್ಲಸ್ ರೂಪಾಂತರ ಪ್ರಕರಣಗಳು ಹೆಚ್ಚಿನವುಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿವೆ, ನಂತರ ಮಧ್ಯಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಧಿಕ ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಮುಖ್ಯಸ್ಥ ಸುಜಿತ್ ಸಿಂಗ್, ಕೇಂದ್ರ ಆರೋಗ್ಯ ಸಚಿವಾಲಯದ ಬ್ರೀಫಿಂಗ್ನಲ್ಲಿ ಸುದ್ದಿಗಾರರಿಗೆ ತಿಳಿಸಿದರು."ಈ ಡೆಲ್ಟಾ ರೂಪಾಂತರವು ಅದರ ಪ್ರಸರಣದ ಮೂಲಕ, ಯಾವುದೇ ದೊಡ್ಡ ಘಾತೀಯ ಏರಿಕೆಗೆ ಕಾರಣವಾಗಲಿಲ್ಲ," ಎಂದು ಕೂಡಾ ಸುಜಿತ್ ಸಿಂಗ್ ಒತ್ತಿ ತಿಳಿಸಿದ್ದಾರೆ.
ಡೆಲ್ಟಾ ರೂಪಾಂತರವು ಏಪ್ರಿಲ್-ಮೇನಲ್ಲಿ ಕೊರೊನಾವೈರಸ್ನ ಮಾರಕ ಎರಡನೇ ಅಲೆಗೆ ಕಾರಣವಾಯಿತು, ಇದು ದೇಶದ ಆರೋಗ್ಯ ಮೂಲಸೌಕರ್ಯವನ್ನು ಮುಳುಗಿಸಿತು ಮತ್ತು ಸಾವಿರಾರು ಜನರು ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಕೋವಿಡ್ ಲಸಿಕೆಗಾಗಿ ಪರದಾಡುವ ಪರಿಸ್ಥಿತಿ ಆ ಸಂದರ್ಭದಲ್ಲಿ ಉಂಟಾಗಿತ್ತು.
(ಒನ್ಇಂಡಿಯಾ ಸುದ್ದಿ)
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications