'ದಾವೂದ್ ಇಬ್ರಾಹಿಂ ಕರಾಚಿಯಲ್ಲಿ'- ಇಡಿಗೆ ಬಾಯಿಬಿಟ್ಟ ಅಲಿಶಾ ಪರ್ಕರ್
ಮುಂಬೈ ಮೇ 24: ಕುಖ್ಯಾತ ಡಾನ್ ದಾವೂದ್ ಇಬ್ರಾಹಿಂ ಕಸ್ಕರ್ ಇರುವಿಕೆಯನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯದ ತನಿಖೆಯ ಸಂದರ್ಭದಲ್ಲಿ ಆತನ ಸೋದರಳಿಯ ಅಲಿಶಾ ಪರ್ಕರ್ ಬಹಿರಂಗಪಡಿಸಿದ್ದಾನೆ. ದಾವೂದ್ ಪ್ರಸ್ತುತ ಕರಾಚಿಯಲ್ಲಿದ್ದಾನೆ ಎಂದು ಪಾರ್ಕರ್ ಹೇಳಿರುವುದಾಗಿ ಇಡಿ ಮುಂಬೈ ನ್ಯಾಯಾಲಯಕ್ಕೆ ತನ್ನ ಚಾರ್ಜ್ ಶೀಟ್ನಲ್ಲಿ ತಿಳಿಸಿದೆ.
1993ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ. 1993ರಲ್ಲಿ ಮುಂಬೈನ 12ಕ್ಕೂ ಅಧಿಕ ಕಡೆಗಳಲ್ಲಿ ಸಂಭವಿಸಿದ ಸ್ಫೋಟದಲ್ಲಿ 257ಕ್ಕೂ ಅಧಿಕ ಮಂದಿ ಮೃತಪಟ್ಟು 1400 ಮಂದಿ ಗಾಯಗೊಂಡಿದ್ದರು. ಈ ಪ್ರಕರಣದ ಎಫ್ಐಆರ್ನಲ್ಲಿ ದಾವೂದ್ ಇಬ್ರಾಹಿಂ, ಹಾಜಿ ಅನೀಸ್ ಅಲಿಯಾಸ್ ಅನೀಸ್ ಇಬ್ರಾಹಿಂ ಶೇಖ್, ಶಕೀಲ್ ಶೇಖ್ ಅಲಿಯಾಸ್ ಛೋಟಾ ಶಕೀಲ್, ಜಾವೇದ್ ಪಟೇಲ್ ಅಲಿಯಾಸ್ ಜಾವೇದ್ ಚಿಕ್ನಾ, ಇಬ್ರಾಹಿಂ ಮುಷ್ತಾಕ್ ಅಬ್ದುಲ್ ರಜಾಕ್ ಮೆಮನ್ ಅಲಿಯಾಸ್ ಟೈಗರ್ ಮೆಮನ್ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಯುಎಪಿಎ ಸೆಕ್ಷನ್ 17, 18, 20,21,38 ಮತ್ತು 40 ರೊಂದಿಗೆ ಐಪಿಸಿಯ ಸೆಕ್ಷನ್ 120 ಬಿ ಅಡಿಯಲ್ಲಿ ಫೆಬ್ರವರಿ 3, 2022 ರಂದು ಎನ್ಐಎ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ದಾವೂದ್ ಇಬ್ರಾಹಿಂ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತು.
ಹಸೀನಾ ಪರ್ಕರ್ ಅವರ ಪುತ್ರ ಅಲಿಶಾ ಅವರು ತಾವು ದಾವೂದ್ ಜೊತೆ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದಾರೆ. ಇಡಿ ಇತ್ತೀಚೆಗೆ ಮುಂಬೈ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಇದೇ ಪ್ರಕರಣದಲ್ಲಿ ಎನ್ಸಿಪಿ ನಾಯಕ ನವಾಬ್ ಮಲಿಕ್ ಕೂಡ ವಿಚಾರಣೆ ಎದುರಿಸುತ್ತಿದ್ದಾರೆ.

ಈದ್ನಂತಹ ಹಬ್ಬಗಳ ಸಂದರ್ಭದಲ್ಲಿ ದಾವೂದ್ನ ಕುಟುಂಬವನ್ನು ಸಂಪರ್ಕಿಸುತ್ತಿದ್ದರು ಎಂದು ಇಡಿ ಚಾರ್ಜ್ಶೀಟ್ ಹೇಳುತ್ತದೆ. ಅಲಿಶಾ ಅವರನ್ನು ಫೆಬ್ರವರಿಯಲ್ಲಿ ಇಡಿ ಗ್ರಿಲ್ ಮಾಡಿತ್ತು. ಅವರ ಹೇಳಿಕೆಯನ್ನು ಪುರಾವೆಯ ಭಾಗವಾಗಿ ಚಾರ್ಜ್ ಶೀಟ್ನೊಂದಿಗೆ ಒದಗಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications