ಮುಂಬೈ ತ್ರಿವಳಿ ಬಾಂಬ್ ಸ್ಫೋಟ : 10 ಜನರ ಆರೋಪ ಸಾಬೀತು
ಮುಂಬೈ, ಮಾರ್ಚ್ 29 : 2002 ಮತ್ತು 2003ರಲ್ಲಿ ಮುಂಬೈನಲ್ಲಿ ನಡೆದ ತ್ರಿವಳಿ ಸರಣಿ ಬಾಂಬ್ ಸ್ಫೋಟದಲ್ಲಿ 10 ಜನರ ವಿರುದ್ಧದ ಆರೋಪ ಸಾಬೀತಾಗಿದೆ. ಮೂವರು ಆರೋಪಿಗಳನ್ನು ವಿಶೇಷ ಪೋಟಾ ಕೋರ್ಟ್ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.
10 ಜನರ ವಿರುದ್ಧದ ದೇಶದ್ರೋಹ ಮತ್ತು ಕೊಲೆ ಆರೋಪಗಳು ಸಾಬೀತಾಗಿವೆ. ಮೂವರು ವಿರುದ್ಧ ಸೂಕ್ತ ಸಾಕ್ಷಿಗಳು ಲಭ್ಯವಾಗದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ಪೋಟಾ ನ್ಯಾಯಾಲಯ ಮಂಗಳವಾರ ತನ್ನ ಆದೇಶದಲ್ಲಿ ತಿಳಿಸಿದೆ. [ವರ್ಷಾಂತ್ಯ ವಿಶೇಷ : ತಡರಾತ್ರಿ ಬಾಗಿಲು ತೆರೆದ ಸುಪ್ರೀಂಕೋರ್ಟ್]

ತ್ರಿವಳಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಸಾಖ್ವಿಬ್ ನಾಚಾನ್ ವಿರುದ್ಧದ ಆರೋಪವೂ ಸಾಬೀತಾಗಿದೆ. ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು ಚಾರ್ಚ್ ಶೀಟ್ನಲ್ಲಿ ಎಲ್ಲಾ ಆರೋಪಿಗಳು ನಿಷೇಧಿತ ಸಿಮಿ (ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ) ಸಂಘಟನೆಯ ಸದಸ್ಯರು ಎಂದು ಹೇಳಿದ್ದರು. [ಮುಂಬೈ ಸರಣಿ ಬಾಂಬ್ ಸ್ಫೋಟ : Timeline]
ಸಿಮಿ ಸಂಘಟನೆಯನ್ನು ನಿಷೇಧ ಮಾಡಿರುವುದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಫೋಟ ನಡೆಸಿದ್ದರು ಎಂದು ಪೊಲೀಸರು ಹೇಳಿದ್ದರು. ಎಲ್ಲಾ ಆರೋಪಿಗಳು ಗುಂಪಾಗಿ ತ್ರಿವಳಿ ಸ್ಫೋಟದಲ್ಲಿ ಪಾಲ್ಗೊಂಡಿದ್ದರು. ಸ್ಫೋಟಕ್ಕಾಗಿ ಪಾಕಿಸ್ತಾನ ಮೂಲದ ವ್ಯಕ್ತಿಯ ಸಹಾಯವನ್ನು ಇವರು ಪಡೆದಿದ್ದರು. [1993ರ ಮುಂಬೈ ಸ್ಫೋಟ 2 ದಶಕದ ನಂತರ ತೀರ್ಪು]
ಮೂರು ಸ್ಫೋಟಗಳು
* 2002ರ ಡಿಸೆಂಬರ್ 6ರಂದು ಮುಂಬೈ ಕೇಂದ್ರ ರೈಲು ನಿಲ್ದಾಣದ ಮ್ಯಾಕ್ ಡೋನಾಲ್ಡ್ ರೆಸ್ಟೋರೆಂಟ್ನಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಸ್ಫೋಟದಲ್ಲಿ 27 ಜನರು ಗಾಯಗೊಂಡಿದ್ದರು.
* 2003ರ ಜನವರಿ 27ರಂದು ಮುಂಬೈನ ವಿಲೇಪಾರ್ಲೆ ರೈಲ್ವೆ ನಿಲ್ದಾಣದ ಶಾಪಿಂಗ್ ಕಾಂಪ್ಲೆಕ್ಸ್ ಹೊರಭಾಗದಲ್ಲಿ ಸೈಕಲ್ನಲ್ಲಿ ಇಟ್ಟಿದ್ದ ಬಾಂಬ್ ಸ್ಫೋಟಗೊಂಡಿತ್ತು. 30 ಜನರು ಈ ಸ್ಫೋಟದಲ್ಲಿ ಗಾಯಗೊಂಡಿದ್ದರು.
* 2003ರ ಮಾರ್ಚ್ 13ರಂದು ಮುಲುಂದ್ ನಿಲ್ದಾಣಕ್ಕೆ ಬರುತ್ತಿದ್ದ ರೈಲಿನ ಮಹಿಳಾ ವಿಶೇಷ ಬೋಗಿಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. 13 ಜನರು ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದರು ಮತ್ತು 65ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications