ಕ್ಯಾನ್ಸರ್ ಚಿಕಿತ್ಸೆ ನಂತರ ಮುಂಬೈಗೆ ಮರಳಿದ ಸೋನಾಲಿ ಬೇಂದ್ರೆ
Recommended Video

ಮುಂಬೈ, ಡಿಸೆಂಬರ್ 03: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಅವರು ಇದೀಗ ಮುಂಬೈಗೆ ವಾಪಸ್ಸಾಗಿದ್ದಾರೆ.
ಅಮೆರಿಕದ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆಪಡೆಯುತ್ತಿದ್ದ ಅವರು, ಇದೀಗ ಚಿಕಿತ್ಸೆ ಮುಗಿಸಿ ವಾಪಸ್ಸಾಗಿದ್ದು, ಅವರ ಆರೋಗ್ಯ ಸುಧಾರಿಸಿದೆ.
"ಸೋನಾಲಿ ಬೇಂದ್ರೆ ಕ್ಷೇಮವಾಗಿದ್ದಾರೆ. ಅವರು ಗುಣಮುಖರಾಗುತ್ತಿದ್ದಾರೆ. ಸದ್ಯಕ್ಕೆ ಚಿಕಿತ್ಸೆ ಮುಗಿದಿದೆ. ಆದರೆ ಈ ಕಾಯಿಲೆ ಮತ್ತೆ ಮತ್ತೆ ಬರುವ ಸಾಧ್ಯತೆ ಇರುವುದರಿಂದ ನಿಯಮಿತವಾಗಿ ತಪಾಸಣೆ ಮಾಡಿಸುವುದು ಅನಿವಾರ್ಯ" ಎಂದು ಸೋನಾಲಿ ಬೇಂದ್ರೆ ಅವರ ಪತಿ ಗೋಲ್ಡಿ ಬೆಹ್ಲ್ ತಿಳಿಸಿದ್ದಾರೆ.

ತಮಗೆ ಕ್ಯಾನ್ಸರ್ ಇದೆ ಎಂಬುದು ತಿಳಿಯುತ್ತಿದ್ದಂತೆಯೇ ಸ್ವಲ್ಪವೂ ಎದೆಗುಂದದ ಸೋನಾಲಿ ಬೇಂದ್ರೆ ಅವರು, "ನಾನು ಈ ರೋಗವನ್ನು ಗೆಲ್ಲುತ್ತೇನೆ" ಎಂಬ ಮನೋಬಲ ಬೆಳೆಸಿಕೊಂಡರು.
"ಕೆಲವೊಮ್ಮೆ ಅನಿರೀಕ್ಷಿತ ಸಂದರ್ಭಗಳಲ್ಲಿ ಜೀವನ ನಮ್ಮನ್ನು ಸಂಕಷ್ಟಕ್ಕೆ ನೂಕುತ್ತವೆ. ನಾನು ಅಪಾಯಕಾರಿ ಪ್ರಮಾಣದ ಕ್ಯಾನ್ಸರ್ಗೆ ತುತ್ತಾಗಿರುವುದು ಇತ್ತೀಚೆಗೆ ಪತ್ತೆಯಾಗಿದೆ. ನಿಜಕ್ಕೂ ಇದು ಆವರಿಸಿದ್ದು ನನಗೆ ಗೊತ್ತೇ ಆಗಿರಲಿಲ್ಲ. ಸಣ್ಣಪುಟ್ಟ ನೋವಿನ ಕಾರಣ ಕೆಲವು ಪರೀಕ್ಷೆಗೆ ಒಳಗಾಗಬೇಕಾಯಿತು. ಅದರಿಂದ ಈ ಅನಿರೀಕ್ಷಿತ ರೋಗದ ಪತ್ತೆಯಾಗಿದೆ" ಎಂದು 43 ವರ್ಷದ ಸೋನಾಲಿ ಬೇಂದ್ರೆ ತಮಗಾಗಿರುವ ಆಘಾತ ಹಂಚಿಕೊಂಡಿದ್ದರು.
Mumbai: Sonali Bendre returns from New York where she was undergoing treatment for cancer;husband Goldie Behl says,"Sonali is doing good. She is back for good. She is recovering very well.For now,treatment has ended. But the disease can come back so regular checkups will be done" pic.twitter.com/PPVXW2B2Eh
— ANI (@ANI) December 2, 2018
ಆದರೆ ಕಳೆದ ಜುಲೈನಿಂದ ನಿರಂತರವಾಗಿ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಸದ್ಯಕ್ಕೆ ಗುಣಮುಖರಾಗಿ ಸ್ವದೇಶಕ್ಕೆ ಮರಳಿದ್ದಾರೆ. ಅವರು ಸಂಪೂರ್ಣ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications