ಕಾಂಗ್ರೆಸ್ ಆಸೆಗೆ ತಣ್ಣೀರು ಎರಚಿದ ನಟಿ ಕರೀನಾ ಕಪೂರ್
ಮುಂಬೈ / ಭೋಪಾಲ್, ಜ 22: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖ್ಯಾತ ಬಾಲಿವುಡ್ ನಟಿ ಕರೀನಾ ಕಪೂರ್ ಸ್ಪರ್ಧಿಸಲಿದ್ದಾರಾ? ಈ ಪ್ರಶ್ನೆಗೆ ಕರೀನಾ ಸ್ಪಷ್ಟನೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಕರೀನಾ ಕಪೂರ್, ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಸಂಬಂಧ, ಕಾಂಗ್ರೆಸ್ ಮುಖಂಡರು ಒಂದು ಹಂತದ ಮಾತುಕತೆಯನ್ನೂ ನಡೆಸಿದ್ದರು ಎಂದು ವರದಿಯಾಗಿತ್ತು.
ಆದರೆ, ತಾವು ರಾಜಕೀಯಕ್ಕೆ ಪ್ರವೇಶಿಸುವ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಕರೀನಾ, ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಗುರಿ ಏನಿದ್ದರೂ ಸಿನಿಮಾ ರಂಗ ಮಾತ್ರ ಎಂದಿದ್ದಾರೆ.

ಸ್ಥಳೀಯ ಕಾಂಗ್ರೆಸ್ ಮುಖಂಡ ಯೋಗೇಂದ್ರ ಸಿಂಗ್ ತಮ್ಮ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದು, ಭೋಪಾಲ್ ಕ್ಷೇತ್ರದಿಂದ ಕರೀನಾ ಕಪೂರ್ ಉತ್ತಮ ಅಭ್ಯರ್ಥಿಯಾಗಬಲ್ಲರು ಎನ್ನುವ ಸಲಹೆಯನ್ನು ನೀಡಿದ್ದರು.
ಕಾಂಗ್ರೆಸ್ ಪಕ್ಷದ ಮುಖಂಡನ ಸಲಹೆಯ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ, ನಾವು ಭೋಪಾಲ್ ಕ್ಷೇತ್ರದಲ್ಲಿ ಅತ್ಯಂತ ಬಲಶಾಲಿಯಾಗಿದ್ದೇವೆ. ಯಾರು ನಿಂತರೂ ನಮಗೆ ಚಿಂತೆಯಿಲ್ಲ, ಬಹುಷಃ ಕಾಂಗ್ರೆಸ್ಸಿಗೆ ಅಭ್ಯರ್ಥಿಯ ಕೊರತೆ ಕಾಡುತ್ತಿದೆ ಎಂದು ಹೇಳಿದ್ದಾರೆ.
ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ 1989ರಿಂದ ಬಿಜೆಪಿ ಸತತವಾಗಿ ಗೆಲ್ಲುತ್ತಿದೆ. ಕ್ಷೇತ್ರದ ಹಾಲೀ ಸಂಸದ ಬಿಜೆಪಿಯ ಅಲೋಕ್ ಸಂಜರ್.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications