ನ್ಯಾ.ಲೋಯಾ ಪ್ರಕರಣ: ಅರ್ಥವಾಗದ ನ್ಯಾಯಾಧೀಶರ ವಿಚಿತ್ರ ನಡೆ!
ಮುಂಬೈ, ನವೆಂಬರ್ 30: ಸಿಬಿಐ ನಿಶೇಷ ನ್ಯಾಯಾಧೀಶರಾಗಿದ್ದ ಬಿ ಎಚ್ ಲೋಯಾ ನಿಧನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮೂವರು ನ್ಯಾಯಾಧೀಶರು ಹಿಂದೆ ಸರಿದಿರುವುದು ಅಚ್ಚರಿ ಮೂಡಿಸಿದೆ.
2005 ರಲ್ಲಿ ನಡೆದ ಸೋಹ್ರಾಬುದ್ದಿನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಧೀಶ ಲೋಯಾ ಅವರು 2014 ರಲ್ಲಿ ಹೃದಯಾಘಾತದಿಂದ ಮೃತರಾಗಿದ್ದರು. ಆದರೆ ಅವರ ಸಾವು ಸಹಜವಲ್ಲ, ಅದು ಕೊಲೆ ಎಂದು ಆರೋಪಿಸಿ ಸಾಕಷ್ಟು ಅರ್ಜಿಗಳು ನ್ಯಾಯಾಲಯದೆದುರು ದಾಖಲಾಗಿದ್ದವು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠದ ಮುಂದೆ ನಾಗ್ಪುರ ಮೂಲದ ಲಾಯರ್ ಸತೀಶ್ ಉಕೆ ಎಂಬುವವರು ದೂರು ದಾಖಲಿಸಿದ್ದರು.

ವಿಚಾರಣೆಯಿಂದ ಹಿಂದೆ ಸರಿದ ಶುಕ್ರೆ, ಮೋದಕ್
ಈ ಅರ್ಜಿಯ ವಿಚಾರಣೆ ನಡೆಸಲು ನೇಮಿಸಿದ್ದ ನ್ಯಾ. ಎಸ್ ಬಿ ಶುಕ್ರೆ ಮತ್ತು ಎಸ್ ಎಂ ಮೋದಕ್ ಅವರಿದ್ದ ಪೀಠ ವಿಚಾರಣೆ ನಡೆಸಲೊಲ್ಲೆ ಎಂದು ಸೋಮವಾರ ಹಿಂದೆ ಸರಿದಿದೆ. ನಂತರ ಬುಧವಾರ ನಡೆಯಬೇಕಿದ್ದ ಅರ್ಜಿಯ ವಿಚಾರಣೆಗಾಗಿ ನೇಮಕವಾಗಿದ್ದ ಪಿ ಎನ್ ದೇಶಮುಖ್ ಮತ್ತು ಸ್ವಪನ್ ಜೋಷಿ ಅವರಿದ್ದ ಪೀಠದಲ್ಲಿ, ಜೋಷಿ ಅವರು ಸಹ ವಿಚಾರಣೆಗೆ ನಿರಾಕರಿಸಿ ಹೊರಬಂದರು. ನ್ಯಾ.ಲೋಯಾ ಅವರನ್ನು ವಿಷಕಾರಿ ವಿಕಿರಣಗಳನ್ನು ಹಾಯಿಸಿ ಕೊಲ್ಲಲಾಗಿದೆ. ಅದು ಸಹಜ ಸಾವಲ್ಲ ಎಂದು ಸತೀಶ್ ಉಕೆ ಆರೋಪಿಸಿದ್ದಾರೆ.

ಶುಕ್ರೆ ನಿರ್ಧಾರಕ್ಕೆ ಕಾರಣವೇನು?
ಕಳೆದ ವರ್ಷ ಮಾಧ್ಯಮಗಳೊಂದಿಗೆ ಮಾತನಾಡುವಾಗ ನ್ಯಾ.ಶುಕ್ರೆ ಅವರೇ, 'ಲೋಯಾ ಸಾವಿನಲ್ಲಿ ಯಾವುದೇ ಅನುಮಾನಾಸ್ಪದ ಸಂಗತಿಗಳಿಲ್ಲ. ವೈದ್ಯರು ಅವರನ್ನು ರಕ್ಷಿಸಲು ಏನೆಲ್ಲ ಪ್ರಯತ್ನ ಮಾಡಿದ್ದರು. ಆದರೆ ಅವರು ಹೃದಯಾಘಾತದಿಂದ ಮರಣವನ್ನಪ್ಪಿದರು' ಎಂಬ ಹೇಳಿಕೆ ನೀಡಿದ್ದರು. ಹೀಗೆ ಹೇಳಿಕೆ ನೀಡಿ, ಇದೀಗ ಪ್ರಕರಣದ ವಿಚಾರಣೆಯನ್ನು ಅವರೇ ನಡೆಸುವುದು ಸರಿಯಲ್ಲ ಎಂಬ ಕಾರಣಕ್ಕೆ ಅವರು ಪ್ರಕರಣದಿಂದ ಹಿಂದೆ ಸರಿದಿದ್ದಿರಬಹುದು ಎಂದು ಗ್ರಹಿಸಲಾಗಿದೆ.

ಮೋದಕ್ ಹಿಂದೆ ಸರಿದಿದ್ದು ಏಕೆ?
ಅಂತೆಯೇ ನ್ಯಾ.ಲೋಯಾ ಅವರು ನಿಧನರಾಗುವ ದಿನ ರಾಜಭವನದ ಗೆಸ್ಟ್ ಹೌಸ್ ನಲ್ಲಿ ಲೋಯಾ ಅವರೊಂದಿಗೆ ನ್ಯಾ.ಮೋದಕ್ ಅವರೂ ಇದ್ದಿದ್ದರಿಂದ ಅವರು ಸಹ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎನ್ನಲಾಗಿದೆ. ಆದರೆ ನ್ಯಾ.ಜೋಷಿ ಅವರ ನಿರ್ಧಾರಕ್ಕೆ ಕಾರಣವೇನು ಎಂಬುದು ಮಾತ್ರ ತಿಳಿದುಬಂದಿಲ್ಲ.

ಘಟನೆಯ ಹಿನ್ನೆಲೆ
ಸೊಹ್ರಾಬುದ್ದಿನ್ ಗುಜರಾತಿನಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎಂದು ಆರೋಪಿಸಿ 2005 ರಲ್ಲಿ ಆತನನ್ನು ಎನ್ ಕೌಂಟರ್ ಮಾಡಿ ಕೊಲ್ಲಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ನೇಮಕಗೊಂಡ ಸಿಬಿಐ ವಿಶೇಷ ನ್ಯಾಯಾಧೀಶರಾದ ಬಿ ಎಚ್ ಲೋಯಾ ಅವರು 2014 ರ ಡಿಸೆಂಬರ್ 1 ರಂದು ಹೃದಯಾಘಾತದಿಂದ ಮರಣಹೊಂದಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications