ನಾಗ್ಪುರ್: ಹಲ್ದೀರಾಮ್ಸ್ ವಡಾ ಸಾಂಬಾರಿನಲ್ಲಿ ಸತ್ತ ಹಲ್ಲಿ ಪತ್ತೆ
ನಾಗ್ಪುರ, ಮೇ 16: ಇಲ್ಲಿನ ಹಲ್ದಿರಾಮ್ಸ್ ಆಹಾರ ಮಳಿಗೆಯಲ್ಲಿ ಗ್ರಾಹಕರೊಬ್ಬರಿಗೆ ವಡಾ ಸಾಂಬಾರಿನಲ್ಲಿ ಸತ್ತ ಹಲ್ಲಿ ಸಿಕ್ಕಿದೆ. ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್ ಡಿಎ) ಅಧಿಕಾರಿಯೊಬ್ಬರು ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಅಜಾನಿ ವೃತ್ತದ ಬಳಿ ಇರುವ ಆಹಾರ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ವಡಾ-ಸಾಂಬಾರ್ ನಲ್ಲಿ ಸಿಕ್ಕ ಹಲ್ಲಿ ಫೋಟೋವನ್ನು ವಾಟ್ಸಾಪ್ ನಲ್ಲಿ ಹಂಚಿಕೊಳ್ಳಲಾಗಿದೆ.
ರೆಸ್ಟೋರೆಂಟ್ ಗೆ ಬಂದ ಯುವಕ, ಯುವತಿ, ವಡಾ-ಸಾಂಬಾರ್ ಆರ್ಡರ್ ಮಾಡಿದ್ದಾರೆ. ವಡಾ-ಸಾಂಬಾರ್ ತಿನ್ನುವ ವೇಳೆ ಯುವಕನಿಗೆ ಹಲ್ಲಿ ಇರುವುದು ಕಂಡು ಬಂದಿದೆ. ತಕ್ಷಣವೇ ಈ ಬಗ್ಗೆ ಸಿಬ್ಬಂದಿಗೆ ತಿಳಿಸಿದ್ದಾನೆ. ನಂತರ ವಡಾ-ಸಾಂಬಾರ್ ಎಸೆಯಲಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಆರೋಗ್ಯಕ್ಕೆ ಯಾವುದೇ ಹಾನಿಯಾಗಿಲ್ಲ. ಈ ಮಳಿಗೆಯನ್ನು ಬಂದ್ ಮಾಡಲಾಗಿದೆ ಎಂದು ಎಫ್ ಡಿಎ ನಾಗ್ಪುರ್ ದ ಅಧಿಕಾರಿ ಮಿಲಿಂದ್ ದೇಶಪಾಂಡೆ ಅವರು ಪಿಟಿಐಗೆ ತಿಳಿಸಿದ್ದಾರೆ

ಈ ಘಟನೆ ಬಗ್ಗೆ ಸಂತ್ರಸ್ತರು ಯಾವುದೇ ದೂರನ್ನು ನೀಡದಿದ್ದರೂ, ಖುದ್ದು ಎಫ್ ಡಿಎ ಅಧಿಕಾರಿಗಳು ಹಲ್ದೀರಮ್ ಮಳಿಗೆ ಮೇಲೆ ದಾಳಿ ನಡೆಸಿ, ಪರಿಶೀಲಿಸಿದ್ದಾರೆ. ಅಡುಗೆ ಮನೆ ಕಿಟಕಿಗೆ ಜಾಲರಿ ಹಾಕಿರಲಿಲ್ಲ. ಯಾವುದೇ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ತಿಳಿದು ಬಂದಿದೆ. ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಯ್ದೆ 2011 ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.(ಪಿಟಿಐ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications