ಅಮರ ಗೀತೆ ಹಾಡಿದ ಲತಾಜೀಗೆ ಮೋದಿ ಸನ್ಮಾನ
ಮುಂಬೈ, ಜ.27: ಶ್ರೇಷ್ಠ ಭಾರತ ದಿವಸ ಆಚರಣೆ ಸಂದರ್ಭದಲ್ಲಿ ದೇಶದ ಅಮರ ಗೀತೆ ಹಾಡಿ ದೇಶಪ್ರೇಮವನ್ನು ಜಾಗೃತಿಗೊಳಿಸಿದ ಗಾನ ಕೋಗಿಲೆ ಲತಾ ಮಂಗೇಷ್ಕರ್ ಅವರಿಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಸನ್ಮಾನಿಸುತ್ತಿದ್ದಾರೆ.
ಜ.27 ಶ್ರೇಷ್ಠವಾದ ದಿನ 51 ವರ್ಷಗಳ ಹಿಂದೆ ಲತಾ ಮಂಗೇಷ್ಕರ್ ಅವರು 'ಏ ಮೇರೆ ವತನ್ ಕೆ ಲೋಗೋ' ಗೀತೆ ಹಾಡಿ ದೇಶದ ಜನತೆಯ ಕಣ್ಣಂಚು ಒದ್ದೆ ಮಾಡಿದ್ದರು. ಭಾರತ ಹಾಗೂ ಚೀನಾ ಯುದ್ದದಲ್ಲಿ ಹುತಾತ್ಮರಾದ ಸಾವಿರಾರು ಯೋಧರಿಗೆ ಈ ಮೂಲಕ ಅಶ್ರುತರ್ಪಣ ನೀಡಲಾಗಿತ್ತು.
ಸಿಟಿಜನ್ಸ್ ಫಾರ್ ಅಕೌಂಬಲ್ ಗವರ್ನಂಸ್(CAG).ಲೋಧಾ ಫೌಂಡೇಷನ್ ಹಾಗೂ ಶಹೀದ್ ಗೌರವ್ ಸಮಿತಿ ಆಯೋಜಿಸಿರುವ ಶ್ರೇಷ್ಠ ಭಾರತ್ ದಿವಸ ಕಾರ್ಯಕ್ರಮದಲ್ಲಿ ಲತಾ ಮಂಗೇಷ್ಕರ್ ಸೇರಿದಂತೆ ಹುತಾತ್ಮ ಯೋಧರ ಕುಟುಂಬದವರನ್ನು ಸನ್ಮಾನಿಸಲಾಗುತ್ತದೆ.
ಕವಿ ಪ್ರದೀಪ್ ಬರೆದಿರುವ 'ಏ ಮೇರೆ ವತನ್ ಕೆ ಲೋಗೋ' ಹಾಡನ್ನು ಭಾರತರತ್ನ ಲತಾ ಮಂಗೇಷ್ಕರ್ ಅವರ ದನಿಯಲ್ಲಿ ಕೇಳುವುದೇ ಸೌಭಾಗ್ಯ. 1963ರಲ್ಲಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರ ಮೆಚ್ಚುಗೆ ಪಡೆದ ಈ ಗೀತೆ ಸಿನಿಮಾ ಗೀತೆಯಾಗಿ ಉಳಿದಿಲ್ಲ. ದೇಶಪ್ರೇಮ ಸಾರುವ, ವೀರ ಯೋಧರನ್ನು ಸ್ಮರಿಸುವ ಅಮರ ಗೀತೆಯಾಗಿದೆ.

ಇಡೀ ಜಗತ್ತನ್ನೇ ತಮ್ಮ ಸುಶ್ರಾವ್ಯ ಕಂಠದಿಂದ ಮಂತ್ರಮುಗ್ಧಗೊಳಿಸಿರುವ ಲತಾ ಮಂಗೇಷ್ಕರ್ ಅವರಿಗೆ 2001ರಲ್ಲಿ 'ಭಾರತ ರತ್ನ' ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಅಂದಹಾಗೆ, ಲತಾಜೀಗೆ ಆ ಪ್ರಶಸ್ತಿ ಸಂದಾಗ ಕೇಂದ್ರದಲ್ಲಿದ್ದುದ್ದು ಬಿಜೆಪಿ ಸರ್ಕಾರ. 'ಏ ಮೇರೆ ವತನ್ ಕೆ ಲೋಗೋ' ಎಂದು ಹಾಡಿ ದೇಶದ ಪ್ರಥಮ ಪ್ರಧಾನಿಯ ಕಣ್ಣಲ್ಲಿ ನೀರು ತರಿಸಿದ್ದ ಲತಾ ಮಂಗೇಷ್ಕರ್ ಅವರು ಇತ್ತೀಚೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಲತಾ ಮಂಗೇಷ್ಕರ್ ಹೇಳಿಕೆ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮುಂಬೈನ ಕಾಂಗ್ರೆಸ್ ನಾಯಕ ಜನಾರ್ದನ ಚಂದೂರ್ಕರ್ ಅವರಂತೂ 'ಮೋದಿ ಪ್ರಧಾನಿಯಾಗಲಿ ಎಂದು ಹೇಳಿರುವ ಲತಾ ಅವರಿಗೆ ನೀಡಿರುವ ಭಾರತ ರತ್ನ ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.[ಭಾರತರತ್ನ ಪ್ರಶಸ್ತಿ ನಿಮ್ಮ ತಾತನ ಆಸ್ತಿಯಲ್ಲ]
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications