ನಾಸಿಕ್: ಮಸೀದಿ ಬಳಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿದ ಪೊಲೀಸರು
ನಾಸಿಕ್, ಏಪ್ರಿಲ್ 18 : ಮಹಾರಾಷ್ಟ್ರದಲ್ಲೂ ಅಜಾನ್, ಹನುಮಾನ್ ಚಾಲೀಸಾ ವಿವಾದದ ಕಿಡಿ ಮುಂದುವರೆದಿದೆ. ಸದ್ಯ ಈ ಕಿಡಿಯನ್ನು ಆರಿಸಲು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಅಜಾನ್ ಕೂಗುವ 15 ನಿಮಿಷದ ಮೊದಲು ಹಾಗೂ ನಂತರ ಮಸೀದಿಯ 100 ಮೀಟರ್ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಸಿ ಹನುಮಾನ್ ಚಾಲಿಸಾ ಅಥವಾ ಭಜನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಜೊತೆಗೆ ಧಾರ್ಮಿಕ ಸ್ಥಳಗಳಲ್ಲಿ ನಿಯಮಬಾಹಿರವಾಗಿ ಧ್ವನಿವರ್ಧಕ ಬಳಸುವಂತಿಲ್ಲ. ಅಲ್ಲದೆ ಮೇ 3ರ ಒಳಗೆ ಎಲ್ಲಾ ಧಾರ್ಮಿಕ ಸ್ಥಳದಲ್ಲೂ ಧ್ವನಿವರ್ಧಕ ಬಳಸಲು ಪರವಾನಿಗೆ ಪತ್ರ ಪಡೆಯಬೇಕೆಂದು ಸೂಚಿಸಿದೆ.
"ಮೇ 3ರ ಒಳಗೆ ಎಲ್ಲಾ ಧಾರ್ಮಿಕ ಸ್ಥಳದವರೂ ಧ್ವನಿವರ್ಧಕ ಬಳಸುವುದಕ್ಕೆ ಅನುಮತಿ ಪಡೆಯುವಂತೆ ಸೂಚಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವುದು ಕಂಡು ಬಂದರೆ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ ಹನುಮಾನ್ ಚಾಲೀಸಾ, ಭಜನೆ ಮಾಡಲು ಅನುಮತಿ ಪಡೆದುಕೊಂಡರೆ, ಮಸೀದಿಯಿಂದ 100 ಮೀಟರ್ ದೂರದಲ್ಲಿ ಮಾಡಬೇಕು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ," ಅಂತ ನಾಸಿಕ್ ಪೊಲೀಸ್ ಕಮಿಷನರ್ ದೀಪಕ್ ಪಾಂಡೆ ತಿಳಿಸಿದ್ದಾರೆ.
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಪುಣೆಯಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ, "ಹಿಂದೂ ಅಣ್ಣ ತಮ್ಮಂದಿರೇ ಸಿದ್ದರಾಗಿರಿ, ಮಸಿದೀಗಳಲ್ಲಿರುವ ಧ್ವನಿವರ್ಧಕಗಳನ್ನ ಮೇ 3 ರ ಒಳಗೆ ತೆರವು ಮಾಡದಿದ್ದರೆ, ನಾವು ಮೇ 3 ಮತ್ತು ನಂತರದ ದಿನಗಳಲ್ಲಿ ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಬಳಸಿ ಐದು ಬಾರಿ ಹನುಮಾನ್ ಚಾಲೀಸಾ, ಭಜನೆ ಮಾಡೋಣ. ಎಲ್ಲರೂ ಇದಕ್ಕೆ ಸಿದ್ದರಾಗಿರಿ," ಎಂದಿದ್ದರು. ಇನ್ನು ಏಪ್ರಿಲ್ 2 ರಂದೇ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮಸೀದಿಗಳ ಮುಂದೆ ಇರುವ ಧ್ವನಿವರ್ಧಕಗಳನ್ನ ತೆರವು ಮಾಡುವಂತೆ ಮನವಿ ಮಾಡಿಕೊಂಡಿದ್ದರು.

ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಕೂಡ ಈ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ್ದು, "ಧ್ವನಿವರ್ಧಕ ಬಳಕೆಯ ಬಗ್ಗೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಂಬೈ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಜೊತೆಗೆ ಕೋರ್ಟ್ ಆದೇಶದ ಪ್ರಕಾರ ಕಡಿಮೆ ಡೆಸಿಬಲ್ ಇರುವ ಧ್ವನಿವರ್ಧಕಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಒಂದು ಡೆಸಿಬಲ್ ಜಾಸ್ತಿ ಇದ್ದರೆ ಅಂತಹ ಧ್ವನಿವರ್ಧಕಗಳನ್ನ ತೆರವು ಮಾಡಲಾಗುತ್ತದೆ ಹಾಗೂ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ,"ಅಂತ ತಿಳಿಸಿದ್ದಾರೆ.

ನಾಸಿಕ್ ನಗರದಲ್ಲಿರುವ ಮಸೀದಿ, ದೇವಸ್ಥಾನ, ಗುರುದ್ವಾರ, ಚರ್ಚ್ ಮತ್ತು ಇತರ ಧಾರ್ಮಿಕ ಸಂಸ್ಥೆಗಳು ಲಿಖಿತ ಅನುಮೋದನೆಯನ್ನು ಪಡೆದ ನಂತರವೇ ಧ್ವನಿವರ್ಧಕಗಳ ಬಳಕೆ ಮಾಡಬಹುದಾಗಿದೆ. ಇದಕ್ಕಾಗಿ ಮುಂಚಿತವಾಗಿಯೇ ಅನುಮೋದನೆ ಪಡೆಯಲು ನಗರ ಪೊಲೀಸ್ ಆಯುಕ್ತರಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ. ಅಲ್ಲದೆ ಈ ಆದೇಶ ಈಗಿನಿಂದಲೇ ಜಾರಿಗೆ ಬರಲಿದ್ದು, ಮೇರ 3 ಒಳಗೆ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೂ ಅಜಾನ್, ಹನುಮಾನ್ ಚಾಲಿಸ್ ನಡೆಸಲು ಅನುಮತಿ ನೀಡಲಾಗಿದೆ. ಬಳಿಕ ಎಲ್ಲಾ ಅಕ್ರಮ ಧ್ವನಿವರ್ಧಕಗಳನನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಆದೇಶವನ್ನು ಅನುಸರಿಸದಿದ್ದರೆ ಅಂತಹವರಿಗೆ ನಾಲ್ಕು ತಿಂಗಳಿನಿಂದ 1 ವರ್ಷದವರೆಗೂ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ ದಂಡ ಕೂಡ ಹಾಕಲಾಗುತ್ತದೆ ಅಂತ ನಾಸಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಕೋಮು ಗಲಭೆಗೆ ಕಾರಣವಾಗಿದ್ದ ಅಜಾನ್ ವಿವಾದ ಈಗ ಬೇರೆ ರಾಜ್ಯಗಳಲ್ಲೂ ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ಹಿಂದೂ ಮುಸ್ಲಿಂರ ನಡುವಿನ ಕೋಮು ಸಾಮರಸ್ಯವನ್ನ ಕದಡುತ್ತಿದೆ. ಈ ರೀತಿಯ ಘಟನೆಗಳಿಂದಾಗಿ ಸಮಾಜದ ಸ್ವಾಸ್ಥ್ಯ ಕೂಡ ಹಾಳಾಗುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications