ಮಹಾರಾಷ್ಟ್ರದ ಐಟಿ ಕಂಪನಿ 19 ಉದ್ಯೋಗಿಗಳಿಗೆ ಕೊರೊನಾ ವೈರಸ್
ಮುಂಬೈ, ಏಪ್ರಿಲ್.22: ಕೊರೊನಾ ವೈರಸ್ ಅಟ್ಟಹಾಸಕ್ಕೆ ಮಹಾರಾಷ್ಟ್ರಕ್ಕೆ ಮಹಾರಾಷ್ಟ್ರವೇ ಹೈರಾಣಾಗಿದೆ. ಮುಂಬೈನ 19 ಐಟಿ ಉದ್ಯೋಗಿಗಳಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ನವ ಮುಂಬೈನ ಮಹಾಪೆ ಪ್ರದೇಶದಲ್ಲಿರುವ ಖಾಸಗಿ ಐಟಿ ಕಂಪನಿಯ 19 ಉದ್ಯೋಗಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಎಲ್ಲರನ್ನೂ ಕೊವಿಡ್-19 ಸೋಂಕಿತರಿಗಾಗಿಯೇ ಮೀಸಲು ಇರಿಸಿದ ವಶಿ ಪ್ರದೇಶದ ಎನ್ಎಂಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಹಾಪೆ ಪ್ರದೇಶದಲ್ಲಿ ಇರುವ ಎಂಐಡಿಸಿ ಬ್ಯಾಂಕ್ ಗಳ ಅಂಕಿ-ಅಂಶಗಳ ನಿರ್ವಹಣೆಯ ಹೊಣೆಯನ್ನು ಈ ಐಟಿ ಕಂಪನಿಯು ನಿಭಾಯಿಸುತ್ತಿತ್ತು. ಬ್ಯಾಂಕಿಂಗ್ ವಲಯ ಎಂದಿನಂತೆ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆ ಈ ಐಟಿ ಕಂಪನಿ 40 ಸಿಬ್ಬಂದಿಯನ್ನಷ್ಟೇ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿತ್ತು.

ಖಾಸಗಿ ಲ್ಯಾಬ್ ಗಳಲ್ಲಿ ಉದ್ಯೋಗಿಗಳ ತಪಾಸಣೆ:
ನವಮುಂಬೈನಲ್ಲಿ ಇರುವ ಐಟಿ ಕಂಪನಿಯು ಖಾಸಗಿ ಪ್ರಯೋಗಾಲಯದಲ್ಲಿ ತಮ್ಮ ಕಂಪನಿಯ ಉದ್ಯೋಗಿಗಳಿಗೆ ಕೊರೊನಾ ವೈರಸ್ ತಪಾಸಣೆ ಮಾಡಿಸಿತು. ಈ ವೇಳೆ 19 ಜನರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ 19 ಜನರನ್ನು ಎನ್ಎಂಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 19 ಮಂದಿ ಸೋಂಕಿತರ ಪೈಕಿ 7 ಮಂದಿ ನವಮುಂಬೈ ನಿವಾಸಿಗಳು, 7 ಮಂದಿ ಮುಂಬೈ, 2 ಥಾಣೆ, 1 ಸಾಂಗ್ಲಿ, 1 ತೆಲಂಗಾಣ ಹಾಗೂ ಒಬ್ಬ ಸಿಬ್ಬಂದಿ ಆಂಧ್ರ ಪ್ರದೇಶದವರು ಎಂದು ನವಮುಂಬೈ ಮಹಾನಗರ ಪಾಲಿಕೆ ಕಮಿಷನರ್ ಅಣ್ಣಾಸಾಹೇಬ್ ಮಿಸಲ್ ತಿಳಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿತರು ಕಾಣಿಸಿಕೊಂಡ ಖಾಸಗಿ ಐಟಿ ಕಂಪನಿಯನ್ನು ಬಂದ್ ಮಾಡಿಸಲಾಗಿದ್ದು, ಸ್ಯಾನಿಟೈಸರ್ ಮಾಡಲಾಗಿದೆ. ಇನ್ನು, ಸೋಂಕಿತರು ಯಾರ ಜೊತೆಗೆ ಸಂಪರ್ಕವನ್ನು ಹೊಂದಿದ್ದರು ಎಂದು ಪತ್ತೆ ಮಾಡಲಾಗುತ್ತಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications