ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಸಿಬಿ ಅಧಿಕಾರಿ ವಿರುದ್ಧವೇ ಮುಂಬೈ ಪೊಲೀಸರ ಬೇಹುಗಾರಿಕೆ?

|
Google Oneindia Kannada News

ಮುಂಬೈ, ಅಕ್ಟೋಬರ್ 12: ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸಿಲುಕಿರುವ ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮುಂಬೈ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸಮೀರ್ ವಾಂಖೆಡೆ ಈಗ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರನ ಡ್ರಗ್ಸ್ ಕೇಸ್, ಸುಶಾಂತ್ ಸಿಂಗ್ ರಜಪೂತ್​ಗೆ ಸಂಬಂಧಿಸಿದ ಡ್ರಗ್ಸ್ ಕೇಸ್ ತನಿಖೆ ನಡೆಸುತ್ತಿದ್ದು, 9 ತಿಂಗಳ ಹಿಂದೆ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಸಂಬಂಧಿ ಸಮೀರ್ ಖಾನ್ ಭಾಗಿಯಾದ ಆರೋಪದ ವಿರುದ್ಧ ಡ್ರಗ್ಸ್ ಕೇಸ್ ಅನ್ನೂ ವಿಚಾರಣೆ ನಡೆಸುತ್ತಿದ್ದಾರೆ.

''ಆರ್ಯನ್‌ ಗುರಿಯಾಗಲು, ಖಾನ್ ಎಂಬ ಸರ್ ನೇಮ್ ಕಾರಣ'': ಮುಫ್ತಿ''ಆರ್ಯನ್‌ ಗುರಿಯಾಗಲು, ಖಾನ್ ಎಂಬ ಸರ್ ನೇಮ್ ಕಾರಣ'': ಮುಫ್ತಿ

ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿರುವ ಸಮೀರ್ ವಾಂಖೆಡೆ, 'ಇಬ್ಬರು ಪೊಲೀಸರು ನನ್ನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ನಾನು ಹೋದೆಡೆಯಲ್ಲೆಲ್ಲಾ ನನ್ನನ್ನು ಹಿಂಬಾಲಿಸುತ್ತಿದ್ದಾರೆ ಅರ್ಥಾತ್ ಬೇಹುಗಾರಿಕೆ ನಡೆಸುತ್ತಿದ್ದಾರೆ' ಎಂದು ತಿಳಿಸಿರುವ ಮಾಹಿತಿ ಲಭ್ಯವಾಗಿದೆ.

NCB Officer Sameer Wankhede Probing Cruise Drugs Case Alleges Cops Monitoring Him, Lodges Complaint

ಸಮೀರ್ ವಾಂಖೆಡೆ ಸುಮಾರು ಆರು ವರ್ಷಗಳಿಂದ ಆಗಾಗ ತನ್ನ ತಾಯಿಯ ಸಮಾಧಿಯ ಬಳಿ ತೆರಳುತ್ತಾರೆ. ಇತ್ತೀಚೆಗೆ ಓಶಿವಾರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳು ಸ್ಮಶಾನಕ್ಕೆ ತೆರಳಿ ಅಲ್ಲಿ ತನ್ನ ಚಲನವಲನದ ಸಿಸಿಟಿವಿ ದೃಶ್ಯಗಳನ್ನು ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯೆ ನೀಡಲು ಸಮೀರ್ ವಾಂಖೆಡೆ ನಿರಾಕರಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಈ ವಿಚಾರವಾಗಿ ಚರ್ಚಿಸಿದ್ದಾರೆ. ಮೂಲಗಳ ಪ್ರಕಾರ, ಸಮೀರ್ ವಾಂಖೆಡೆ ತಾವು ಅಧಿಕಾರ ಸ್ವೀಕರಿಸಿದಾಗಿನಿಂದ ಹಲವಾರು ದೊಡ್ಡ ಮಟ್ಟದ ಪ್ರಕರಣಗಳನ್ನು ತನಿಖೆ ಮಾಡಿದ್ದು, ಈ ರೀತಿಯ ಬೇಹುಗಾರಿಕೆಯನ್ನು ಈ ಮೊದಲು ಎದುರಿಸಿರಲಿಲ್ಲ.

2015ರಲ್ಲಿ ತಮ್ಮ ತಾಯಿಯ ನಿಧನ ನಂತರ ದಹನ ಮಾಡಿದ್ದ ಮುಂಬೈಯ ಉಪ ನಗರದ ಒಶಿವರ ಸ್ಮಸಾನಕ್ಕೆ ನಿಯಮಿತವಾಗಿ ವಾಂಖೆಡೆ ಬಂದು ಹೋಗುತ್ತಿರುತ್ತಾರೆ. ಒಶಿವರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳು ಸ್ಮಶಾನ ಬಳಿ ಹೋಗಿ ವಾಂಖೆಡೆಯವರ ಚಲನವಲನಗಳನ್ನು ತಿಳಿಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಮ್ಮ ಮೇಲೆ ಅಕ್ರಮವಾಗಿ ಪೊಲೀಸರು ಕಣ್ಗಾವಲು ಇರಿಸಿದ್ದಾರೆ ಎಂದು ಸಮೀರ್ ವಾಂಖೆಡೆಯವರು ಮಹಾರಾಷ್ಟ್ರದ ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ತಮ್ಮ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ದೂರು ನೀಡಿರುವ ಸಮೀರ್ ವಾಂಖೆಡೆಯವರು ತಮ್ಮ ದೂರಿಗೆ ಪೂರಕವಾಗಿ ಪುಷ್ಠೀಕರಿಸಲು ಒಶಿವರ ಸ್ಮಶಾನದ ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸಿದ್ದಾರೆ.

ಕಳೆದ ಅಕ್ಟೋಬರ್ 2ರಂದು ತಡರಾತ್ರಿ ಮುಂಬೈಯ ಕ್ರೂಸ್ ಹಡಗಿನ ಮೇಲೆ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದು ಮಾತ್ರವಲ್ಲದೆ ಕಳೆದ ವರ್ಷ ಜೂನ್ ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಕೇಳಿಬಂದ ಬಾಲಿವುಡ್ ಡ್ರಗ್ ಕೇಸು ಹಾಗೂ ಇತರ ಹೈಪ್ರೊಫೈಲ್ ಡ್ರಗ್ ಕೇಸುಗಳ ವಿಚಾರಣೆಗಳನ್ನು ಸಹ ನಡೆಸಿದ್ದರು.ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ (ಅಕ್ಟೋಬರ್ 13) ದಂದು ನಡೆಸುವುದಾಗಿ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಹೇಳಿದೆ.

ವಿ.ವಿ. ಪಾಟೀಲ್, ಎನ್ ಡಿ ಪಿ ಎಸ್ ಕಾಯ್ದೆಗೆ ಸಂಬಂಸಿದ ಅರ್ಜಿಗೆ ಅಕ್ಟೋಬರ್ 13 ರಂದು ಉತ್ತರ ನೀಡುವಂತೆ ಎನ್ ಸಿಬಿ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇತ ಮಾದಕ ವಸ್ತು ಸೇವನೆ ಆರೋಪದಡಿ ಆರ್ಯನ್ ಖಾನ್ ಅವರನ್ನು ಅಕ್ಟೋಬರ್ 3 ರಂದು ಬಂಸಲಾಯಿತು. ಆರ್ಯನ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈ ಜೈಲಿನಲ್ಲಿ ಇದ್ದಾರೆ.

ಕಳೆದ ವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತನ್ನ ಮನವಿ ಯನ್ನು ತಿರಸ್ಕರಿಸಿದ ನಂತರ ಜಾಮೀನಿಗಾಗಿ ಆರ್ಯನ್ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.

English summary
Narcotics Control Bureau Zonal Director Sameer Wankhede, who is supervising probe into the recent cruise drugs bust case, has filed a police complaint in Mumbai alleging two cops were monitoring his movements, an NCB official said on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X