ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಔಷಧಿ ಬೆಲೆ ಕಡಿತ ಅವಶ್ಯಕ- ಬಾಂಬೆ ಹೈಕೋರ್ಟ್
ಮುಂಬೈ, ಮೇ 21: ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳ ಹೆಚ್ಚಳವನ್ನು ಗಮನಿಸಿರುವ ಬಾಂಬೆ ಹೈಕೋರ್ಟ್, ಈ ಸೋಂಕಿನ ಚಿಕಿತ್ಸೆಗೆ ಬಳಸುವ ಔಷಧಿಗಳ ಬೆಲೆಯನ್ನು ಕಡಿಮೆ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯಿಸಿದೆ. ಇದಲ್ಲದೆ, ಸೋಂಕಿನ ಚಿಕಿತ್ಸೆಗೆ ಅಗತ್ಯವಾದ ಔಷಧಿಗಳ ಉತ್ಪಾದನೆ ಮತ್ತು ವಿತರಣೆಯನ್ನು ನಿಯಂತ್ರಿಸಲು ಕೂಡಾ ತಿಳಿಸಿದೆ.
ನ್ಯಾಯಮೂರ್ತಿ ಅನಿಲ್ ಬಿ ಶುಕ್ರೆ ಮತ್ತು ಅವಿನಾಶ್ ಬಿ ಘರೋಟೆ ಅವರನ್ನೊಳಗೊಂಡ ನಾಗ್ಪುರ ವಿಭಾಗದ ನ್ಯಾಯಪೀಠವು, ಔಷಧಿಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ವಿತರಿಸುವ ಬಗ್ಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಎನ್ಪಿಪಿಎ ಹಾಗೂ ಡಿಜಿಸಿಐಗೆ ನಿರ್ದೇಶಿಸಿದೆ.
ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆಯಡಿ ಬ್ಲ್ಯಾಕ್ ಫಂಗಸ್ ರೋಗಿಗಳನ್ನು ಒಳಪಡಿಸಲು ಮಹಾರಾಷ್ಟ್ರ ಸರ್ಕಾರವು ಮೇ 18 ರ ನಿರ್ಣಯದ ನಕಲನ್ನು ಬಾಂಬೆ ಹೈಕೋರ್ಟ್ಗೆ ಸಲ್ಲಿಸಿತ್ತು. ಹಾಗೆಯೇ ಬ್ಲ್ಯಾಕ್ ಫಂಗಸ್ ಸಂಬಂಧಿಸಿದ ಮಾರ್ಗಸೂಚಿಯನ್ನೂ ಸಹ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಪೀಠವು, ಕೆಲವು ಔಷಧಿಗಳು ಹೆಚ್ಚು ದುಷ್ಪರಿಣಾಮ ಬೀರುತ್ತದೆ. ಮೂತ್ರಪಿಂಡದಂತಹ ಅಂಗಗಳ ಮೇಲೆ ಪರಿಣಾಮ ಬೀರುತ್ತವೆ ಎಂಬ ಅಂಶವನ್ನು ಪರಿಗಣಿಸಿ, ಈ ಔಷಧಿಗಳ ಬಳಕೆಗೆ ಸೂಚಿಸುವ ಹಾಗೂ ಬಳಕೆ ಮಾಡುವ ಬಗ್ಗೆ ಬಹಳ ನಿರ್ದಿಷ್ಟವಾದ ಮಾರ್ಗಸೂಚಿಯನ್ನು ಹೊರಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಹಾಗೆಯೇ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಬಳಸಲಾಗುವ ಔಷಧಿಗಳು ಸಾಕಷ್ಟು ದುಬಾರಿಯಾಗಿದೆ. ಹಾಗೆಯೇ ಈ ಔಷಧಿಯ ಪ್ರಮಾಣ ಹಾಗೂ ಡೋಸೇಜ್ ತುಂಬಾ ಹೆಚ್ಚಾಗಿದೆ. ಈ ಸ್ಥಿತಿ ಮುಂದುವರಿದರೆ ಈ ಔಷಧಿಯು ಎಲ್ಲಾ ರೋಗಿಗಳಿಗೂ ದೊರೆಯದು ಎಂದು ನ್ಯಾಯಾಲಯವು ಎಚ್ಚರಿಸಿದೆ.
ಪ್ರಸ್ತುತ ಈ ಸೋಂಕಿನ ಪ್ರಕರಣಗಳು ಅಧಿಕವಾಗುತ್ತಿರುವ ಹಿನ್ನೆಲೆ ಔಷಧಿಯ ಬೆಲೆಯೂ ಕಡಿಮೆ ಮಾಡಬೇಕು. ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಔಷಧಿಗಳು ತಲುಪುವಂತೆ ಮಾಡಲು ಸರ್ಕಾರ ಬೆಲೆ ಕಡಿತಗೊಳಿಸಲು ಗಮನ ಹರಿಸುವುದು ಅವಶ್ಯಕ ಎಂದು ಹೇಳಿದ್ದಾರೆ.
ಹಾಗೆಯೇ ಭವಿಷ್ಯದಲ್ಲಿ ಈ ಔಷಧಿಗಳ ಕೊರತೆ ಉಂಟಾಗದಂತೆ ಕೇಂದ್ರ ಸರ್ಕಾರವು ದೇಶದಾದ್ಯಂತ ಈ ಔಷಧಿಗಗಳ ಉತ್ಪಾದನೆ ಮತ್ತು ವಿತರಣೆಯನ್ನು ನಿಯಂತ್ರಿಸಿವುದು ಸೂಕ್ತ ಎಂದು ಕೂಡಾ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ದೇಶದಲ್ಲಿ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕೂಡಾ ಕಾಣಿಸಿಕೊಳ್ಳುತ್ತಿದ್ದು ಸೋಂಕು ಪ್ರಕರಣಗಳ ಸಂಖ್ಯೆಯು ಅಧಿಕವಾಗುತ್ತಿದೆ.
(ಒನ್ಇಂಡಿಯಾ ಸುದ್ದಿ)
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications