ಔರಂಗಬಾದ್ಗೆ ನೂತನ ಹೆಸರು ಇಟ್ಟ 'ಮಹಾ' ಸರ್ಕಾರ
ಮುಂಬೈ, ಜೂ.29: ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಚಿವ ಸಂಪುಟವು ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು ಮತ್ತು ಒಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಿದೆ.
ಸಂಭಾಜಿ ಮರಾಠ ರಾಜ ಛತ್ರಪತಿ ಶಿವಾಜಿಯ ಹಿರಿಯ ಮಗ. ಸಂಭಾಜಿ ಹೆಸರನ್ನು ಈಗ ಔರಂಗಬಾದ್ಗೆ ನೀಡಲಾಗಿದೆ. 17ನೇ ಶತಮಾನದಲ್ಲಿ ಔರಂಗಾಬಾದ್ಗೆ ಅದರ ಹೆಸರನ್ನು ನೀಡಿದ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಸಂಭಾಜಿ ಕೊಲ್ಲಲ್ಪಟ್ಟನು. ಸಂಭಾಜಿ ಹೆಸರನ್ನು ಮರುನಾಮಕರಣ ಮಾಡುವುದು ಬಹಳ ಹಿಂದಿನಿಂದಲೂ ಶಿವಸೇನೆಯ ಬೇಡಿಕೆಯಾಗಿತ್ತು.
ಹೈದರಾಬಾದಿನ ಕೊನೆಯ ದೊರೆ ಮೀರ್ ಒಸ್ಮಾನ್ ಅಲಿ ಖಾನ್ ಹೆಸರನ್ನು ಹೊಂದಿರುವ ಉಸ್ಮಾನಾಬಾದ್ ನಗರದ ಸಮೀಪವಿರುವ 6ನೇ ಶತಮಾನದ ಗುಹೆಗಳಿಂದ ಧಾರಶಿವ್ ಎಂಬ ಹೊಸ ಹೆಸರನ್ನು ಪಡೆದುಕೊಂಡಿದೆ. ಇದರ ಬದಲಾವಣೆ ಕೂಡ ಶಿವಸೇನೆಯ ಅಜೆಂಡಾದಲ್ಲಿ ಕೆಲಕಾಲ ಇತ್ತು.

ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರ ತಂಡ ಉದ್ದವ್ ಠಾಕ್ರೆಗೆ ಸವಾಲು ಹಾಕುತ್ತಿರುವುದರಿಂದ ಈ ಸಮಯವು ಮಹಾರಾಷ್ಟ್ರದಲ್ಲಿ ನಿರ್ಣಾಯಕವಾಗಿದೆ. ಬಿಜೆಪಿಯೊಂದಿಗೆ ಮೈತ್ರಿಯನ್ನು ಪುನರಾರಂಭಿಸಲು ಶಿವಸೇನಾ ಪಕ್ಷವು ಎನ್ಸಿಪಿ ಮತ್ತು ಕಾಂಗ್ರೆಸ್ನೊಂದಿಗೆ ಮೈತ್ರಿ ಕಡಿದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನವಿ ಮುಂಬೈನ ಹೊಸ ವಿಮಾನ ನಿಲ್ದಾಣಕ್ಕೆ ಡಿ. ಬಿ. ಪಾಟೀಲ್ ಹೆಸರಿಡಲು ಸಚಿವ ಸಂಪುಟ ನಿರ್ಧರಿಸಿದೆ. ಏತನ್ಮಧ್ಯೆ, ಉದ್ದವ್ ಠಾಕ್ರೆ ಅವರ ವಕೀಲರು ಸರ್ಕಾರದ ವಿಶ್ವಾಸ ಮತ ಸಾಬೀತು ಮಾಡುವುದನ್ನು ಮುಂದೂಡಲು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಠಾಕ್ರೆ ಅವರು ತಮ್ಮದೇ ಜನರು ತನಗೆ ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ತನ್ನ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಮೈತ್ರಿಕೂಟದ ಮಂತ್ರಿಗಳಿಗೆ ಧನ್ಯವಾದ ಹೇಳಿದ್ದಾರೆ.

ಏಕನಾಥ್ ಶಿಂಧೆ ಅವರು ಶಿವಸೇನೆಯ 55 ಶಾಸಕರ ಪೈಕಿ 40 ಶಾಸಕರು ಸೇರಿದಂತೆ 50 ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ. ಹತಾಶರಾಗಿರುವ ಉದ್ದವ್ ಠಾಕ್ರೆ ತಂಡ ಬಂಡಾಯ ಶಾಸಕರನ್ನು ದೇಶದ್ರೋಹಿಗಳು ಎಂದು ಕರೆದಿದೆ. ಅವರು ಮುಖ್ಯಮಂತ್ರಿಯ ತಂದೆಯಾದ ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಅವರ ಪರಂಪರೆಯ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications