ಮಹಾರಾಷ್ಟ್ರ ವಿಧಾನಸಭೆಯಲ್ಲಿ ನೂತನ ಶಾಸಕರ ಪ್ರಮಾಣವಚನ

ಮುಂಬೈ, ನವೆಂಬರ್ 27: ಮಹಾರಾಷ್ಟ್ರ ವಿಧಾನಸಭೆಯಲ್ಲಿ ನೂತನ ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ನಾಟಕೀಯ ಬೆಳವಣಿಗೆ ಮಂಗಳವಾರಕ್ಕ ಅಂತ್ಯಗೊಂಡಿದೆ.

ಉದ್ಧವ್ ಠಾಕ್ರೆ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮೊದಲು ವಿಧಾನಸಭೆಯಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ಎನ್​​ಸಿಪಿ ಮುಖ್ಯಸ್ಥ ಶರದ್​​ ಪವಾರ್​​ ಅಣ್ಣನ ಮಗ ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ನೀಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಈಗ ಅಜಿತ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ. ಇಂದು ಎನ್​ಸಿಪಿ ನಾಯಕರು ಅವರಿಗೆ ಭಾರೀ ಸ್ವಾಗತ ಕೋರಿದ್ದಾರೆ.

Newly Elected Maharashtra MLAs Take Oath

ಈ ವೇಳೆ ಎನ್​ಸಿಪಿ ಶಾಸಕರು ನಾಯಕ ಅಜಿತ್​ ಪವಾರ್​ಗೆ ಭರ್ಜರಿ ಸ್ವಾಗತ ಕೋರಿದರು.ಎನ್​ಸಿಪಿ ನಾಯಕಿ ಸುಪ್ರಿಯಾ ಸುಲೆ ಮಾತನಾಡಿ, "ನಾನು ಅಜಿತ್​ ಪವಾರ್​ ಜೊತೆ ವೈಮನಸ್ಸು ಹೊಂದಿಲ್ಲ. ಪಕ್ಷದಲ್ಲಿ ಎಲ್ಲರ ಪಾತ್ರವೂ ಇದೆ. ಪಕ್ಷವನ್ನು ಮುನ್ನಡೆಸುವುದು ಎಲ್ಲರ ಕರ್ತವ್ಯ," ಎಂದು ಹೇಳಿದ್ದಾರೆ.

ಬಹುಮತ ಸಾಬೀತು ಮಾಡುವಂತೆ ಸುಪ್ರೀಂಕೋರ್ಟ್​ ಆದೇಶಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸಾಕಷ್ಟು ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು.

ಕಳೆದ ಮೂರ್ನಾಲ್ಕು ದಿನದಿಂದ ಮಾಧ್ಯಮಗಳ ಕಣ್ಣಿನಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಾದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್​ ಕೂಡ ರಾಜೀನಾಮೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+