700ಕೋಟಿ ರೂ.ಗಳ ವಂಚನೆ : ಹರ್ಷದ್ ಮೆಹ್ತಾ ಸೋದರ ತಪ್ಪಿತಸ್ಥ
ನ್ಯಾಷನಲ್ ಹೌಸಿಂಗ್ ಬ್ಯಾಂಕಿಗೆ 700 ಕೋಟಿ ರು ವಂಚನೆ ಮಾಡಿದ ಆರೋಪದ ಮೇಲೆ ಸುಧೀರ್ ಮೆಹ್ತಾ ಸೇರಿದಂತೆ ಐವರನ್ನು ತಪ್ಪಿತಸ್ಥರೆಂದು ಘೋಷಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳು ಮತ್ತು ಷೇರು ದಲ್ಲಾಳಿಗಳ ಮೇಲಿನ ಆರೋಪ ಸಾಬೀತಾಗಿದೆ.
ಮುಂಬೈ, ನವೆಂಬರ್ 29: ಭಾರತದ ಅತಿದೊಡ್ಡ ಆರ್ಥಿಕ ಹಗರಣಗಳ ಪೈಕಿ ಒಂದೆನಿಸಿರುವ ಷೇರು ಹಗರಣರ ರೂವಾರಿ ಹರ್ಷದ್ ಮೆಹ್ತಾ ಅವರ ಸೋದರ ಸುಧೀರ್ ಅವರು ಬಹುಕೋಟಿ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಇಲ್ಲಿನ ವಿಶೇಷ ನ್ಯಾಯಾಲಯ ಮಂಗಳವಾರ ಘೋಷಿಸಿದೆ.
ನ್ಯಾಷನಲ್ ಹೌಸಿಂಗ್ ಬ್ಯಾಂಕಿಗೆ 700 ಕೋಟಿ ರು ವಂಚನೆ ಮಾಡಿದ ಆರೋಪದ ಮೇಲೆ ಸುಧೀರ್ ಮೆಹ್ತಾ ಸೇರಿದಂತೆ ಐವರನ್ನು ತಪ್ಪಿತಸ್ಥರೆಂದು ಘೋಷಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳು ಮತ್ತು ಷೇರು ದಲ್ಲಾಳಿಗಳ ಮೇಲಿನ ಆರೋಪ ಸಾಬೀತಾಗಿದೆ.[ಭಾರತವನ್ನು ಕಾಡುವ 25 ಭ್ರಷ್ಟಾಚಾರ ಪ್ರಕರಣಗಳು]

1992ರ ಬಹುಕೋಟಿ ರೂಪಾಯಿಗಳ ಷೇರು ಹಗರಣ ಹಾಗೂ 700 ಕೋಟಿ ರೂ.ಗಳ ವಂಚನೆ ಪ್ರಕರಣದ ರೂವಾರಿ ಹರ್ಷದ್ ಮೆಹ್ತಾ ಅವರು 2002ರಲ್ಲಿ ನಿಧನರಾಗಿದ್ದಾರೆ.ಈಗ ಸುಧೀರ್ ಮೆಹ್ತಾ ಸೇರಿದಂತೆ ಆರು ಮಂದಿ ತಪ್ಪಿತಸ್ಥರಾಗಿದ್ದು, ಶಿಕ್ಷೆಯ ಪ್ರಮಾಣದ ತೀರ್ಪನ್ನು ನ್ಯಾಯಾಲಯ ಕಾದಿರಿಸಿದೆ.
ಸುಮಾರು ಎರಡು ದಶಕಗಳ ಕಾಲ ಕಾನೂನು ಸಮರ ನಡೆಸಿ ದೈಹಿಕವಾಗಿ, ಮಾನಸಿಕವಾಗಿ ಹಣ್ಣಾಗಿದ್ದೇವೆ ನಮ್ಮ ಮೇಲೆ ಕೃಪೆ ತೋರಿ ಎಂದು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಜಸ್ಟೀಸ್ ಶಾಲಿನಿ ಫನ್ಸಾಲ್ಕರ್ ಜೋಶಿ ತಿರಸ್ಕರಿಸಿದ್ದಾರೆ.[ಭಾರತವನ್ನು ತಲ್ಲಣಗೊಳಿಸಿದ ಟಾಪ್ 7 ಹಗರಣಗಳು]
ಹರ್ಷದ್ ಮೆಹ್ತಾ ಅವರ ಸೋದರ ಸುಧೀರ್, ಕಸಿನ್ ಸ್ಟಾಕ್ ಬ್ರೋಕರ್ ದೀಪಕ್ ಮೆಹ್ತಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಅಧಿಕಾರಿಗಳಾದ ಸಿ ರವಿ ಕುಮಾರ್, ಸುರೇಶ್ ಬಾಬು, ಎಸ್ ಬಿಐ ಅಧಿಕಾರಿ ಆರ್ ಸೀತಾರಾಮ್ನ್, ಸ್ಟಾಕ್ ಬ್ರೋಕರ್ ಅತುಲ್ ಪರೇಖ್ ಅವರು ದೋಷಿಗಳು ಎಂದು ನ್ಯಾಯಾಲಯ ಹೇಳಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications