ಇಸ್ಲಾಂ ಧಾರ್ಮಿಕ ಭಾಷಣಗಾರ ಜಾಕೀರ್ ಆಸ್ತಿ ವಶಕ್ಕೆ ಆದೇಶ
ಮುಂಬೈ, ಅಕ್ಟೋಬರ್ 12: ಇಸ್ಲಾಂ ಧಾರ್ಮಿಕ ಭಾಷಣಗಾರ ಜಾಕೀರ್ ಖಾನ್ ಅವರಿಗೆ ಸೇರಿರುವ ಮುಂಬೈಯಲ್ಲಿರುವ ಆಸ್ತಿಯನ್ನು ವಶ ಪಡಿಸಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ವಿಶೇಷ ನ್ಯಾಯಲಯವು ಇಂದು ಆದೇಶ ನೀಡಿದೆ.
ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹಾಗೂ ಜಾಕೀರ್ ನಾಯ್ಕ್ ಅವರ ಪೀಸ್ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಕ್ರಮ ಜರುಗಿಸಲು ಗೃಹ ಸಚಿವಾಲಯ ಮುಂದಾಗಿದೆ.
ಈಗಾಗಲೇ ಭಯೋತ್ಪಾದನಾ ವಿರೋಧಿ ಕಾನೂನಿನಡಿ ಜಾಕೀರ್ ಅವರ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್(ಐಆರ್ ಎಫ್) ಎನ್ಜಿಒ 5 ವರ್ಷಗಳ ಕಾಲಕ್ಕೆ ನಿಷೇಧಿಸಿ 2016ರಲ್ಲಿ ಆದೇಶ ಹೊರಡಿಸಲಾಗಿದೆ.

ಧರ್ಮ ಪ್ರಚಾರಕ ಜಾಕಿರ್ ನಾಯಕ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಕ್ರಿಮಿನಲ್ ಕೇಸ್ ಗಳನ್ನು ದಾಖಲಿಸಿದ್ದಾರೆ. ಜಾಕಿರ್ ನಾಯಕ್ ಅವರ ಎರಡು ವಿದ್ಯಾ ಸಂಸ್ಥೆ, ಎನ್ಜಿಒ, ಟಿವಿ ವಾಹಿನಿ ವಿರುದ್ಧವೂ ಪ್ರಕರಣಗಳಿವೆ.
ಸರ್ಕಾರೇತರ ಸಂಸ್ಥೆಯಾದ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್(ಐಆರ್ ಎಫ್) ನಿಂದ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(ಎಫ್ ಸಿಆರ್ ಎ) 2010ರ ಉಲ್ಲಂಘನೆಯಾಗಿದೆ. ಕಾನೂನು ಉಲ್ಲಂಘನೆ, ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು, ಮುಂತಾದ ಆರೋಪಗಳಿವೆ.
ಆರ್ಥಿಕ ಅವ್ಯವಹಾರಗಳ ಆರೋಪ ಹೊತ್ತಿರುವ ಇಸ್ಲಾಂ ಧರ್ಮ ಬೋಧಕ ಜಾಕಿರ್ ನಾಯಕ್ ಅವರ ವಿರುದ್ಧ ಮುಂಬೈನ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ಜಾಕಿರ್ ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಆದಾಯ ತೆರಿಗೆ ಇಲಾಖೆಯು ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ನೋಟಿಸ್ ಜಾರಿಗೊಳಿಸಿದರೂ ಇಲ್ಲಿ ತನಕ ಪ್ರತಿಕ್ರಿಯಿಸಿಲ್ಲ.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications