ಇಸ್ಲಾಂ ಧಾರ್ಮಿಕ ಭಾಷಣಗಾರ ಜಾಕೀರ್ ಆಸ್ತಿ ವಶಕ್ಕೆ ಆದೇಶ
ಮುಂಬೈ, ಅಕ್ಟೋಬರ್ 12: ಇಸ್ಲಾಂ ಧಾರ್ಮಿಕ ಭಾಷಣಗಾರ ಜಾಕೀರ್ ಖಾನ್ ಅವರಿಗೆ ಸೇರಿರುವ ಮುಂಬೈಯಲ್ಲಿರುವ ಆಸ್ತಿಯನ್ನು ವಶ ಪಡಿಸಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ವಿಶೇಷ ನ್ಯಾಯಲಯವು ಇಂದು ಆದೇಶ ನೀಡಿದೆ.
ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹಾಗೂ ಜಾಕೀರ್ ನಾಯ್ಕ್ ಅವರ ಪೀಸ್ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಕ್ರಮ ಜರುಗಿಸಲು ಗೃಹ ಸಚಿವಾಲಯ ಮುಂದಾಗಿದೆ.
ಈಗಾಗಲೇ ಭಯೋತ್ಪಾದನಾ ವಿರೋಧಿ ಕಾನೂನಿನಡಿ ಜಾಕೀರ್ ಅವರ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್(ಐಆರ್ ಎಫ್) ಎನ್ಜಿಒ 5 ವರ್ಷಗಳ ಕಾಲಕ್ಕೆ ನಿಷೇಧಿಸಿ 2016ರಲ್ಲಿ ಆದೇಶ ಹೊರಡಿಸಲಾಗಿದೆ.

ಧರ್ಮ ಪ್ರಚಾರಕ ಜಾಕಿರ್ ನಾಯಕ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಕ್ರಿಮಿನಲ್ ಕೇಸ್ ಗಳನ್ನು ದಾಖಲಿಸಿದ್ದಾರೆ. ಜಾಕಿರ್ ನಾಯಕ್ ಅವರ ಎರಡು ವಿದ್ಯಾ ಸಂಸ್ಥೆ, ಎನ್ಜಿಒ, ಟಿವಿ ವಾಹಿನಿ ವಿರುದ್ಧವೂ ಪ್ರಕರಣಗಳಿವೆ.
ಸರ್ಕಾರೇತರ ಸಂಸ್ಥೆಯಾದ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್(ಐಆರ್ ಎಫ್) ನಿಂದ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(ಎಫ್ ಸಿಆರ್ ಎ) 2010ರ ಉಲ್ಲಂಘನೆಯಾಗಿದೆ. ಕಾನೂನು ಉಲ್ಲಂಘನೆ, ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು, ಮುಂತಾದ ಆರೋಪಗಳಿವೆ.
ಆರ್ಥಿಕ ಅವ್ಯವಹಾರಗಳ ಆರೋಪ ಹೊತ್ತಿರುವ ಇಸ್ಲಾಂ ಧರ್ಮ ಬೋಧಕ ಜಾಕಿರ್ ನಾಯಕ್ ಅವರ ವಿರುದ್ಧ ಮುಂಬೈನ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ಜಾಕಿರ್ ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಆದಾಯ ತೆರಿಗೆ ಇಲಾಖೆಯು ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ನೋಟಿಸ್ ಜಾರಿಗೊಳಿಸಿದರೂ ಇಲ್ಲಿ ತನಕ ಪ್ರತಿಕ್ರಿಯಿಸಿಲ್ಲ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications