ಮನ್ಸುಖ್ ಹಿರೇನ್ ಕೊಲೆ ಸಂಚಿನ ಸಭೆಯಲ್ಲಿ ವಾಜೆ ಮತ್ತು ಶಿಂದೆ ಭಾಗಿ: ಎನ್ಐಎ
ಮುಂಬೈ, ಮಾರ್ಚ್ 31: ಅಮಾನತುಗೊಂಡಿರುವ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ವಾಜೆ ಮತ್ತು ವಜಾಗೊಂಡಿರುವ ಕಾನ್ಸ್ಟೆಬಲ್ ವಿನಾಯಕ್ ಶಿಂದೆ ಇಬ್ಬರೂ, ಮನ್ಸುಖ್ ಹಿರೇನ್ ಅವರನ್ನು 'ಮುಗಿಸಿಬಿಡಲು' ಸಂಚು ರೂಪಿಸುವ ಸಲುವಾಗಿ ಸಭೆ ನಡೆಸಿದ್ದರು ಎಂದು ವಿಶೇಷ ನ್ಯಾಯಾಲಯಕ್ಕೆ ಎನ್ಐಎ ತಿಳಿಸಿದೆ.
ಫೆಬ್ರವರಿ 25ರಂದು ಮುಕೇಶ್ ಅಂಬಾನಿ ಅವರ ಮನೆ ಮುಂದೆ ಜಿಲೆಟಿನ್ ಕಡ್ಡಿ ಹಾಗೂ ಬೆದರಿಕೆ ಪತ್ರದೊಂದಿಗೆ ಪತ್ತೆಯಾದ ಸ್ಕಾರ್ಪಿಯೋ ಕಾರನ್ನು ಆಟೊಮೊಬೈಲ್ ಬಿಡಿ ಭಾಗಗಳ ವ್ಯಾಪಾರಿ ಮನ್ಸುಖ್ ಹಿರೇನ್ ಬಳಸುತ್ತಿದ್ದರು. ಈ ಘಟನೆ ಭಾರಿ ಸದ್ದು ಮಾಡಿದ ಬೆನ್ನಲ್ಲೇ ಮಾರ್ಚ್ 5ರಂದು ಮುಂಬೈನ ಕಾಲ್ವಾದ ಕೊಳ್ಳವೊಂದರಲ್ಲಿ ಮನ್ಸುಖ್ ಮೃತದೇಹ ಪತ್ತೆಯಾಗಿತ್ತು. ಅದು ಅತ್ಮಹತ್ಯೆ ಎಂದು ಪೊಲೀಸರು ಹೇಳಿದ್ದರೂ, ಅವರನ್ನು ಕೊಲೆ ಮಾಡಲಾಗಿದೆ ಎಂದು ಎನ್ಐಎ ಹೇಳಿದೆ.
ಆ ಸಭೆಯಲ್ಲಿ ವಾಜೆ ಮತ್ತು ಶಿಂದೆ ಇಬ್ಬರೂ ಭಾಗವಹಿಸಿದ್ದರು ಎಂದು ಸಾಕ್ಷಿದಾರನೊಬ್ಬ ಹೇಳಿಕೆ ನೀಡಿರುವುದಾಗಿ ಎನ್ಐಎ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುನಿಲ್ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಾಕ್ಷಿದಾರನು ವಾಜೆಗೆ ಒಂದು ಫೋನ್ ಹಸ್ತಾಂತರಿಸಿದ್ದ. ಮನ್ಸುಖ್ ಹಿರೇನ್ ಅವರನ್ನು ಮುಗಿಸಿಬಿಡಲು ಸಂಚುಕೋರರನ್ನು ಸಂಪರ್ಕಿಸಲು ಈ ಫೋನ್ ಅನ್ನು ಬಳಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಹಿರೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 20ರಂದು ಶಿಂದೆ ಹಾಗೂ ಕ್ರಿಕೆಟ್ ಬುಕಿ ನರೇಶ್ ಗೌರ್ ಇಬ್ಬರನ್ನೂ ಮಹಾರಾಷ್ಟ್ರ ಎಟಿಎಸ್ ಬಂಧಿಸಿತ್ತು. ಎನ್ಐಎ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಬಳಿಕ ಅವರಿಬ್ಬರನ್ನೂ ಮಾರ್ಚ್ 24ರಂದು ಎನ್ಐಎ ವಶಕ್ಕೆ ಒಪ್ಪಿಸಲಾಗಿತ್ತು. ಅವರನ್ನು ಮತ್ತಷ್ಟು ಸಮಯದವರೆಗೆ ವಿಚಾರಣೆ ನಡೆಸಲು ತಮ್ಮ ವಶಕ್ಕೆ ಒಪ್ಪಿಸುವಂತೆ ನ್ಯಾಯಾಲಯಕ್ಕೆ ಎನ್ಐಎ ಮನವಿ ಮಾಡಿಎ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications