ಮುಕೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣ: ಸಚಿನ್ ವಾಜೆಗೆ ಸೇರಿದ ಮತ್ತೊಂದು ಕಾರು ವಶ
ಮುಂಬೈ, ಮಾರ್ಚ್ 30: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಸೇರಿದ ಮತ್ತೊಂದು ಹೈ ಎಂಡ್ ಕಾರನ್ನು ನವಿ ಮುಂಬೈನ ಕಮೋಥೆಯಿಂದ ವಶಪಡಿಸಿಕೊಂಡಿದೆ.
ಸ್ಫೋಟಕ ಪತ್ತೆ ಪ್ರಕರಣ ಮತ್ತು ಮನ್ಸುಖ್ ಹಿರೇನ್ ಸಾವಿನ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮಾಲೀಕತ್ವದ ಮಿತ್ಸುಬಿಷಿ ಔಟ್ಲ್ಯಾಂಡರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟಕ ಪತ್ತೆಯಾದ ಕೆಲವೇ ದಿನಗಳ ಬಳಿಕ, ಮಾರ್ಚ್ 5ರಂದು ಮುಂಬೈನ ಕೊಳ್ಳವೊಂದರಲ್ಲಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದ ಥಾಣೆ ಮೂಲದ ಆಟೊ ಮೊಬೈಲ್ ಬಿಡಿಭಾಗಗಳ ಮಾರಾಟಗಾರ ಮನ್ಸುಖ್ ಹಿರೇನ್ ಅವರನ್ನು ಅಪಹರಿಸಲು ಈ ಕಾರನ್ನು ಬಳಸಲಾಗಿತ್ತೇ ಎಂಬ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ.

ಕಮೋಥೆಯ ಸೆಕ್ಟರ್ 7ರಲ್ಲಿನ ಶೀತಲಧಾರಾ ಹೌಸಿಂಗ್ ಸೊಸೈಟಿಯ ಸಮೀಪ ಮಿತ್ಸುಬಿಷಿ ಕಾರು ಪತ್ತೆಯಾಗಿದೆ. ಈ ಕಾರನ್ನು ಕೆಲವು ದಿನಗಳ ಒಳಗೆ ಸೊಸೈಟಿಯ ಒಳಭಾಗದಲ್ಲಿ ನಿಲ್ಲಿಸಲಾಗುತ್ತಿತ್ತು. ಆದರೆ ಕಳೆದ ಒಂದೂವರೆ ತಿಂಗಳಿನಿಂದ ಹೊರಭಾಗದಲ್ಲಿ ನಿಲ್ಲಿಸಲಾಗಿದೆ ಎಂದು ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಒಂದು ಆಡಿ ಮತ್ತು ಒಂದು ಸ್ಕೋಡಾ ಕಾರು ಪತ್ತೆಯಾಗಬೇಕಿವೆ.
ಎರಡು ಮರ್ಸಿಡಿಸ್, ಒಂದು ಪ್ರಾಡೊ, ಸ್ಫೋಟಕ ಪತ್ತೆಯಾದ ಸ್ಕಾರ್ಪಿಯೊ ಹಾಗೂ ಒಂದು ಇನ್ನೋವಾ ಕಾರು ಸೇರಿದಂತೆ ಒಟ್ಟು ಐದು ಹೈ-ಎಂಡ್ ಕಾರುಗಳನ್ನು ಎನ್ಐಎ ಇದುವರೆಗೂ ವಶಪಡಿಸಿಕೊಂಡಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications