ನೀರವ್ ಮೋದಿ, ಚೋಕ್ಸಿ ಐಷಾರಾಮಿ ಕಾರು ಹರಾಜು ಹಾಕಿದ 'ಇಡಿ'
ಮುಂಬೈ, ಏಪ್ರಿಲ್ 26: ಪಂಜಾಬ್ ನ್ಯಾಷನಲ್ ಬ್ಯಾಂಕಿನ ಬಹುಕೋಟಿ ಹಗರಣದ ಪ್ರಮುಖ ಆರೋಪಿಗಳಾದ ನೀರವ್ ಮೋದಿ, ಮೆಹುಲ್ ಚೋಕ್ಸಿ ಅವರಿಗೆ ಸೇರಿದ ಆಸ್ತಿ, ವಸ್ತುಗಳನ್ನು ಜಪ್ತಿ ಮಾಡಿಕೊಂಡಿರುವ ಜಾರಿ ನಿರ್ದೇಶನಾಲಯ(ಇಡಿ) ಹರಾಜು ಪ್ರಕ್ರಿಯೆ ಮುಂದುವರೆಸಿದೆ.
ನೀರವ್, ಮೆಹುಲ್ ಅವರಿಗೆ ಸೇರಿದ 12ಕ್ಕೂ ಅಧಿಕ ಐಷಾರಾಮಿ ಕಾರುಗಳನ್ನು ಶುಕ್ರವಾರದಂದು ಹರಾಜು ಹಾಕಿರುವ ಜಾರಿ ನಿರ್ದೇಶನಾಲಯವು 3.29 ಕೋಟಿ ರು ಸಂಗ್ರಹಿಸಿದೆ.
ನೀರವ್, ಮೆಹುಲ್ ಚೋಕ್ಸಿಗೆ ಸೇರಿದ 13 ಕಾರುಗಳನ್ನು ಇ ಹರಾಜಿನ ಮೂಲಕ ಮೆಟಲ್ ಸ್ಕ್ರಾಪ್ ಟ್ರೇಡ್ ಕಾರ್ಪೊರೇಷನ್ (ಎಂಸಿಟಿಸಿ) ಲಿಮಿಟೆಡ್ ಸಂಸ್ಥೆ ಹರಾಜು ಹಾಕಿದೆ. 13 ವಾಹನಗಳ ಪೈಕಿ 11 ನೀರವ್ ಗೀ ಹಾಗೂ 2 ಮೆಹುಲ್ ಚೋಕ್ಸಿಗೆ ಸೇರಿದ್ದಾಗಿದೆ. ಒಟ್ಟಾರೆ, 3,28,94,293 ರು ಸಂಗ್ರಹವಾಗಿದೆ.

ನೀರವ್ ಮೋದಿ ಅವರಿಗೆ ಸೇರಿದ 255 ಕೋಟಿ ರು ಮೌಲ್ಯದ ಆಭರಣಗಳನ್ನು ಇತ್ತೀಚೆಗೆ ಹಾಂಗ್ ಕಾಂಗ್ ನಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಈಗ ಇನ್ನಿತರ ಕಡೆಗಳಲ್ಲಿ ವಶ ಪಡಿಸಿಕೊಳ್ಳಲು ಮುಂತಾದಿರುವ ವಜ್ರಾಭರಣಗಳ ಮೌಲ್ಯ 4,700 ಕೋಟಿ ರು ದಾಟಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪಿಎಂಎಲ್ಎ ಕಾಯ್ದೆ ಉಲ್ಲಂಘನೆ ಎಅಡಿಯಲ್ಲಿ ಥೈಲ್ಯಾಂಡ್ ನಲ್ಲಿ 13 ಕೋಟಿ ರು ಮೌಲ್ಯದ ಆಸ್ತಿ ವಶ ಪಡಿಸಿಕೊಳ್ಳಲಾಗಿತ್ತು. ಗೀತಾಂಜಲಿ ಸಮೂಹ ಸಂಸ್ಥೆಗೆ ಸೇರಿದ ಈ ಆಸ್ತಿಗೆ ನೀರವ್ ಅವರ ಅಂಕಲ್ ಮೆಹುಲ್ ಚೋಕ್ಸಿ ಅವರು ಸಹ ಮಾಲೀಕರಾಗಿದ್ದಾರೆ
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಆರೋಪವನ್ನು ಹೊತ್ತುಕೊಂಡಿರುವ ನೀರವ್ ಮೋದಿ, ಮೆಹುಲ್ ಚೋಕ್ಸಿ ಅವರು ಭಾರತದಿಂದ ಪರಾರಿಯಾಗಿದ್ದು, ವಿವಿಧ ತನಿಖಾ ಸಂಸ್ಥೆಗಳು ಇವರಿಬ್ಬರನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಯತ್ನಿಸುತ್ತಿವೆ.
ಲಂಡನ್ನಲ್ಲಿ ನೀರವ್ ಮೋದಿಯನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ನೀರವ್ ಮೋದಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿಯನ್ನು ನಿರಾಕರಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications