ನೀರವ್ ಮೋದಿಗೆ ಸೇರಿದ 100 ಕೋಟಿ ಬಂಗಲೆ ನೆಲಸಮ!
ಮುಂಬೈ, ಮಾರ್ಚ್ 08: ಪಂಜಾಬ್ ನ್ಯಾಷನಲ್ ಬ್ಯಾಂಕಿನ ಬಹುಕೋಟಿ ಹಗರಣದ ಪ್ರಮುಖ ಆರೋಪಿ, ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಗೆ ಸೇರಿರುವ ಬಂಗಲೆಯೊಂದನ್ನು ಸ್ಫೋಟಕಗಳ ಮೂಲಕ ಇಂದು ನೆಲ ಸಮಗೊಳಿಸಲಾಯಿತು.
ಮಹಾರಾಷ್ಟ್ರದ ರಾಯ್ ಗಢ ಜಿಲ್ಲೆಯ ಆಲಿಬಾಗ್ ನಲ್ಲಿದ್ದ ಈ ಬಂಗಲೆ ಮೌಲ್ಯ 100 ಕೋಟಿ ರುಗೂ ಅಧಿಕ ಎನ್ನಲಾಗಿದೆ. ಬಾಂಬೆ ಹೈಕೋರ್ಟ್ ಆದೇಶದಂತೆ ರಾಯಗಢದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಟ್ಟಡ ನೆಲಸಮ ಕಾರ್ಯಾಚರಣೆ ಯಶಸ್ವಿಯಾಗಿದೆ.

ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಕಡಲ ದಡದಲ್ಲಿ ನೀರವ್ ಮೋದಿಯ ರೂಪನ್ಯ ಎಂಬ ಹೆಸರಿನ ಈ ಬಂಗಲೆ ನಿರ್ಮಾಣದಲ್ಲಿ ಕರಾವಳಿ ನಿಯಂತ್ರಣ ವಲಯ ಹಾಗೂ ಕಾನೂನು ನಿಯಮ ಉಲ್ಲಂಘಿಸಲಾಗಿತ್ತು. ಸುಮಾರು 33, 000 ಚದರಡಿಯಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಲಾಗಿದ್ದ ಐಷಾರಾಮಿ ಬಂಗಲೆಯನ್ನು ಡೈನಾಮೆಟ್ ಬಳಸಿ ಹಂತ ಹಂತವಾಗಿ ಕೆಡವಲಾಯಿತು.
Maharashtra: Authorities continue demolition of PNB scam accused Nirav Modi's bungalow in Alibag, Raigad district. pic.twitter.com/Tyu5Anz1VQ
— ANI (@ANI) March 8, 2019
ಈ ಬಂಗಲೆಯ ಅಡಿಪಾಯ, ಮತ್ತು ಪಿಲ್ಲರ್ ಗಳು ಗಟ್ಟಿಯಾಗಿರುವುದರಿಂದ ಸ್ಫೋಟಕಗಳನ್ನು ಬಳಸಿ ಕೆಡವಬೇಕಿದೆ ಎಂದು ಕೋರ್ಟಿಗೆ ಮಹಾರಾಷ್ಟ್ರ ಸರ್ಕಾರ ಮಾಹಿತಿ ನೀಡಿತ್ತು. ಈ ಬಂಗಲೆಯ ವಿರುದ್ಧ 2009ರಲ್ಲಿ ಸ್ಥಳೀಯ ಸರ್ಕಾರೇತರ ಸಂಸ್ಥೆಯೊಂದು ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪರಿಸರ ವಲಯವನ್ನು ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಗಳನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.
#WATCH Maharashtra: PNB Scam accused Nirav Modi's bungalow in Alibag, Raigad district demolished by authorities. pic.twitter.com/ngrJstNjoa
— ANI (@ANI) March 8, 2019
ಬಂಗಲೆಯನ್ನು ನೆಲಸಮಗೊಳಿಸುವ ಕಾರ್ಯ ಜನವರಿ 25ರಂದು ಆರಂಭವಾಗಿತ್ತು. ಆದರೆ, ಎರಡೇ ದಿನದಲ್ಲಿ ಈ ಕಾರ್ಯ ಸ್ಥಗಿತವಾಗಿತ್ತು. ಬಂಗಲೆ ಒಳಭಾಗದಲ್ಲಿದಲ್ಲಿರುವ ಬೆಲೆಬಾಳುವ ವಸ್ತಗಳನ್ನು ಜಪ್ತಿ ಮಾಡುವ ನಿಟ್ಟಿನಲ್ಲಿ ನೆಲಸಮ ಕಾರ್ಯ ನಿಲ್ಲಿಸಲಾಗಿತ್ತು. ಮೋದಿ ಬಂಗಲೆ ಅಲ್ಲದೆ ಇನ್ನು 58 ಕಟ್ಟಡಗಳ ನೆಲಸಮಕ್ಕೆ ಕೋರ್ಟ್ ಆದೇಶಿಸಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications