ಮಧ್ಯಂತರ ಚುನಾವಣೆ ಇಲ್ಲ: ಸ್ಥಿರ ಸರ್ಕಾರದ ಭರವಸೆ ನೀಡಿದ ಪವಾರ್
ಮುಂಬೈ, ನವೆಂಬರ್ 16: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಇನ್ನೂ ಮುಗಿಯದ ಹೊತ್ತಲ್ಲಿ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರು ನೀಡಿದ ಹೇಳಿಕೆ ಗಮನ ಸೆಳೆದಿದೆ.
"ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಯೇ ಇಲ್ಲ. ಸ್ಥಿರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ" ಎಂದು ಶರದ್ ಪವಾರ್ ಭರವಸೆ ನೀಡಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಚನೆಯಾಗುವ ಸೂಚನೆಯನ್ನು ಅವರು ನೀಡಿದ್ದಾರೆ.

ಈಗಾಗಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಬಿಜೆಪಿ ಸರ್ಕಾರ ರಚನೆಯ ಪ್ರಯತ್ನವನ್ನೇ ಕೈಬಿಟ್ಟಿದೆ. ಆದರೆ ಶಿವಸೇನೆಗೆ ಬೆಂಬಲ ನೀಡುವ ಕುರಿತು ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ದಿನೇ ದಿನೇ ಚರ್ಚೆ ನಡೆಯುತ್ತಲೇ ಇದ್ದು, ಭಾನುವಾರ ಸಹ ಶರದ್ ಪವಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಮೂರು ಪಕ್ಷಗಳ ಮೈತ್ರಿ ಬಹುತೇಕ ಖಚಿತವಾಗಿದ್ದು, 50:50 ಸೂತ್ರ ಮತ್ತು ಸಂಪುಟದಲ್ಲಿ ಸಮಾನ ಸ್ಥಾನದ ಕುರಿತ ಬೇಡಿಕೆ ಇತ್ಯರ್ಥವಾಗಬೇಕಿದೆ.
ಕಳೆದ ಅಕ್ಟೋಬರ್ 21 ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಅಕ್ಟೋಬರ್ 24 ರಂದು ಹೊರಬಿದ್ದಿದ್ದು, ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ನಂಬರ್ 145. ಆದರೆ ಬಿಜೆಪಿ ಏಕಾಂಗಿಯಾಗಿ ಈ ಸ್ಥಾನ ಪಡೆಯಲು ಅಶಕ್ತವಾಗಿದ್ದರಿಂದ ಶಿವಸೇನೆಯ ಬೆಂಬಲ ಬಿಜೆಪಿಗೆ ಅನಿವಾರ್ಯವಾಗಿತ್ತು.
ಆದರೆ ಎನ್ ಸಿ ಪಿ ಮತ್ತು ಕಾಂಗ್ರೆಸ್ ಕ್ರಮವಾಗಿ 54, 44 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಎರಡೂ ಪಕ್ಷಗಳು ಶಿವಸೇನೆಗೆ ಬೆಂಬಲ ನೀಡಿದರೆ ಮೂರು ಪಕ್ಷಗಳ ಮೈತ್ರಿ ಸರ್ಕಾರ ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬರಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications