ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆದರ್ಶ್ ಸೊಸೈಟಿ ಕಟ್ಟಡ ಸದ್ಯಕ್ಕೆ ನೆಲಸಮ ಮಾಡುವಂತಿಲ್ಲ

By ವಿಕಾಸ್ ನಂಜಪ್ಪ
|
Google Oneindia Kannada News

ಮುಂಬೈ, ಜುಲೈ 22: ಮುಂಬೈನ ಕೊಲಾಬಾದಲ್ಲಿರುವ ವಿವಾದಾತ್ಮಕ 31 ಮಹಡಿಗಳ ಆದರ್ಶ ಅಪಾರ್ಟ್​ಮೆಂಟ್ ಕಟ್ಟಡ ಸದ್ಯಕ್ಕೆ ನೆಲಸಮ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ರಕ್ಷಣಾ ಇಲಾಖೆ ವ್ಯಾಪ್ತಿಗೆ ಕಟ್ಟಡದ ಸಂರಕ್ಷಣೆ ಜವಾಬ್ದಾರಿಯನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

ಈ ಕಟ್ಟಡವನ್ನು ನಾಶಪಡಿಸುವಂತೆ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿದ್ದ ವಿವಿಧ ಅರ್ಜಿದಾರರಿಗೆ ನೋಟಿಸ್​ಗಳನ್ನು ಜಾರಿ ಮಾಡಲಾಗಿದೆ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬದವರಿಗೆ ಮೀಸಲಾಗಿದ್ದ ಈ ಕಟ್ಟಡವನ್ನು ದುರುಪಯೋಗ ಪಡಿಸಿಕೊಳ್ಳಲಾಗಿತ್ತು.

No demolition of Adarsh building for now, says SC

'ನಾವು ಕಟ್ಟಡವನ್ನು ಮತ್ತು ಭೂಮಿಯನ್ನು ವಶಕ್ಕೆ ತೆಗೆದುಕೊಳ್ಳುತ್ತೇವೆ. ಯಾವುದನ್ನೂ ಕೆಡವಿ ಹಾಕುವುದಿಲ್ಲ' ಎಂದು ಕೇಂದ್ರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್ ಮತ್ತು ಎ.ಎಂ. ಸಪ್ರೆ ಅವರನ್ನು ಒಳಗೊಂಡ ಪೀಠಕ್ಕೆ ತಿಳಿಸಿದರು. ಈಗ ಸದ್ಯಕ್ಕೆ ಕಟ್ಟಡ ನೆಲಸಮ ಪ್ರಕ್ರಿಯೆಗೆ 12 ವಾರಗಳ ತಡೆಯಾ‌ಜ್ಞೆ ಸಿಕ್ಕಿದೆ.
English summary
The Supreme Court on Friday ruled that the Adarsh Society building will not be demolished for now. It also directed the Defence Ministry to fully secure the building until the appeals are fully decided.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X