"ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎಂಬುದಿಲ್ಲ, ಸೈರಾ ಕೋಟಿಗಟ್ಟಲೇ ಬಾಚುತ್ತಿದೆ"
ಮುಂಬೈ, ಅಕ್ಟೋಬರ್ 13: "ರಜಾದಿನಗಳಲ್ಲಿ ಮೂರು ಸಿನಿಮಾಗಳು ಚೆನ್ನಾಗಿ ಗಳಿಕೆ ಮಾಡಿವೆ. ಸೈರಾ ಕೋಟಿಗಟ್ಟಲೇ ಬಾಚುತ್ತಿದೆ. 3 ಸಿನಿಮಾದಿಂದ ಸುಮಾರು 120 ಕೋಟಿ ರೂ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿದೆ, ಹೀಗಾಗಿ ದೇಶದ ಆರ್ಥಿಕತೆ ಉತ್ತಮವಾಗಿದೆ" ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿಶ್ಲೇಷಿಸಿದ್ದು ತಿಳಿದಿರಬಹುದು.
"ದೇಶದ ಆರ್ಥಿಕತೆ ಸದೃಢವಾಗಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ. ಒಂದು ವರ್ಷದಲ್ಲಿ ದೇಶದಲ್ಲಿ 16.3 ಬಿಲಿಯನ್ ಡಾಲರ್ ನಷ್ಟು ಹೂಡಿಕೆಯಾಗಿದೆ. ಅಕ್ಟೋಬರ್ 2ರಂದು ಬಿಡುಗಡೆಯಾಗಿರುವ ಮೂರು ಚಿತ್ರಗಳು ಒಂದೇ ದಿನ 120 ಕೋಟಿ ರೂ. ಗಳಿಸಿದೆ. ಹೀಗಿರುವಾಗ ಆರ್ಥಿಕ ಹಿಂಜರಿತ ಎಲ್ಲಿದೆ?" ಎಂದು ಪ್ರಶ್ನಿಸಿದ್ದಾರೆ.
ಇದರ ಜೊತೆಗೆ ಎನ್ಎಸ್ಎಸ್ಒ ವರದಿಯಂತೆ ದೇಶದಲ್ಲಿ ನಿರುದ್ಯೋಗ ಸಮಸ್ಯೆಯಿಲ್ಲ,ಹಣದುಬ್ಬರ ಪ್ರಮಾಣ ಕಡಿಮೆಯಾಗಿದ್ದು, ಆದಾಯ ತೆರಿಗೆ ಸಂಗ್ರಹದಲ್ಲಿ ಹೆಚ್ಚಳವಾಗಿದೆ ಎಂದಿದ್ದಾರೆ. ತಪ್ಪು ಮಾಹಿತಿ ನೀಡುವ ಮೂಲಕ ಸರ್ಕಾರದ ವಿರುದ್ಧ ಜನ ತಿರುಗಿಬೀಳುವಂತೆ ಮಾಡುವುದು ಕೆಲವರ ದುರುದ್ದೇಶವಾಗಿದೆ ಎಂದಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಮುಂಬೈಗೆ ಆಗಮಿಸಿರುವ ರವಿಶಂಕರ್ ಪ್ರಸಾದ್ ಅವರು National Sample Survey Office(NSSO) ನೀಡಿರುವ ಕಾರ್ಮಿಕ ಸಮೀಕ್ಷೆ(ಪಿಎಲ್ ಎಫ್ ಎಸ್) ಮಾಹಿತಿ ತಪ್ಪು ಎಂದಿದ್ದಾರೆ. ಈ ವರದಿಯಂತೆ ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೆ ಅಧಿಕ ಎನ್ನಲಾಗಿತ್ತು.
"ಇದು ಕರಡು ಪ್ರತಿ ಮಾತ್ರ, ಪೂರ್ಣ ವರದಿ ಬಂದಿಲ್ಲ' ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಕೂಡಾ ಹೇಳಿದ್ದಾರೆ.
"ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರ, ಮಾಹಿತಿ ಮತ್ತು ತಂತ್ರಜ್ಞಾನ, ಮುದ್ರಾ ಯೋಜನೆ, ವಾಣಿಜ್ಯ ಸೇವಾ ವಿಭಾಗದಲ್ಲಿ ಉತ್ತಮ ಅಭಿವೃದ್ಧಿ ಕಾಣಲಾಗುತ್ತಿದೆ. ಸರ್ಕಾರದಿಂದ ಎಲ್ಲರಿಗೂ ಉದ್ಯೋಗ ನೀಡುವ ಭರವಸೆಯನ್ನು ನಾವಂತೂ ನೀಡಿಲ್ಲ" ಎಂದು ರವಿಶಂಕರ್ ಪ್ರಸಾದ್ ಹೇಳಿದರು.
Entire video of my media interaction is available on my social media. Yet I regret to note that one part of my statement has been completely twisted out of context.
— Ravi Shankar Prasad (@rsprasad) October 13, 2019
Being a sensitive person I withdraw this comment. ...(4/4) pic.twitter.com/VfesKb84T8
ಸಿನಿಮಾ ಗಳಿಕೆ ಬಗ್ಗೆ ಮಾಧ್ಯಮ ಸಂವಾದದ ವೇಳೆ ನೀಡಿದ್ದ ಹೇಳಿಕೆಗೆ ಭಾನುವಾರದಂದು ಸಚಿವ ರವಿಶಂಕರ್ ಪ್ರಸಾದ್ ಅವರು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications