ಚುನಾವಣೆಗೆ ಸ್ಪರ್ಧಿಸಲ್ಲ, ಯಾರ ಪರ ಪ್ರಚಾರವೂ ಇಲ್ಲ: ಸಲ್ಮಾನ್
ಮುಂಬೈ, ಮಾರ್ಚ್ 21: ಬಾಲಿವುಡ್ ನ ಜನಪ್ರಿಯ ತಾರೆ ಸಲ್ಮಾನ್ ಖಾನ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆದರೆ, ಸಲ್ಮಾನ್ ಖಾನ್ ಅವರು ಈ ಸುದ್ದಿಯನ್ನು ಅಲ್ಲಗೆಳೆದಿದ್ದು, 'ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಹಾಗೂ ಯಾರ ಪಕ್ಷದ ಪರ ಕೂಡಾ ಪ್ರಚಾರ ನಡೆಸುವುದಿಲ್ಲ ಎಂದು ಗುರುವಾರದಂದು ಸ್ಪಷ್ಟಪಡಿಸಿದ್ದಾರೆ.
ಸಲ್ಮಾನ್ ಖಾನ್ ಅವರು ತಮ್ಮ ಆಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿ, ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸುದ್ದಿ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ, ನಾನು ಎಲೆಕ್ಷನ್ ನಲ್ಲಿ ಸ್ಪರ್ಧಿಸುತ್ತಿಲ್ಲ ಹಾಗೂ ರಾಜಕೀಯ ಪಕ್ಷದ ಪರ ಪ್ರಚಾರ ಮಾಡಲ್ಲ' ಎಂದಿದ್ದಾರೆ.

ಪಿಟಿಐ ವರದಿಗಳ ಪ್ರಕಾರ, ಮಧ್ಯಪ್ರದೇಶ ಕಾಂಗ್ರೆಸ್ ನಿಂದ ಸಲ್ಮಾನ್ ಖಾನ್ ಗೆ ಆಫರ್ ಬಂದಿತ್ತು. ಇಂದೋರ್ ನಲ್ಲಿ ಸಲ್ಮಾನ್ ಅವರು ಪಂಕಜ್ ಚತುರ್ವೇದಿ ಪರ ಪ್ರಚಾರ ಮಾಡಲು ಬರುತ್ತಿದ್ದಾರೆ ಎಂದು ಪಂಕಜ್ ಅವರ ವಕ್ತಾರರು ಹೇಳಿದ್ದರು.
Contrary to the rumours I am not contesting elections nor campaigning for any political party..
— Salman Khan (@BeingSalmanKhan) March 21, 2019
ಮತದಾನದ ಅರಿವು ಮೂಡಿಸುವಂತೆ ಸಿನಿತಾರೆಯರಿಗೆ ಪ್ರಧಾನಿ ಮೋದಿ ಕರೆ
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಕುರಿತಂತೆ ಟ್ವೀಟ್ ಮಾಡಿ ಸಲ್ಮಾನ್ ಖಾನ್ ಅವರ ಖಾತೆಗೆ ಟ್ಯಾಗ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ಎಲ್ಲರ ಹಕ್ಕು, ಅರ್ಹರಾದ ಎಲ್ಲಾ ಭಾರತೀಯರು ನಿಮ್ಮ ಹಕ್ಕನ್ನು ಚಲಾಯಿಸಿ, ಸರ್ಕಾರ ಆಯ್ಕೆ ಮಾಡಿ' ಎಂದಿದ್ದಾರೆ. ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರು 2014ರಲ್ಲಿ ಮೋದಿ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿದ್ದ ಸಂದರ್ಭದಲ್ಲಿ ಉರ್ದು ವೆಬ್ ಸೈಟಿಗೆ ಚಾಲನೆ ನೀಡಿದ್ದರು. ನನ್ನ ಮೂಲಕ ಅಂತರ್ಜಾಲಕ್ಕೆ ಚಾಲನೆ ನೀಡಿ, ಮುಸ್ಲಿಂರನ್ನು ಓಲೈಸುವ ಉದ್ದೇಶ ಬಿಜೆಪಿಯವರಿಗೆ ಇಲ್ಲ ಎಂದು ಖುದ್ದು ಸಲೀಂ ಖಾನ್ ಈ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದ್ದರು.
We are a democracy and it is every Indian's right to vote. I urge every eligible Indian to exercise your right and participate in making the Government. https://t.co/WsTdJ3w84O
— Salman Khan (@BeingSalmanKhan) March 21, 2019
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications