ತ್ರಿವಳಿ ತಲಾಖ್: ಪ್ರಧಾನಿ ಮೋದಿಗೆ ಓವೈಸಿ ಎಸೆದ ಗುರುತರ ಚಾಲೆಂಜ್
ಮುಂಬೈ, ಅ 16: ಮಹಾರಾಷ್ಟ್ರ ಅಸೆಂಬ್ಲಿ ಚುನಾವಣಾ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಬುಧವಾರ, ಭಿವಂಡಿಯಲ್ಲಿ ಚುನಾವಣಾ ಸಭೆಯಲ್ಲಿ ಮಾತನಾಡುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಪ್ರಧಾನಿಗೆ ಸವಾಲೊಂದನ್ನು ಎಸೆದರು.
"ತ್ರಿವಳಿ ತಲಾಖ್ ನಿಷೇಧ ಜಾರಿಗೆ ತಂದು ನೀವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದ್ದೇನೆ ಎಂದು ಭಾವಿಸಿದರೆ, ಅದು ನಿಮ್ಮ ತಪ್ಪು ಕಲ್ಪನೆ" ಎಂದು ಓವೈಸಿ ಅಭಿಪ್ರಾಯ ಪಟ್ಟರು.
"ಮುಸ್ಲಿಮರಿಗೆ ನೀವು ನಿಜವಾಗಿಯೂ ಒಳ್ಳೆಯದನ್ನು ಮಾಡಬೇಕೆಂದು ಬಯಸಿದರೆ, ನಿಮ್ಮಲ್ಲಿ ನನ್ನ ಮನವಿಯೊಂದು ಇದೆ" ಎಂದಿರುವ ಒವೈಸಿ, "ಮರಾಠಿಗರಿಗೆ ಮೀಸಲಾತಿ ನೀಡಿದ ನೀವು, ಮುಸ್ಲಿಮರಿಗೇಕೆ ಕೊಟ್ಟಿಲ್ಲ" ಎಂದು ಓವೈಸಿ ಹೇಳಿದರು.

"ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳುವ ನೀವು, ಮರಾಠಿಗರಿಗೆ ಕೊಟ್ಟ ಮೀಸಲಾತಿಯನ್ನು, ಮುಸ್ಲಿಮರಿಗೆ ಕೊಡಿ, ಆಗ ನಿಮ್ಮನ್ನು ಮೆಚ್ಚಿಕೊಳ್ಳುತ್ತೇನೆ" ಎನ್ನುವ ಸವಾಲನ್ನು ಓವೈಸಿ, ಮೋದಿಗೆ ಎಸೆದಿದ್ದಾರೆ.
"ವಿಕಾಸ ಕೇವಲ ಮರಾಠಿಗರಿಗೆ ಮಾತ್ರ, ಮುಸ್ಲಿಮರಿಗೆ ಇಲ್ಲ ಎನ್ನುವುದು ಇದ್ಯಾವ ನ್ಯಾಯ. ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ಸಿಗುವ ಸೌಲಭ್ಯ, ಮುಸ್ಲಿಮರಿಗೂ ಸಿಗಬೇಕು. ಇದು ನಮ್ಮ ಹಕ್ಕು" ಎಂದು ಓವೈಸಿ ಹೇಳಿದರು.
"ಸಾವರ್ಕರ್, ಅತ್ಯಾಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಬೇಕೆಂದು ಪ್ರತಿಪಾದಿಸಿದ್ದವರು. ಶಿವಾಜಿ ಮಹಾರಾಜ್ ಇದನ್ನು ಒಪ್ಪದಿದ್ದಾಗ, ಅವರ ವಿರುದ್ದವೇ ತಿರುಗಿಬಿದ್ದವರು. ಸ್ವತಃ ಬ್ರಿಟಿಷರ ಅತ್ಯಂತ ವಿಧೇಯ ಸೇವಕ ಎಂದು ಸಾವರ್ಕರ್ ತಮ್ಮನ್ನು ತಾವು ಕರೆದುಕೊಂಡಿದ್ದರು" ಎಂದು ಓವೈಸಿ, ಬಿಜೆಪಿ ವಿರುದ್ದ ಕಿಡಿಕಾರಿದ್ದರು.
ಹಿಂದುತ್ವದ ಪ್ರತಿಪಾದಕ ವೀರ್ ಸಾವರ್ಕರ್ ಗೆ ಮರಣೋತ್ತರ 'ಭಾರತ ರತ್ನ' ನೀಡುವುದಾಗಿ ಬಿಜೆಪಿ, ತನ್ನ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications