Get Updates
Get notified of breaking news, exclusive insights, and must-see stories!

ಮುಂಬೈನ ಸಿದ್ದಿವಿನಾಯಕನಿಗೆ 'ಷೇರುದಾನ' ಮಾಡಿ

ಮುಂಬೈ, ಜುಲೈ 19: ನಿಮ್ಮ ಇಷ್ಟ ದೇವರಿಗೆ ನಿಮ್ಮ ಶಕ್ತ್ಯಾನುಸಾರ ಧನ, ಕನಕ, ವಸ್ತ್ರಾದಿಗಳನ್ನು ಅರ್ಪಿಸಿ ಎಂದು ಅರ್ಚಕರು ಪೂಜೆ ಸಂದರ್ಭದಲ್ಲಿ ಹೇಳುವುದು ನಿಮ್ಮ ಕಿವಿಗೂ ಬಿದ್ದಿರಬಹುದು. ಭಕ್ತರು ಏನು ಕೊಟ್ಟರೂ ಪಡೆಯುವ ದೇವರಿಗೆ ಈಗ ಷೇರುಗಳನ್ನು ಅರ್ಪಿಸಬಹುದು.

ಹೌದು, ಇಂಥದ್ದೊಂದು ವ್ಯವಸ್ಥೆಯನ್ನು ಮುಂಬೈನ ಅತ್ಯಂತ ಜನಪ್ರಿಯ ದೇಗುಲ ನೀಡುತ್ತಿದೆ. ಸಿದ್ಧಿವಿನಾಯಕ ದೇಗುಲ ಟ್ರಸ್ಟ್ ತನ್ನ ಭಕ್ತಾದಿಗಳ ಮುಂದೆ ಈ ಆಫರ್ ಇಟ್ಟಿದೆ. ಶ್ರೀಸಿದ್ಧಿವಿನಾಯಕ ದೇಗುಲಕ್ಕೆ ಪ್ರತಿ ತಿಂಗಳು ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇವರಲ್ಲಿ ಅನೇಕ ಉದ್ಯಮಿಗಳು ತಮ್ಮ ಇಷ್ಟದ ದೇವರಿಗೆ ದಾನದತ್ತಿಗಳನ್ನು ಷೇರುಗಳ ಮೂಲಕ ನೀಡುವುದಾಗಿ ಕೋರಿದ್ದರು. [ಅತ್ತೆ ಹೆಸರಿನಲ್ಲಿ ಶಿರಡಿ ಸಾಯಿಬಾಬಾ ಹುಂಡಿಗೆ 40 ಲಕ್ಷ!]

Mumbai : Now offer stocks as donation to Lord Siddhivinayak

ಅದರಂತೆ, ಆನ್ ಲೈನ್ ಮೂಲಕ ದೇವರಿಗೆ ಇಂತಿಷ್ಟು ಷೇರುಗಳನ್ನು ದೇವರಿಗೆ ಅರ್ಪಿಸಬಹುದು. ಈ ಷೇರುಗಳೆಲ್ಲ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಷೇರುಗಳಾಗಿರಬೇಕು ಎಂಬ ನಿಬಂಧನೆಯೂ ಇದೆ. ಮುಂದೊಂದು ದಿನ ಮ್ಯೂಚುವಲ್ ಫಂಡ್, ಚಿನ್ನದ ಮೇಲಿನ ಹೂಡಿಕೆಯನ್ನು ದೇವರ ಪಾದಕ್ಕೆ ಹಾಕಬಹುದು.[ಡಿಮಾಟ್ ಖಾತೆ ತೆರೆದ ತಿರುಪತಿ ತಿಮ್ಮಪ್ಪ]

ದೇಗುಲದ ಟ್ರಸ್ಟಿಗಳು ಎಸ್ ಬಿಐನಲ್ಲಿ ಡಿಮ್ಯಾಂಡ್ ಖಾತೆ ಆರಂಭಿಸಿದ್ದು, ಎಸ್ಬಿಐ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್ ಅಡಿಯಲ್ಲಿ ಬರುವ SBICAP ಸೆಕ್ಯುರಿಟೀಸ್ ಲಿಮಿಟೆಡ್ ನ ಖಾತೆಗೆ ನೇರವಾಗಿ ಷೇರುಗಳನ್ನು ಹಾಕಬಹುದು.

ನೇರವಾಗಿ ಷೇರು ಸರ್ಟಿಫಿಕೆಟ್ ಗಳನ್ನು ದೇವರಿಗೆ ಅರ್ಪಿಸುವ ವ್ಯವಸ್ಥೆ ಇನ್ನೂ ಜಾರಿಯಲ್ಲಿಲ್ಲ. ಆದರೆ, ಆನ್ ಲೈನ್ ಮೂಲಕ ಸುರಕ್ಷಿತವಾಗಿ ದೇವರಿಗೆ ಷೇರುಗಳನ್ನು ಅರ್ಪಿಸಬಹುದು.

ಕೇಂದ್ರ ಸರ್ಕಾರ ಚಿನ್ನದ ಮೇಲಿನ ಯೋಜನೆಗಳಲ್ಲಿ 44 ಕೆಜಿ ಚಿನ್ನವನ್ನು ಈ ದೇಗುಲದ ಟ್ರಸ್ಟ್ ಹೂಡಿಕೆ ಮಾಡಿದೆ. ಪ್ರತಿ ವರ್ಷ 75 ಕೋಟಿ ರು ಅಧಿಕ ಮೊತ್ತದ ನಗದು, 160 ಕೆಜಿಯಷ್ಟು ಚಿನ್ನವನ್ನು ಈ ದೇಗುಲಕ್ಕೆ ಭಕ್ತರು ಅರ್ಪಿಸುತ್ತಿದ್ದಾರೆ. (ಪಿಟಿಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+