ಶಿರಡಿಗೆ ಹತ್ತು ದಿನದಲ್ಲಿ ಹರಿದುಬಂತು 3.09 ಕೋಟಿ ರೂ. ದೇಣಿಗೆ

ಮುಂಬೈ, ನವೆಂಬರ್ 25: ಕಳೆದ ಹತ್ತು ದಿನದಲ್ಲಿ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ 1 ಲಕ್ಷ ಭಕ್ತಾದಿಗಳು ಆಗಮಿಸಿದ್ದು, 3.09 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

ದೇವಾಲಯಗಳು ತೆರೆಯುವುದಕ್ಕೆ ನ.16 ರಂದು ಅನುಮತಿ ನೀಡಿದ್ದ ಸಿಎಂ ಠಾಕ್ರೆ, ಕೊರೊನಾ ರಾಕ್ಷಸ ನಮ್ಮ ನಡುವೆಯೇ ಇದೆ ಎಂಬುದನ್ನು ಮರೆಯಬಾರದು ಎಂದು ಜನತೆಗೆ ಕಿವಿಮಾತು ಹೇಳಿದ್ದರು.

3.09 ಕೋಟಿ ರೂಪಾಯಿ ಕಾಣಿಕೆಯ ಜೊತೆಗೆ 2,85,629 ರೂಪಾಯಿ ಬೆಲೆಬಾಳುವ 64 ಗ್ರಾಮ್ ಚಿನ್ನ, 93,000 ರೂಪಾಯಿ ಬೆಲೆ ಬಾಳುವ 2.8 ಕೆ.ಜಿ ಬೆಳ್ಳಿಯನ್ನು ಶಿರಡಿ ಸಾಯಿಬಾಬಾ ದೇವಾಲಯಕ್ಕೆ ನೀಡಲಾಗಿದೆ.

Over 1 Lakh Devotees Donate Rs 3.09 Crore To Shirdi Temple

ನವೆಂಬರ್ 15 ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿದ್ದರು. ಹೋಳಿ, ಗಣೇಶ ಚತುರ್ಥಿ, ದೀಪಾವಳಿ, ನವರಾತ್ರಿ ಏನೇ ಇರಲಿ ಕೊರೊನಾವನ್ನು ಮನಸ್ಸಿನಲ್ಲಿಟ್ಟುಕೊಳ್ಳಿ ಎಂದು ಹೇಳಿದ್ದರು.

ಕೇಂದ್ರ ಗೃಹ ಸಚಿವಾಲಯವು ಹೊಸ ಕೊವಿಡ್ 19 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೊವಿಡ್ 19 ರೋಗದ ವಿರುದ್ಧ ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆಗಾಗಿ ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಹೊಸ ಮಾನದಂಡಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿದ್ದು, ಡಿಸೆಂಬರ್ 31ರವರೆಗೆ ಜಾರಿಯಲ್ಲಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+