ಥಾಣೆಯ ಕಾರ್ಖಾನೆಯಿಂದ ವಿಷಕಾರಿ ಅನಿಲ ಸೋರಿಕೆ: 34ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು
ಮುಂಬೈ, ಅಕ್ಟೋಬರ್ 12: ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದ ರಾಸಾಯನಿಕ ಕೈಗಾರಿಕಾ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ 34 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ವಿಷಕಾರಿ ಅನಿಲ ಸೋರಿಕೆಯಾದ ಬಳಿಕ ರಾಸಾಯನಿಕ ಕಾರ್ಖಾನೆಯ ಬಳಿ ವಾಸಿಸುವ ಹಲವಾರು ಜನರು ಉಸಿರಾಟದ ತೊಂದರೆ, ಕಣ್ಣುಗಳಲ್ಲಿ ಕಿರಿಕಿರಿ, ವಾಕರಿಕೆ ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ವಿವರಣೆ ನೀಡಿದ ಥಾಣೆ ಮುನ್ಸಿಪಲ್ ಕಾರ್ಪೊರೇಶನ್ ಪ್ರಾದೇಶಿಕ ವಿಪತ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ಸಂತೋಷ್ ಕದಮ್ ಅವರು ಅಂಬರನಾಥದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (ಎಂಐಡಿಸಿ) ಇರುವ ಘಟಕದಲ್ಲಿ ಸಲ್ಫ್ಯೂರಿಕ್ ಆಸಿಡ್ ಬೆಳಿಗ್ಗೆ 10 ಗಂಟೆಗೆ ಸೋರಿಕೆಯಾಗಿದೆ ಎಂದು ದೃಢಪಡಿಸಿದ್ದಾರೆ.
''ಉಸಿರಾಟದ ತೊಂದರೆ ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ 34 ಜನರನ್ನು ಉಲ್ಹಾಸ್ ನಗರದ ಕೇಂದ್ರ ಆಸ್ಪತ್ರೆಗೆ ಸಾಗಿಸಲಾಗಿದೆ. ಅಸ್ವಸ್ಥರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ಬಳಿಕ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಾಸಾಯನಿಕ ಸೋರಿಕೆಯ ಕಾರಣವನ್ನು ಪತ್ತೆಹಚ್ಚಲು ತನಿಖೆ ನಡೆಸಿದ್ದಾರೆ,'' ಎಂದು ಸಂತೋಷ್ ಕದಮ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಬದ್ಲಾಪುರದಲ್ಲಿನ ಪ್ರಕರಣ:
ಕಳೆದ ಕೆಲ ತಿಂಗಳ ಹಿಂದೆ(ಜನವರಿ 4) ಮಹಾರಾಷ್ಟ್ರದ ಬದ್ಲಾಪುರದಲ್ಲಿನ ನೊಬೆಲ್ ಇಂಟರ್ಮಿಡಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ರಾಸಾಯನಿಕ ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯಾಗಿ ಜನರು ಉಸಿರಾಟ ಹಾಗೂ ಕಣ್ಣು ಉರಿ ಸಮಸ್ಯೆಯನ್ನು ಎದುರಿಸಿದ್ದರು. ಮುನ್ನೆಚ್ಚೆರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಆಂಧ್ರಪ್ರದೇಶದ ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣ:
ಕಳೆದ ಕೆಲ ತಿಂಗಳ ಹಿಂದೆ ಆಂಧ್ರಪ್ರದೇಶ ವಿಶಾಖಪಟ್ಟಣಂನಲ್ಲಿ ಎಲ್ಜಿ ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ರಾತ್ರಿಯಿಡೀ ಸ್ಟೈರೀನ್ ಅನಿಲ ಸೋರಿಕೆಯಾಗಿತ್ತು. ಇದರಿಂದಾಗಿ ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, 1,000ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದು ದೇಶವನ್ನೇ ಬೆಚ್ಚಿ ಬೀಳಿಸಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications