ಹೋಟೆಲ್ ನ ಬೇಸ್ ಮೆಂಟ್ ನಲ್ಲಿ ಕಾಣಿಸಿಕೊಂಡಿತು ಚಿರತೆ, ಆಮೇಲೆ ಏನು?
ಮುಂಬೈ, ಫೆಬ್ರವರಿ 20: ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಟ ಕಂಡಿರಬಹುದು. ಅಷ್ಟೇ ಯಾಕೆ ಕೆಲ ತಿಂಗಳ ಹಿಂದೆ ತುಮಕೂರಿನ ಮನೆಯೊಂದಕ್ಕೆ ಚಿರತೆ ನುಗ್ಗಿತ್ತು. ಬುಧವಾರದಂದು ಏನಾಗಿದೆ ಗೊತ್ತೆ? ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಹೆಸರಾಂತ ಶಾಪಿಂಗ್ ಮಾಲ್ ಮತ್ತು ಹೋಟೆಲ್ ನಲ್ಲಿ ಚಿರತೆ ಅಡ್ಡಾಡುತ್ತಿರುವುದು ಕಂಡುಬಂದಿದೆ.
ಕತ್ತಲೆಯ ರಸ್ತೆಗೆ ಓಡುವ ಮುನ್ನ ಮಹಡಿಯ ಹಿಂಭಾಗದಲ್ಲಿ ಚಿರತೆ ಅವಿತಿಟ್ಟುಕೊಂಡಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಅಡ್ಡಾಡದಂತೆ ಸ್ಥಳೀಯ ನಿವಾಸಿಗಳಿಗೆ ಹಾಗೂ ದಾರಿಹೋಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೊದಲಿಗೆ ಚಿರತೆಯು ಕೊರಂ ಮಾಲ್ ನ ವಾಹನ ನಿಲುಗಡೆ ಸ್ಥಳದಲ್ಲಿ ಕಾಣಿಸಿಕೊಂಡಿದೆ. ಆ ನಂತರ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಲಾಗಿದೆ ಎಂದು ಥಾಣೆಯ ಪಾಲಿಕೆ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥರಾದ ಸಂತೋಷ್ ಕದಮ್ ಹೇಳಿದ್ದಾರೆ.

ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಥಾಣೆಯ ಸಮತಾ ನಗರ್ ನಲ್ಲಿರುವ ಮಾಲ್ ತಲುಪಿದ್ದಾರೆ. ಆ ನಂತರ ಎರಡು ಗಂಟೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟಾದರೂ ಚಿರತೆ ಪತ್ತೆಯಾಗಿಲ್ಲ. ಕೊನೆಗೆ ಅಲ್ಲಿನ ಕಾಂಪೌಂಡ್ ಹಾರಿ ಚಿರತೆ ತಪ್ಪಿಸಿಕೊಂಡಿದೆ ಎಂದು ತೀರ್ಮಾನಕ್ಕೆ ಬರಲಾಗಿದೆ ಎಂದು ಕದಮ್ ಹೇಳಿದ್ದಾರೆ.
ಕೆಲವರು ಹೇಳುವಂತೆ, ಆ ನಂತರ ಮಾಲ್ ಹತ್ತಿರದ ಹೋಟೆಲ್ ಬೇಸ್ ಮೆಂಟ್ ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಅದನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications